Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಡಿಕೆಶಿ ಸಿಎಂ ಆಗ್ತಾರೆ : ನೊಣವಿನಕೆರೆ ಸ್ವಾಮೀಜಿಗಳ ಭವಿಷ್ಯಕ್ಕೆ ಕುಮಾರಸ್ವಾಮಿ ಏನಂದ್ರು..?

---Advertisement---

ಕಾಂಗ್ರೆಸ್ ನಲ್ಲಿ ಸಿಎಂ ವಿಚಾರ ಆಗಾಗ ಮುನ್ನೆಲೆಗೆ ಬಂದು ನಿಲ್ಲುತ್ತದೆ. ಡಿಕೆ ಶಿವಕುಮಾರ್ ಬೆಂಬಲಿಗರು ಆದಷ್ಟು ಬೇಗ ನಮ್ಮ ನಾಯಕ ಸಿಎಂ ಆಗಲಿ ಎಂದೇ ಹಾರೈಸುತ್ತಿದ್ದಾರೆ. ಇದರ ನಡುವೆ ನೊಣವಿ‌ಕೆರೆ ಸ್ವಾಮೀಜಿಗಳು ಭವಿಷ್ಯ ನುಡಿದಿದ್ದಾರೆ. ಡಿಕೆ ಶಿವಕುಮಾರ್ ಸಿಎಂ ಆಗಲಿದ್ದಾರೆ ಎಂದಿದ್ದಾರೆ. ಇದಕ್ಕೆ ಮಾಜಿ ಸಿಎಂ ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ.

ಲೋಕಸಭಾ ಚುನಾವಣಾ ಆದ್ಮೇಲೆ ಅರ್ಜಿ ಹಾಕಿಕೊಂಡು ಹೋಗಿದ್ದಾರೆ. ಯಾರೂ ಬೇಕಾದರೂ ಆಗಬಹುದು. ಐವತ್ತು, ಅರವತ್ತು ಜನ ಕರ್ಕೊಂಡು ಬರ್ತೀನಿ, ಏನು ತೊಂದರೆ ಆಗುವುದು ಬೇಡ ಅಂತ ಹೇಳಿ ಹೋಗಿದ್ದಾರಲ್ಲ. ಸಣ್ಣ ಪುಟ್ಟವರು ಹೋಗುವುದಕ್ಕೆ ಆಗುತ್ತಾ..? ಐವತ್ತು ಅರವತ್ತು ಜನ ಕರ್ಕೊಂಡು ಎಂದಿದ್ದಾರೆ.

ಯಾರೋ ಮಾಹಿತಿ ಹೇಳುತ್ತಿದ್ದರು ಮೊನ್ನೆ. ನಿಮ್ಮ ಜೊತೆಗೆ ಬಂದು ಬಿಡ್ತೀನಿ ಅಂತ. ಅಲ್ಲಿಯವರೆಗೂ ರಿಲೀಫ್ ಕೊಡಿ ಅಂತ ಹೋಗಿದ್ದು ಗೊತ್ತೇ ಇದೆ. ಲೋಕಸಭಾ ಚುನಾವಣೆ ಕಳೆಯಲಿ. ಮಹಾರಾಷ್ಟ್ರದಲ್ಲಿ ಆಯ್ತಲ್ಲ ಲ. ಇಲ್ಲಿ ಯಾರೂ ಹುಟ್ಟಿಕೊಳ್ಳುತ್ತಾರೋ ಗೊತ್ತಿಲ್ಲ. ಈ ದೇಶದಲ್ಲಿ ಇವತ್ತಿನ ರಾಜಕಾರಣ ನೋಡಿದರೆ ಏನು ಬೇಕಾದರೂ ನಡೆಯಬಹುದು.

ಇಲ್ಲಿ ಸದ್ಯಕ್ಕೆ ಯಾರಿಗೂ ಪ್ರಾಮಾಣಿಜತೆ ಉಳಿದಿಲ್ಲ. ಅವರವರ ಸ್ವಾರ್ಥಕ್ಕೆ ಏನು ಬೇಕೋ ಅದನ್ನು ಮಾಡಿಕೊಂಡು ಹೋಗುತ್ತಾರೆ. ಇವತ್ತು ಇಲ್ಲಿ ಇರುತ್ತಾರೆ. ಆದರೆ ಅನುಕೂಲ ಆಗಬೇಕು ಎಂದರೆ ಮತ್ತೊಂದು ಕಡೆಗೂ ಹೋಗುತ್ತಾರೆ. ರಾಜಕಾರಣದಲ್ಲಿ ಇದನ್ನೆ ನೋಡಿಕೊಂಡು ಬಂದಿದ್ದೇವೆ. ಅದೇ ರೀತಿ ನಡೆದುಕೊಂಡು ಬಂದಿದೆ ಎಂದಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

ಮಿಸ್ ಮಾಡ್ದೆ ಓದಿ

ಉದ್ಯೋಗ ಸೃಷ್ಟಿ ಹಾಗೂ ಕೌಶಲ್ಯಾಭಿವೃದ್ಧಿಗೆ ವಿಶ್ವವಿದ್ಯಾಲಯಗಳು ಮತ್ತು ಶಿಕ್ಷಣ ಸಂಸ್ಥೆಗಳಲ್ಲಿ ಕೈಗಾರಿಕಾ ಸಹಭಾಗಿತ್ವದ “ಹೈಪರ್-ಆಕ್ಟಿವ್ ಇನ್ನೋವೇಷನ್ ಹಬ್”ಗಳ ನಿರ್ಮಾಣ ಅತ್ಯಗತ್ಯ

ತೆಳ್ಳಗಿದ್ದರೆ ಮಾತ್ರ ಫಿಟ್ ಎಂದರ್ಥವಲ್ಲ: ನಿಜವಾದ ಫಿಟ್‌ನೆಸ್‌ನ ಗುರುತುಗಳೇನು? ತಜ್ಞರ ಸಲಹೆ ಇಲ್ಲಿದೆ

ಕೂದಲು ಉದುರುವಿಕೆ ತಡೆದು, ದಟ್ಟವಾಗಿ ಬೆಳೆಯಲು ಈ ‘ಸೂಪರ್‌ಫುಡ್‌’ಗಳನ್ನು ನಿಮ್ಮ ಆಹಾರದಲ್ಲಿ ತಪ್ಪದೇ ಸೇರಿಸಿ!

ಚಿತ್ರದುರ್ಗ : ಮೊಳಕಾಲ್ಮೂರಿನಲ್ಲಿ ಭೀಕರ ರಸ್ತೆ ಅಪಘಾತ : ಸೇತುವೆಗೆ ಕಾರು ಡಿಕ್ಕಿಯಾಗಿ ಇಬ್ಬರು ಸಾವು!

ಮೊಬೈಲ್‌-ಸ್ಕ್ರೀನ್‌ಗೆ ಬ್ರೇಕ್ ನೀಡಿ: ಮಾನಸಿಕ ಆರೋಗ್ಯ ಕಾಪಾಡಲು ‘ಡಿಜಿಟಲ್ ಡಿಟಾಕ್ಸ್’ ಏಕೆ ಮುಖ್ಯ?

ನೀತಿ ಕಥೆ: ನಂಬಿಕೆದ್ರೋಹಕ್ಕೆ ಕ್ಷಮೆಯಿಲ್ಲ (ಯುವರಾಜ ಮತ್ತು ಕರಡಿಯ ಕಥೆ)

Leave a Comment