Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಡಿಕೆಶಿ ಸಿಎಂ ಆಗ್ತಾರೆ.. ಆದ್ರೆ : ರಾಮಲಿಂಗಾ ರೆಡ್ಡಿ ಹೇಳಿದ್ದೇನು..?

---Advertisement---

ಮೈಸೂರು: ಕಾಂಗ್ರೆಸ್ ನಲ್ಲಿ ಸೆಪ್ಟೆಂಬರ್ ಕ್ರಾಂತಿ ಇನ್ನು ಕೂಡ ಸದ್ದು ಮಾಡ್ತಿದೆ. ಈಗಾಗಲೇ ಹೈಕಮಾಂಡ್ ಮಟ್ಟದಲ್ಲಿ ಚರ್ಚೆಯಾಗ್ತಾ ಇದೆ. ಡಿಕೆ ಶಿವಕುಮಾರ್ ಸಿಎಂ ಆಗುವ ಬಗ್ಗೆ ಇದೀಗ ಸಚಿವ ರಾಮಲಿಂಗಾ ರೆಡ್ಡಿ ಅವರು ಮಾತನಾಡಿದ್ದಾರೆ.

ಯಾವ ಕ್ರಾಂತಿಯೂ ಇಲ್ಲ. ಎಲ್ಲಾ ಕ್ರಾಂತಿಗೂ ಮೊನ್ನೆ ಮುಖ್ಯಮಂತ್ರಿಗಳು ಫುಲ್ ಸ್ಟಾಪ್ ಹಾಕಿದ್ದಾರೆ. ನಮ್ಮ ಉಪಮುಖ್ಯಮಂತ್ರಿಗಳು ಕೂಡ ಪಕ್ಷ ಏನು ಹೇಳುತ್ತೋ ಅದನ್ನ ಮಾಡ್ತೀನಿ ಅಂತ ಹೇಳಿದ್ದಾರೆ. ಯಾವ ಕ್ರಾಂತಿಯೂ ಇಲ್ಲ ಏನು ಇಲ್ಲ. ಇನ್ಮೇಲೆ ಪಕ್ಷದ ಮುಖಂಡರು, ಅವರು ಮಂತ್ರಿಗಳಾಗಿರಬಹುದು, ಶಾಸಕರಾಗಿರಬಹುದು ಅಥವಾ ಮುಖಂಡರಿರಬಹುದು ಅವರ್ಯಾರು ಕೂಡ ಈ ಬಗ್ಗೆ ಮಾತಾಡದೆ ಇದ್ದರೆ ನಮ್ಮ‌ಪಕ್ಷಕ್ಕೆ ಒಳ್ಳೆಯದು ಎಂದಿದ್ದಾರೆ.

 

ಇದೇ ವೇಳೆ ಭೂಸ್ವಾಧೀನದ ಬಗ್ಗೆ ಮಾತನಾಡಿದ ರಾಮಲಿಂಗಾ ರೆಡ್ಡಿ ಅವರು, ಅದರ ಬಗ್ಗೆ ಮುಖ್ಯಮಂತ್ರಿಗಳು ರೈತರನ್ನೆಲ್ಲಾ ಕರೆದು ಮಾತನಾಡಿದ್ದಾರೆ. ತೀರ್ಮಾನ ತೆಗೆದುಕೊಳ್ಳುತ್ತಾರೆ. ಅದು ನನ್ನ ಇಲಾಖೆಗೆ ಬರಲ್ಲ. ಮಾನ್ಯ ಮುಖ್ಯಮಂತ್ರಿಗಳು, ಎಂಬಿ ಪಾಟೀಲ್ ಅವರು ರೈತರ ಜೊತೆಗೆ ಮಾತನಾಡಿದ್ದಾರೆ ಎಂದಿದ್ದಾರೆ.

ಇದೇ ವೇಳೆ ಸುರ್ಜೆವಾಲ ಅವರ ಜೊತೆಗಿನ ಸಭೆ ಬಗ್ಗೆ ಮಾತನಾಡಿ, ಸುರ್ಜೆವಾಲ ಅವರು ಶಾಸಕರ ಜೊತೆಗೆ ಏನು ಮಾತನಾಡಿಕೊಂಡಿದ್ದಾರೋ ಏನೋ ನಮಗೇಗೆ ಗೊತ್ತಾಗುತ್ತೆ. ನಮಗೆ ಗೊತ್ತಾಗಲಿಲ್ಲ ಅಂದ್ರೆ ನಿಮಗೇಗೆ ಗೊತ್ತಾಗುತ್ತೆ. ಶಿವಕುಮಾರ್ ಅವರು ಹುಟ್ಟು ಕಾಂಗ್ರೆಸ್. ಅವರು ಪಕ್ಷದ ನಿಷ್ಠಾವಂತರು. ಪಕ್ಷ ಏನು ಜವಾಬ್ದಾರಿ ಕೊಟ್ಟಿದೆ ಅದನ್ನ ಅವರು ಮಾಡಿಕೊಟ್ಟವರೆ. ಒಂದೇ ಸಲ ಸಿಕ್ಕಿಬಿಡುತ್ತಾ..? ಒಬ್ಬೊಬ್ಬರಿಗೆ ಒಂದೊಂದು ಸಲ ಸಿಗುತ್ತೆ. ಕಾಂಗ್ರೆಸ್ ಸಮುದ್ರ ಇದ್ದಂಗೆ. ಅವರೊಬ್ಬರ ಜನಪ್ರಿಯ ನಾಯಕರಾಗಿದ್ದರು. ಸಿದ್ದರಾಮಯ್ಯ ಅವರು ಒಳ್ಳೆಯದ್ದನ್ನ ಮಾಡಿದ್ದಾರಾ ಇಲ್ವಾ..? ಡೆಲ್ಲಿಯಲ್ಲಿ ನಾಲ್ಕು ಗೋಡೆಗಳ ನಡುವೆ ಏನು ಆಗಿದ್ಯೋ ನನಗೆ ಗೊತ್ತಿಲ್ಲ ಎಂದಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment