Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಭವಾನಿ ರೇವಣ್ಣ ಅವರಿಗೆ ಹೇಳೋರು ಕೇಳೋರು ಇಲ್ವಾ..? : ದೊಡ್ಡಗೌಡರ ಸೊಸೆ ಪರ ಮಾಜಿ ಸಚಿವ ಈಶ್ವರಪ್ಪ ಬ್ಯಾಟ್..!

Facebook
Twitter
Telegram
WhatsApp

ಬಾಗಲಕೋಟೆ: ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷವನ್ನು ಸೋಲಿಸಲೇಬೇಕೆಂದು ಹೋರಾಡುತ್ತಿರುವ ಬಿಜೆಪಿ ನಾಯಕರು ಅದ್ಯಾಕೋ ಎರಡು ದಿನದಿಂದ ದೊಡ್ಡಗೌಡರ ಸೊಸೆಗೆ ನಾವೇ ಟಿಕೆಟ್ ಕೊಡುತ್ತೀವಿ ಅಂತ ಹಿಂದೆ ಬಿದ್ದಿದ್ದಾರೆ. ಇದು ವ್ಯಂಗ್ಯವೋ.. ಸತ್ಯವೋ ತಿಳಿಯುತ್ತಿಲ್ಲ.

ಭವಾನಿ ರೇವಣ್ಣ ಅವರು ಈ ಬಾರಿಯ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ. ಅಷ್ಟೇ ಅಲ್ಲ ಕ್ಷೇತ್ರವನ್ನು ಅವರೇ ಘೋಷಣೆ ಮಾಡಿಕೊಂಡಿದ್ದಾರೆ. ಹಾಸನದಲ್ಲಿ ಈ ಬಾರಿ ಬಿಜೆಪಿಗೆ ವಿರುದ್ಧವಾಗಿ ಸ್ಪರ್ಧಿಸುವುದಾಗಿ ತಿಳಿಸಿದ್ದಾರೆ. ಆದರೆ ಕುಮಾರಸ್ವಾಮಿ ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ. ಹಾಸನದಲ್ಲಿ ಅವರೇ ನಿಲ್ಲಬೇಕು ಎಂದಿಲ್ಲ ಎಂದು ತಮ್ಮ ತೀರ್ಮಾನ ಹೇಳಿದ್ದಾರೆ. ಈಗ ದೊಡ್ಡಗೌಡರ ಅಂಗಳದಲ್ಲಿ ಬಾಲ್ ಇದೆ. ಇದೆ. ತೀರ್ಮಾನ ಅವರೇ ಮಾಡಬೇಕಿದೆ.

ಆದರೆ ಅದಕ್ಕೂ ಮುನ್ನ ಜೆಡಿಎಸ್ ಕುಟುಂಬದ ಒಳಗಿನ ವಿಚಾರಕ್ಕೆ ಬಿಜೆಪಿ ನಾಯಕರು ಪ್ರತಿಕ್ರಿಯೆ ನೀಡುತ್ತಿದ್ದಾರೆ. ಅದರಲ್ಲೂ ನಾವೇ ಟಿಕೆಟ್ ನೀಡುತ್ತೀವಿ ಎನ್ನುತ್ತಿದ್ದಾರೆ. ನಿನ್ನೆಯಷ್ಟೇ ಸಿಟಿ ರವಿ ಟಿಕೆಟ್ ನೀಡುವುದಾಗಿ ತಿಳಿಸಿದ್ದರು. ಈಗ ಅದೇ ವಿಚಾರಕ್ಕೆ ಮಾಜಿ ಸಚಿವ ಈಶ್ವರಪ್ಪ ಮಾತನಾಎಇದ್ದಾರೆ.

ಬಾಗಲಕೋಟೆಯಲ್ಲಿ ಈ ವಿಚಾರವಾಗಿ ಮಾತನಾಡಿದ ಈಶ್ವರಪ್ಪ, “ರಾಜಕೀಯ ಸ್ಥಾನಮಾನಕ್ಕಾಗಿ ಇಂದು ಯಾರು..? ಎಲ್ಲಿ ಬೇಕಾದರೂ ನಿಲ್ಲಬಹುದು. ಈ ಮಧ್ಯೆ ಭವಾನಿ ರೇವಣ್ಣ ನಾನೇ ಕ್ಯಾಂಡಿಡೇಟ್ ಅಂತಿದ್ದಾರೆ ಅಷ್ಟೆ. ಹಾಗಾದರೆ ಅವರಿಗೆ ಪಕ್ಷ ಇಲ್ಲವಾ..? ಹೇಳೋರು ಕೇಳೋರು ಯಾರು ಇಲ್ಲವಾ..? ಅನಿತಾ ಕುಮಾರಸ್ವಾಮಿ ಅವರು ಅವರ ಮಗನಿಗೆ ಕ್ಷೇತ್ರ ನಿಗದಿ ಮಾಡ್ತಾರೆ. ಅವರವರೇ ತಮ್ಮನ್ನ, ತಮ್ಮ‌ ಮಕ್ಕಳನ್ನು ಚುನಾವಣಾ ಅಭ್ಯರ್ಥಿಗಳೆಂದು ಘೋಷಣೆ ಮಾಡಿದರೆ ಹೇಗೆ..? ಹೀಗಾದ್ರೆ ಒಂದು ಪಕ್ಷ ಅಂತ ಯಾಕಿರಬೇಕು..? ಒಂದು ಚುನಾವಣಾ ಸಮಿತಿ ಅಂತ ಯಾಕಿರಬೇಕು..? ಇದು ಒಳ್ಳೆಯ ಬೆಳವಣಿಗೆಯಲ್ಲ” ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಎಳನೀರು ? ನಿಂಬೆ ರಸ ? ಸುಡುವ ಬಿಸಿಲಿನಲ್ಲಿ ಯಾವ ಪಾನೀಯ ಉತ್ತಮ….!

ಸುದ್ದಿಒನ್ : ಬೇಸಿಗೆಯಲ್ಲಿ ಹೆಚ್ಚುತ್ತಿರುವ ತಾಪಮಾನದಿಂದ ಅನೇಕರು ನಿರ್ಜಲೀಕರಣದ ಸಮಸ್ಯೆಯನ್ನು ಎದುರಿಸುತ್ತಾರೆ. ಈ ಸಮಯದಲ್ಲಿ ಕಾಲಕಾಲಕ್ಕೆ ಹೈಡ್ರೇಟಿಂಗ್(ನಿರ್ಜಲೀಕರಣ) ಪಾನೀಯವನ್ನು ಕುಡಿಯಲು ವೈದ್ಯರು ಸಲಹೆ ನೀಡುತ್ತಾರೆ. ಹೈಡ್ರೇಟಿಂಗ್ ಪಾನೀಯಗಳ ವಿಷಯಕ್ಕೆ ಬಂದರೆ, ಜನರ ಮನಸ್ಸಿಗೆ ಮೊದಲು

Aadhaar Card Updates : ಆಧಾರ್ ಕಾರ್ಡ್ ನಲ್ಲಿ ಈ ವಿವರಗಳನ್ನು ಎಂದಿಗೂ ಬದಲಾಯಿಸಲಾಗುವುದಿಲ್ಲ..

ಸುದ್ದಿಒನ್ : ಇಂದಿನ ಡಿಜಿಟಲ್ ಯುಗದಲ್ಲಿ, ನೀವು ಬ್ಯಾಂಕ್ ಖಾತೆ ತೆರೆಯಲು, ಗ್ಯಾಸ್ ಸಂಪರ್ಕವನ್ನು ಪಡೆಯಲು ಅಥವಾ ಹೊಸ ಸಿಮ್ ಕಾರ್ಡ್ ಖರೀದಿಸಲು ಆಧಾರ್ ಕಾರ್ಡ್ ಕಡ್ಡಾಯವಾಗಿದೆ. ಈ ಕಾರ್ಡ್ ಪ್ರಸ್ತುತ ಭಾರತೀಯ ಪೌರತ್ವಕ್ಕೆ

ಈ ರಾಶಿಗಳ ಗೃಹ ಕಟ್ಟಡ ಉದ್ಯಮದಾರಿಗೆ ಆರ್ಥಿಕ ಚೇತರಿಕೆ

ಈ ರಾಶಿಗಳ ಗೃಹ ಕಟ್ಟಡ ಉದ್ಯಮದಾರಿಗೆ ಆರ್ಥಿಕ ಚೇತರಿಕೆ, ಶುಕ್ರವಾರ ರಾಶಿ ಭವಿಷ್ಯ -ಏಪ್ರಿಲ್-19,2024 ಸೂರ್ಯೋದಯ: 06:00, ಸೂರ್ಯಾಸ್ತ : 06:29 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ , ಸಂವತ್2079,ಚೈತ್ರಮಾಸ,ಶುಕ್ಲ ಪಕ್ಷ,

error: Content is protected !!