Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ವಯೋ ನಿವೃತ್ತಿ ನಂತರ ಸಿಬ್ಬಂದಿ ಕರ್ತವ್ಯದಲ್ಲಿ ಮುಂದುವರಿಯುವುದು ಬೇಡ : ರವಿಕುಮಾರ್

---Advertisement---

ಸುದ್ದಿಒನ್, ಚಳ್ಳಕೆರೆ, ಫೆಬ್ರವರಿ. 21 : ತಾಲ್ಲೂಕಿನ ನಾಯಕನಹಟ್ಟಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಗೌರವಧನದ ಆಧಾರದ ಮೇಲೆ ಕರ್ತವ್ಯ ನಿರ್ವಹಿಸುತ್ತಿದ್ದ ಸಿಬ್ಬಂದಿಯನ್ನು ಕೂಡಲೇ ಕರ್ತವ್ಯದಿಂದ ವಿಮುಕ್ತಿಗಳಿಸುವಂತೆ ಸಂಘದ ಅಧ್ಯಕ್ಷ ಜೆ.ಆರ್. ರವಿಕುಮಾರ್ ಅಧ್ಯಕ್ಷತೆಯಲ್ಲಿ ಶುಕ್ರವಾರ ನಡೆದ ಸಾಮಾನ್ಯ ಸಭೆಯಲ್ಲಿ ತೀರ್ಮಾನಿಸಲಾಯಿತು.

ಇಲ್ಲಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಪಿ.ವಿರುಪಾಕ್ಷಪ್ಪ ಮೂರು ವರ್ಷ ಹಿಂದೆಯೇ ವಯೋ ನಿವೃತ್ತಿ ಹೊಂದಿದ್ದಾರೆ. ಹಾಗೆಯೇ ಅಕೌಂಟೆಂಟ್ ಅಮೃತವಾಣಿ ಒಂದು ವರ್ಷದ ಹಿಂದೆಯೇ ವಯೋ ನಿವೃತ್ತಿ ಹೊಂದಿದ್ದರೂ ಕರ್ತವ್ಯದಲ್ಲಿ ಮುಂದುವರೆದು ವೇತನ ಪಡೆದುಕೊಂಡಿದ್ದಾರೆ. ಹೀಗಾಗಿ ಸರ್ಕಾರದ ಅಧಿಸೂಚನೆ ಸಂಖ್ಯೆ 123 ಸಿಎಲ್‍ಎಂ 2016 ದಿ.29-07-2017ರ ಆದೇಶದಂತೆ ವಯೋ ನಿವೃತ್ತಿ ನಂತರ ನೇಮಕಗೊಂಡ ಅಧಿಕಾರಿ ಮತ್ತು ಸಿಬ್ಬಂದಿಗಳ್ನು ತೆರವುಗೊಳಿಸಬೇಕಿದೆ. ಆದ್ದರಿಂದ ಕೂಡಲೇ ಈ ಇಬ್ಬರಿಂದ ಇಲ್ಲಿವರೆಗೂ ಪಡೆದ ವೇತನಕ್ಕೆ ಬಡ್ಡಿ ಸಮೇತ ವಸೂಲಿ ಮಾಡಬೇಕೆಂದು ಅಧ್ಯಕ್ಷ ಜೆ.ಆರ್.ರವಿಕುಮಾರ್ ವಿಷಯ ಮಂಡಿಸಿದರು. ಇದಕ್ಕೆ ಸರ್ವಸದಸ್ಯರು ಒಪ್ಪಿಗೆ ಸೂಚಿಸಿದರು.

ಸಂಘದಲ್ಲಿ 2890 ಷೇರುದಾರರಿದ್ದು. ಮುಂದಿನ ದಿನಗಳಲ್ಲಿ ಷೇರುದಾರರ ಸಂಖ್ಯೆ ಹೆಚ್ಚಳ ಮಾಡಬೇಕು. ಪಡಿತರ ಪಡೆಯಲು ಹಾಗೇ ಸಾಲ ಪಡೆದ ರೈತರ ಮಾಹಿತಿ ಪಡೆದು ಸಕಾಲದಲ್ಲಿ ಸಾಲವನ್ನು ಮರುಪಾವತಿಸುವಂತೆ ಪ್ರೇರೇಪಣೆ ಮಾಡಲಾಗುವುದು. ನಾಯಕನಹಹಟ್ಟಿ ಪಟ್ಟಣದ ಹಲವು ವಾರ್ಡ್‍ಗಳ ಫಲಾನುಭವಿಗಳಿಗೆ ತಿಂಗಳಲ್ಲಿ ಹದಿನೈದು ದಿನಗಳವರೆಗೂ ನಿರಂತರವಾಗಿ ವಿಳಂಬವಾಗದೇ ಸಕಾಲಕ್ಕೆ ಪಡಿತರ ಒದಗಿಸಬೇಕು. ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಉಳಿತಾಯ ಖಾತೆಯು ಕೆನರಾ ಬ್ಯಾಂಕಿನಲ್ಲಿದ್ದು, ಅದನ್ನು ಕೂಡಲೇ ರದ್ದುಪಡಿಸಿ ಆ ಖಾತೆಯನ್ನು ಪಟ್ಟಣದಲ್ಲಿರುವ ಸಿಡಿಸಿಸಿ ಬ್ಯಾಂಕ್‍ಗೆ ವರ್ಗಾಯಿಸುವಂತೆ ಅನುಮೋಧಿಸಲಾಯಿತು.

ಈ ಸಂದರ್ಭದಲ್ಲಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಜೆ.ಆರ್.ರವಿಕುಮಾರ್, ಉಪಾಧ್ಯಕ್ಷ ಕಷ್ಣಪ್ಪ, ನಿರ್ಧೇಶಕರಾದ ನೀಲಮ್ಮ, ಸಿದ್ದಮ್ಮ, ಜಿ.ನಿಂಗಪ್ಪ, ಅಕ್ರಂವುಲ್ಲಾ, ಜಿ.ಪಿ.ಬಸವರಾಜ್, ಪಾಲಯ್ಯ, ಬೋಸೇರಂಗಪ್ಪ, ಸೋಮ್ಲಾನಾಯ್ಕ್, ಹಾಯ್ಕಲ್ ರಾಜಯ್ಯ ಸಿಡಿಸಿಸಿ ಬ್ಯಾಂಕ್ ಮೇಲ್ವೀಚಾರಕ ನವೀನ್, ಸಂಘದ ಮುಖ್ಯಕಾರ್ಯನಿರ್ವಹಣಾಧಿಕಾರಿ ಸುರೇಶ್ ಉಪಸ್ಥಿತರಿದ್ದರು.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...