ಚಿತ್ರದುರ್ಗ. ಏ.29: ಚಿತ್ರದುರ್ಗ ತಾಲ್ಲೂಕಿನ ಹಲವು ಕಡೆ ಅನುದಾನ ರಹಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳು ಸರ್ಕಾರದಿಂದ ಸೂಕ್ತ ಮಾನ್ಯತೆ ಪಡೆಯದೆ ಶಾಲೆ ನಡೆಸುತ್ತಿವೆ. ದಯಮಾಡಿ ಪೋಷಕರು ಹೊಸದಾಗಿ ಶಾಲೆಗೆ ಮಕ್ಕಳನ್ನು ಸೇರಿಸುವಾಗ ಅಥವಾ ಒಂದು ಶಾಲೆಯಿಂದ ಇನ್ನೊಂದು ಶಾಲೆ ಮಕ್ಕಳನ್ನು ದಾಖಲಿಸುವಾಗ ಎಚ್ಚರಿಕೆಯನ್ನು ವಹಿಸಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ನಾಗಭೂಷನ್ ತಿಳಿಸಿದ್ದಾರೆ.
ತಾಲ್ಲೂಕಿನಲ್ಲಿ ರಾಜ್ಯ ಪಠ್ಯಕ್ರಮದ 77, ಸಿಬಿಎಸ್ಸಿ ಪಠ್ಯಕ್ರಮದ 05 ಮತ್ತು ಸಿ.ಐ.ಎಸ್.ಸಿ.ಇ ಪಠ್ಯಕ್ರಮದ 3 ಶಾಲೆಗಳು ಅಧಿಕೃತವಾಗಿ ನೊಂದಣಿಯಾಗಿವೆ. ಈ ಶಾಲೆಗಳ ಹೆಸರು, ಆಡಳಿತ ಮಂಡಳಿ ವಿಳಾಸ, ಶಾಲಾ ವಿಳಾಸ, ಡೈಸ್ ಸಂಖ್ಯೆ, ನೊಂದಣಿ ಪಡೆದ ವರ್ಷ, ನೊಂದಣಿ ಪಡೆದ ಮಾಧ್ಯಮ, ಮಾನ್ಯತೆ ನವೀಕರಣ, ಅನುಮತಿ ಪಡೆದ ತರಗತಿಗಳು, ಪಠ್ಯಕ್ರಮ ವಿವರಗಳನ್ನು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯಲ್ಲಿ ಸಾರ್ವಜನಿಕರ ತಿಳುವಳಿಕೆಗಾಗಿ ಪ್ರಕಟ ಮಾಡಲಾಗಿದೆ.

ಈ ಶಾಲೆಗಳನ್ನು ಹೊರತುಪಡಿಸಿ ಇತರೆ ಯಾವುದೇ ಶಾಲೆಗಳಿಗೆ ಪೋಷಕರು ಮಕ್ಕಳನ್ನು ದಾಖಲಿಸಿದಲ್ಲಿ ಶಾಲಾ ಶಿಕ್ಷಣ ಇಲಾಖೆ ಯಾವುದೇ ರೀತಿಯಾ ಜವಾಬ್ದಾರಿಯಾಗಿರುವುದಿಲ್ಲ. ಆಯಾ ಪೋಷಕರೇ ಜವಾಬ್ದಾರಿಯಾಗಿರುತ್ತಾರೆ. ಆದ್ದರಿಂದ ಪೋಷಕರು ಅಧಿಕೃತವಾಗಿ ಮಾನ್ಯತೆ ಪಡೆದ ಶಾಲೆಗಳ ಬಗ್ಗೆ ಮಾಹಿತಿ ಪಡೆದು ಮಕ್ಕಳನ್ನು ದಾಖಲಿಸುವಂತೆ ಕ್ಷೇತ್ರ ಶಿಕ್ಷಣಾಧಿಕಾರಿ ಎಸ್. ನಾಗಭೂಷಣ್ ಕೋರಿದ್ದಾರೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

















