Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ಮಂಡಿನೋವಿನ ಸಮಸ್ಯೆಗೆ ಈ ಯೋಗಾಸನಗಳನ್ನು ಮಾಡಿ

---Advertisement---

ಇತ್ತಿಚಿನ ದಿನಗಳಲ್ಲಿ ಮಂಡಿ‌ನೋವು ಸರ್ವೇ ಸಾಮಾನ್ಯವಾಗಿ ಬಿಟ್ಟಿದೆ. ವಯಸ್ಸಾದವರಲ್ಲಿ ಕಾಣಿಸಿಕೊಳ್ಳುತ್ತಿದ್ದ ಮಂಡಿನೋವು, ಇದೀಗ ಯುವಕರಲ್ಲೂ ಕಾಣಿಸುತ್ತಿದೆ. ಇದು ಸಹಜವಾಗಿಯೇ ಆತಂಕಕ್ಕೆ ಕಾರಣವಾಗಿದೆ. ಆದರೆ ಈ ರೀತಿ ಚಿಕ್ಕ ವಯಸ್ಸಿನಲ್ಲಿಯೇ ಮೂಳೆಗಳ ಸಮಸ್ಯೆ ಕಾಡಿದರೆ ಮುಂದಿನ ದಿನಗಳಲ್ಲಿ ಹೆಚ್ಚಿನ ಸಮಸ್ಯೆ ಉಂಟಾಗುತ್ತದೆ. ಆ ಸಮಸ್ಯೆಗಳಿಗೆ ಪರಿಹಾರ ಕಂಡು ಕೊಳ್ಳಲು ಕೆಲವೊಂದು ಯೋಗಾಸನಗಳಿಂದ ಮೂಳೆಗಳ ನೋವಿಗೆ ಪರಿಹಾರ ಸಿಗಲಿದೆ. ಮಂಡಿನೋವಿಗೆ ವಿಟಮಿನ್ ಡಿ ಕೊರತೆ ಕೊರತೆಯು ಕಾರಣ. ಅಷ್ಟೇ ಅಲ್ಲದೆ ಮೂಳೆಗಳ ಸೋಂಕು, ಮಂಡಿಗಳಿಗೆ ಉಂಟಾದ ಗಾಯ, ಬೊಜ್ಜು, ಮೆಟಬಾಲಿಕ್ ಕಾಯಿಲೆಯಿಂದ ಮಂಡಿನೋವು ಕಾಣಿಸಿಕೊಳ್ಳುತ್ತದೆ.

ತಾಡಾಸನ, ತ್ರಿಕೋನಾಸನ, ವೀರಭದ್ರಾಸನ, ವೃಕ್ಷಾಸನ ಮಾಡುವುದರಿಂದ ಮೂಳೆಗಳು ಆರೋಗ್ಯವಾಗಿರುತ್ತವೆ. ತ್ರಿಕೋಸಾನದಿಂದ ನಿಮ್ಮ ಕಾಲುಗಳ ಮಾಂಸ ಖಂಡಗಳನ್ನು ಬಲಪಡಿಸುವ ಯೋಗಾಸನವಾಗಿದೆ. ಮಂಡಿಗಳ ನೋವನ್ನು ಇದು ಬಹಳ ಸುಲಭವಾಗಿ ದೂರ ಮಾಡುತ್ತೆ. ತಾಡಾಸನ ಮಾಡುವುದರಿಂದ ಸಂಪೂರ್ಣ ಕಾಲುಗಳ ಬಲವನ್ನು ಹೆಚ್ಚಿಸುವ ಮತ್ತು ತೊಡೆಗಳ ಭಾಗದಲ್ಲಿ ಮಾಂಸ ಖಂಡಗಳನ್ನು ಸಮರ್ಥಗೊಳಿಸುವ ಯೋಗಾಸನ ಇದಾಗಿದೆ. ದೇಹದ ತೂಕವನ್ನು ಉತ್ತಮವಾಗಿ ನಿರ್ವಹಣೆ ಮಾಡುವುದರ ಜೊತೆಗೆ ಮಂಡಿಗಳ ಭಾಗದಲ್ಲಿ ಸದೃಢತೆಯನ್ನು ಹೆಚ್ಚಿಸುತ್ತದೆ.

ವೃಕ್ಷಾಸನ ಯೋಗಾಸನ ನಿಮ್ಮ ದೇಹವನ್ನು ಸಮತೋಲನ ಗೊಳಿಸುವುದು ಮಾತ್ರವಲ್ಲದೆ ಕಾಲುಗಳನ್ನು ಬಲಪಡಿಸುತ್ತದೆ. ಹೀಗಾಗಿ ಸಾಧ್ಯವಾದಷ್ಟು ನಿಮ್ಮ ಕಾಲುಗಳ ಭಾಗದ ಮಾಂಸ ಖಂಡಗಳು ಸಮತೋಲನವಾಗಿರುವಂತೆ ನೋಡಿಕೊಳ್ಳಿ. ಸೇತುಬಂಧಾಸನ ಯೋಗಾಸನ ನಿಮ್ಮ ತೊಡೆಗಳನ್ನು ಮತ್ತು ಸೊಂಟವನ್ನು ಸದೃಢ ಪಡಿಸುತ್ತದೆ. ಈ ಯೋಗಾಸನ ಮಾಡುವುದರಿಂದ ನಿಮ್ಮ ಮಂಡಿಗಳ ಭಾಗದ ಮಾಂಸ ಖಂಡಗಳು ಬಲಗೊಳ್ಳುತ್ತವೆ ಮತ್ತು ಮಂಡಿಗಳ ನೋವು ದೂರವಾಗುತ್ತದೆ. ನಿಮ್ಮ ದೇಹದ ತೂಕ ವನ್ನು ನಿಯಂತ್ರಣ ಮಾಡಲು ಸಹ ಈ ಯೋಗಾಸನ ನೆರವಾಗುತ್ತದೆ.

ಉತ್ಕಟಾಸನ ಭಂಗಿಯಿಂದ ನಿಮ್ಮ ಮಂಡಿಗಳ ನೋವು ಶೀಘ್ರವೇ ಗುಣವಾಗುತ್ತದೆ. ಮಂಡಿಗಳ ಹಾಗೂ ತೊಡೆಗಳ ಭಾಗದ ಮಾಂಸ ಖಂಡಗಳು ಸದೃಢ ವಾಗುತ್ತವೆ. ಬಾಲಾಸನ ಮಾಡುವುದರಿಂದ ಮಂಡಿಯ ಅಸ್ವಸ್ಥತೆಯನ್ನು ದೂರ ಮಾಡುವಲ್ಲಿ ನೆರವಾಗುತ್ತದೆ. ಇದು ನಿಮ್ಮ ಮಂಡಿಯ ಭಾಗದಲ್ಲಿ ಕಂಡುಬರುವ ನೋವನ್ನು ದೂರ ಮಾಡುವಲ್ಲಿ ನಿಮಗೆ ಸಹಾಯ ಮಾಡುತ್ತದೆ. ಹೀಗಾಗಿ ಮಂಡಿ ನೋವಿಗೆ ಹಲವು ರೀತಿಯ ಯೋಗಗಳು ಸುಲಭ ಪರಿಹಾರ ನೀಡಲಿದೆ.

ಪ್ರಮುಖ ಸೂಚನೆ : ಈ ವಿವರಗಳನ್ನು ತಜ್ಞರು ಮತ್ತು ಅಧ್ಯಯನಗಳ ಪ್ರಕಾರ ಒದಗಿಸಲಾಗಿದೆ. ಈ ಲೇಖನವು ನಿಮ್ಮ ಮಾಹಿತಿಗಾಗಿ ಮಾತ್ರ. ಯಾವುದೇ ಸಣ್ಣ ಆರೋಗ್ಯ ಸಮಸ್ಯೆಗಳಿಗೆ ವೈದ್ಯರನ್ನು ಸಂಪರ್ಕಿಸುವುದು ಉತ್ತಮ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment