Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಉತ್ತರ ನೀಡುವ ದಮ್ಮು ತಾಕತ್ತು ಇದೆಯೇ ? : ಕಾಂಗ್ರೆಸ್ ನಿಂದ ಬಿಜೆಪಿ ಹಾಗೂ ಜೆಡಿಎಸ್ ಗೆ ಪ್ರಶ್ನೆಗಳ ಸುರಿಮಳೆ

---Advertisement---

 

 

ಬೆಂಗಳೂರು: ರಾಜ್ಯದಲ್ಲಿ ಹನುಮ ಧ್ವಜದ ವಿಚಾರ ಬಾರೀ ಸದ್ದು ಮಾಡುತ್ತಿದೆ. ಇದರಿಂದ ಸಾಕಷ್ಟು ಪ್ರತಿಭಟನೆಗಳು ನಡೆಯುತ್ತಿವೆ. ಹನುಮ ಧ್ವಜ ವಿಚಾರಕ್ಕೆ ಬಿಜೆಪಿ ನಾಯಕರ ಬೆಂಬಲವೂ ಇದೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ವಾಗ್ದಾಳಿ ನಡೆಸಿದೆ. ಬಿಜೆಪಿ ಹಾಗೂ ಜೆಡಿಎಸ್ ಪಕ್ಷಕ್ಕೆ ಪ್ರಶ್ನೆಗಳ ಸುರಿಮಳೆಯನ್ನೇ ಸುರಿಸಿದೆ.

 

ಬಿಜೆಪಿಯ ಲೋಕಸಭಾ ಚುನಾವಣೆಯ ತಾಲೀಮು ಮಂಡ್ಯದಲ್ಲಿ ಶುರುವಾಗಿದೆ, ಇದಕ್ಕೆ ಸೋಕಾಲ್ಡ್ ಜಾತ್ಯತೀತ ಜನತಾ ದಳ ಪೂರ್ಣ ಸಹಕಾರ ನೀಡುತ್ತಿದೆ. ಆರ್ ಅಶೋಕ್ ಹಾಗೂ ಹೆಚ್ ಡಿ ಕುಮಾರಸ್ವಾಮಿ ಅವರಿಗೆ ದಮ್ಮು ತಾಕತ್ತಿದ್ದರೆ ಈ ಪ್ರಶ್ನೆಗಳಿಗೆ ಉತ್ತರಿಸಲಿ ಎಂದು ಟ್ವೀಟ್ ಮೂಲಕ ಸಾಲು ಸಾಲು ಪ್ರಶ್ನೆಗಳನ್ನು ಹಾಕಲಾಗಿದೆ.

* ಕೆರೆಗೋಡು ಗ್ರಾಮದಲ್ಲಿ ಶ್ರೀ ಗೌರಿಶಂಕರ ಸೇವಾ ಟ್ರಸ್ಟ್ ನವರು ರಾಷ್ಟ್ರಧ್ವಜ ಹಾಗೂ ನಾಡ ಧ್ವಜ ಹಾರಿಸುವುದಕ್ಕಾಗಿ ಮಾತ್ರ ಧ್ವಜ ಸ್ಥಂಭ ಸ್ಥಾಪನೆಗೆ ಮುಚ್ಚಳಿಕೆ ಬರೆದುಕೊಟ್ಟು ಅನುಮತಿ ಪಡೆದಿದ್ದಾರೆ. ಬರೆದುಕೊಟ್ಟ ಮುಚ್ಚಳಿಕೆಯಂತೆ ಹಾಗೂ ಯಾವುದಕ್ಕೆ ಅನುಮತಿ ಪಡೆದಿದ್ದಾರೋ ಅದನ್ನ ಪಾಲಿಸಬೇಕೇ ಬೇಡವೇ?

* ರಾಷ್ಟ್ರ ಧ್ವಜ ಹಾರಿಸುವ ಉದ್ದೇಶವನ್ನು ಹೈಜಾಕ್ ಮಾಡಿ ಮಂಡ್ಯದಲ್ಲಿ ಶಾಂತಿ ಕದಡಬೇಕು, ಸರ್ಕಾರಕ್ಕೆ ಸವಾಲು ಹಾಕಬೇಕು ಎನ್ನುವುದು ನಿಮ್ಮ ಪೂರ್ವಯೋಜಿತ ಹುನ್ನಾರವಾಗಿತ್ತಲ್ಲವೇ?

* ನಿಮ್ಮ ನಿಷ್ಠೆ ಸಂವಿಧಾನಕ್ಕೋ. ಮನುವಾದಕ್ಕೋ ? ನಿಮ್ಮ ನಿಷ್ಠೆ ದೇಶಕ್ಕೋ, ದೇಶದ್ರೋಹಕ್ಕೋ? ನಿಮ್ಮ ನಿಷ್ಠೆ ರಾಷ್ಟ್ರ ಧ್ವಜಕ್ಕೋ , ಧಾರ್ಮಿಕ ಧ್ವಜಕ್ಕೋ?

ಉತ್ತರ ನೀಡುವ ದಮ್ಮು ತಾಕತ್ತು ಇದೆಯೇ ? ಎಂದು ಅಶೋಕ್ ಅವರನ್ನು ಹಾಗೂ ಕುಮಾರಸ್ವಾಮಿ ಅವರನ್ನು ಟ್ಯಾಗ್ ಮಾಡಲಾಗಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...