Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಉತ್ತರ ನೀಡುವ ದಮ್ಮು ತಾಕತ್ತು ಇದೆಯೇ ? : ಕಾಂಗ್ರೆಸ್ ನಿಂದ ಬಿಜೆಪಿ ಹಾಗೂ ಜೆಡಿಎಸ್ ಗೆ ಪ್ರಶ್ನೆಗಳ ಸುರಿಮಳೆ

Facebook
Twitter
Telegram
WhatsApp

 

 

ಬೆಂಗಳೂರು: ರಾಜ್ಯದಲ್ಲಿ ಹನುಮ ಧ್ವಜದ ವಿಚಾರ ಬಾರೀ ಸದ್ದು ಮಾಡುತ್ತಿದೆ. ಇದರಿಂದ ಸಾಕಷ್ಟು ಪ್ರತಿಭಟನೆಗಳು ನಡೆಯುತ್ತಿವೆ. ಹನುಮ ಧ್ವಜ ವಿಚಾರಕ್ಕೆ ಬಿಜೆಪಿ ನಾಯಕರ ಬೆಂಬಲವೂ ಇದೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ವಾಗ್ದಾಳಿ ನಡೆಸಿದೆ. ಬಿಜೆಪಿ ಹಾಗೂ ಜೆಡಿಎಸ್ ಪಕ್ಷಕ್ಕೆ ಪ್ರಶ್ನೆಗಳ ಸುರಿಮಳೆಯನ್ನೇ ಸುರಿಸಿದೆ.

 

ಬಿಜೆಪಿಯ ಲೋಕಸಭಾ ಚುನಾವಣೆಯ ತಾಲೀಮು ಮಂಡ್ಯದಲ್ಲಿ ಶುರುವಾಗಿದೆ, ಇದಕ್ಕೆ ಸೋಕಾಲ್ಡ್ ಜಾತ್ಯತೀತ ಜನತಾ ದಳ ಪೂರ್ಣ ಸಹಕಾರ ನೀಡುತ್ತಿದೆ. ಆರ್ ಅಶೋಕ್ ಹಾಗೂ ಹೆಚ್ ಡಿ ಕುಮಾರಸ್ವಾಮಿ ಅವರಿಗೆ ದಮ್ಮು ತಾಕತ್ತಿದ್ದರೆ ಈ ಪ್ರಶ್ನೆಗಳಿಗೆ ಉತ್ತರಿಸಲಿ ಎಂದು ಟ್ವೀಟ್ ಮೂಲಕ ಸಾಲು ಸಾಲು ಪ್ರಶ್ನೆಗಳನ್ನು ಹಾಕಲಾಗಿದೆ.

* ಕೆರೆಗೋಡು ಗ್ರಾಮದಲ್ಲಿ ಶ್ರೀ ಗೌರಿಶಂಕರ ಸೇವಾ ಟ್ರಸ್ಟ್ ನವರು ರಾಷ್ಟ್ರಧ್ವಜ ಹಾಗೂ ನಾಡ ಧ್ವಜ ಹಾರಿಸುವುದಕ್ಕಾಗಿ ಮಾತ್ರ ಧ್ವಜ ಸ್ಥಂಭ ಸ್ಥಾಪನೆಗೆ ಮುಚ್ಚಳಿಕೆ ಬರೆದುಕೊಟ್ಟು ಅನುಮತಿ ಪಡೆದಿದ್ದಾರೆ. ಬರೆದುಕೊಟ್ಟ ಮುಚ್ಚಳಿಕೆಯಂತೆ ಹಾಗೂ ಯಾವುದಕ್ಕೆ ಅನುಮತಿ ಪಡೆದಿದ್ದಾರೋ ಅದನ್ನ ಪಾಲಿಸಬೇಕೇ ಬೇಡವೇ?

* ರಾಷ್ಟ್ರ ಧ್ವಜ ಹಾರಿಸುವ ಉದ್ದೇಶವನ್ನು ಹೈಜಾಕ್ ಮಾಡಿ ಮಂಡ್ಯದಲ್ಲಿ ಶಾಂತಿ ಕದಡಬೇಕು, ಸರ್ಕಾರಕ್ಕೆ ಸವಾಲು ಹಾಕಬೇಕು ಎನ್ನುವುದು ನಿಮ್ಮ ಪೂರ್ವಯೋಜಿತ ಹುನ್ನಾರವಾಗಿತ್ತಲ್ಲವೇ?

* ನಿಮ್ಮ ನಿಷ್ಠೆ ಸಂವಿಧಾನಕ್ಕೋ. ಮನುವಾದಕ್ಕೋ ? ನಿಮ್ಮ ನಿಷ್ಠೆ ದೇಶಕ್ಕೋ, ದೇಶದ್ರೋಹಕ್ಕೋ? ನಿಮ್ಮ ನಿಷ್ಠೆ ರಾಷ್ಟ್ರ ಧ್ವಜಕ್ಕೋ , ಧಾರ್ಮಿಕ ಧ್ವಜಕ್ಕೋ?

ಉತ್ತರ ನೀಡುವ ದಮ್ಮು ತಾಕತ್ತು ಇದೆಯೇ ? ಎಂದು ಅಶೋಕ್ ಅವರನ್ನು ಹಾಗೂ ಕುಮಾರಸ್ವಾಮಿ ಅವರನ್ನು ಟ್ಯಾಗ್ ಮಾಡಲಾಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯ ಹೈನುಗಾರಿಕೆ, ಹೋಟೆಲ್ ಮತ್ತು ಎಲ್ಲಾ ನಮೂನೆಯ ವ್ಯಾಪಾರಸ್ಥರು ಪೈಪೋಟಿ ಎದುರಿಸುವರು

ಈ ರಾಶಿಯ ಹೈನುಗಾರಿಕೆ, ಹೋಟೆಲ್ ಮತ್ತು ಎಲ್ಲಾ ನಮೂನೆಯ ವ್ಯಾಪಾರಸ್ಥರು ಪೈಪೋಟಿ ಎದುರಿಸುವರು, ಭಾನುವಾರ ರಾಶಿ ಭವಿಷ್ಯ -ಏಪ್ರಿಲ್-28,2024 ಸೂರ್ಯೋದಯ: 05:55, ಸೂರ್ಯಾಸ್ತ : 06:31 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ

ಯರೇಹಳ್ಳಿಯಲ್ಲಿ ಮತದಾನ ಬಹಿಷ್ಕಾರ : ಮರು ಮತದಾನ ನಡೆಸಿ, ವಾರದೊಳಗಾಗಿ ಮೂಲಭೂತ ಸೌಲಭ್ಯಗಳನ್ನು ಒದಗಿಸಿ : ಕರುನಾಡ ವಿಜಯಸೇನೆ ಒತ್ತಾಯ

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,  ಮೊ : 78998 64552   ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್.27  : ಮೂಲಭೂತ ಸೌಲಭ್ಯಗಳಿಲ್ಲದೆ ಪರಿತಪಿಸುತ್ತಿರುವ ಯರೇಹಳ್ಳಿ ಗ್ರಾಮಸ್ಥರು ಶುಕ್ರವಾರ ನಡೆದ ಲೋಕಸಭಾ ಚುನಾವಣೆಯಲ್ಲಿ ಮತದಾನ

ಚಿತ್ರದುರ್ಗ ಲೋಕಸಭಾ ಚುನಾವಣೆ: ಶೇ.73.30 ರಷ್ಟು ಮತದಾನ : 8 ವಿಧಾನಸಭಾ ಕ್ಷೇತ್ರಗಳ ಸಂಪೂರ್ಣ ಮಾಹಿತಿ ನೀಡಿದ ಜಿಲ್ಲಾಧಿಕಾರಿ..!

ಚಿತ್ರದುರ್ಗ. ಏ.27:  ಚಿತ್ರದುರ್ಗ ಲೋಕಸಭಾ ಚುನಾವಣೆಗೆ ಏ.26ರಂದು ಶುಕ್ರವಾರ ಜರುಗಿದ ಮತದಾನ ಶಾಂತಿಯುತವಾಗಿ ಮುಕ್ತಾಯವಾಗಿದೆ. ಚಿತ್ರದುರ್ಗ ಲೋಕಸಭಾ ಕ್ಷೇತ್ರದಲ್ಲಿ ಶೇ.73.30 ರಷ್ಟು ಮತದಾನವಾಗಿದೆ. ಲೋಕಸಭಾ ಕ್ಷೇತ್ರ ವ್ಯಾಪ್ತಿಯ  ಒಟ್ಟು 18,56,876 ಮತದಾರರಲ್ಲಿ 13,61,031 ಮತದಾರರು 

error: Content is protected !!