Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಆಪರೇಷನ್ ಸಿಂಧೂರದ ಮುಂದಾಳತ್ವ ವಹಿಸಿದ್ದ ಇಬ್ಬರು ಹೆಣ್ಣು ಮಕ್ಕಳ ಬಗ್ಗೆ ಗೊತ್ತಾ..?

---Advertisement---

 

ಇಂದು ಇಡೀ ದೇಶ ಹೆಮ್ಮೆ ಪಡುತ್ತಿದೆ. Tell Modhi ಎಂದವನಿಗೆ‌ I Told Modhi ಎಂದು ಉತ್ತರ ನೀಡಿ ಆಗಿದೆ. ಈ ಉತ್ತರದಿಂದ ಪಾಕಿಸ್ತಾನ ಗಢ ಗಢ ಅಂತ ನಡುಗುತ್ತಿದೆ. ಪಾಕಿಗಳು ಸತ್ತು ಸುಣ್ಣವಾಗುತ್ತಿದ್ದಾರೆ. ಈ ಆಪರೇಷನ್ ಸಿಂಧೂರ ಕಾರ್ಯಾಚರಣೆಯಲ್ಲಿ ಇಬ್ಬರು ಹೆಣ್ಣು ಮಕ್ಕಳು ಮುಂದಾಳತ್ವ ವಹಿಸಿಕೊಂಡಿದ್ದರು. ಆ ಹೆಣ್ಣು ಮಕ್ಕಳ ಬಗ್ಗೆ ಇದೀಗ ಇಡೀ ದೇಶ ಗೌರವಿಸುತ್ತಿದೆ. ಜೊತೆಗೆ ಈ ಇಬ್ಬರ ಬಗ್ಗೆ ತಿಳಿದುಕೊಳ್ಳುವುದಕ್ಕೂ ಜನರಿಗೆ ಹೆಚ್ಚು ಆಸಕ್ತಿ ಇದೆ. ಅವರೇ ಲೆಫ್ಟಿನೆಂಟ್ ಕರ್ನಲ್ ಸೋಫಿಯಾ ಖುರೇಷಿ ಮತ್ತು ವಿಂಗ್ ಕಮಾಂಡರ್ ವ್ಯೋಮಿಕಾ ಸಿಂಗ್ ಇವರ ಬಗ್ಗೆ ಇಲ್ಲಿದೆ ನೋಡಿ ಮಾಹಿತಿ.

ಕರ್ನಲ್ ಸೋಫೀಯಾ 1981ರಲ್ಲಿ ಗುಜರಾತ್ ನ ವಡೋದರಾದಲ್ಲಿ ಜನಿಸಿದವರು. ಜೀವರಸಾಯನ ಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ ಪಡೆದರು. 1999ರಲ್ಲಿ ಅಧಿಕಾರಿಗಳ ತರಬೇತಿ ಅಕಾಡೆಮಿಯಲ್ಲಿ ಟ್ರೈನಿಂಗ್ ಪಡೆದು ಭಾರತೀಯ ಸೇನೆಯ ಲೆಫ್ಟಿನೆಂಟ್ ಕರ್ತವ್ಯಕ್ಕೆ ಸೇರಿದರು. ಖುಷಿಯ ವಿಚಾರ ಏನಂದ್ರೆ ಈ ಖುರೇಷಿ ಅವರು ನಮ್ಮ ಕರ್ನಾಟಕದ ಸೊಸೆ ಅನ್ನೋದು. ಮೂಲಗಳ ಪ್ರಕಾರ ಖುರೇಷಿ ಅವರಿಗೆ ತಿಂಗಳ ವೇತನ ಬಂದು 1,21,200 ರೂಪಾಯಿಯಿಂದ 2,12,400 ರೂವರೆಗೆ ಇರುತ್ತದೆ.

ಮತ್ತೊಂದು ಹೆಸರು ವ್ಯೋಮಿಕಾ ಸಿಂಗ್ 21ನೇ ಶಾರ್ಟ್ ಸರ್ವೀಸ್ ಕಮಿಷನ್ ಫ್ಲೈಯಿಂಗ್ ಪೈಲಟ್ ಕೋರ್ಸ್ ಅಡಿಯಲ್ಲಿ ಡಿಸೆಂಬರ್ 18, 2004ರಂದು ವಾಯುಪಡೆಗೆ ಸೇರಿದರು. ಇಲ್ಲಿಯವರೆಗೆ ಅವರು 2,500 ಗಂಡೆಗೂ ಹೆಚ್ಚು ಕಾಲ ಹಾರಾಟವನ್ನು ಪೂರ್ಣಗೊಳಿಸಿದ್ದಾರೆ. 2017ರಲ್ಲಿ ವಾಯುಪಡೆಯ ಪ್ರಮುಖ ಮತ್ತು ಜವಾಬ್ದಾರಿಯುತ ಶ್ರೇಣಿಯಾದ ವಿಂಗ್ ಕಮಾಂಡರ್ ಹುದ್ದೆಗೆ ಬಡ್ತಿ ನೀಡಲಾಗಿದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment