Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಟೊಮ್ಯಾಟೊ ಹಣ್ಣು ಆರೋಗ್ಯಕ್ಕೆ ಎಷ್ಟೊಂದು ಉಪಯೋಗ ಗೊತ್ತಾ ?

---Advertisement---

 

ಸುದ್ದಿಒನ್ :  ಪ್ರಸ್ತುತ ದಿನಗಳಲ್ಲಿ ಅನೇಕ ಜನರು ರಕ್ತದೊತ್ತಡ (ಕಡಿಮೆ ರಕ್ತದೊತ್ತಡ, ಅಧಿಕ ರಕ್ತದೊತ್ತಡ) ಸಮಸ್ಯೆಯಿಂದ ಬಳಲುತ್ತಿದ್ದಾರೆ. ಜೊತೆಗೆ ಅನೇಕ ಆರೋಗ್ಯ ಸಮಸ್ಯೆಗಳೊಂದಿಗೆ ಹೃದ್ರೋಗಕ್ಕೆ ಮುಖ್ಯ ಕಾರಣ ಅಧಿಕ ರಕ್ತದೊತ್ತಡ.

ವಾಸ್ತವವಾಗಿ ಅಧಿಕ ಸೋಡಿಯಂ ಸೇವನೆಯಿಂದ ಅಧಿಕ ರಕ್ತದೊತ್ತಡ ಸಮಸ್ಯೆ ಬರುತ್ತದೆ. ಆದರೆ ಪೊಟ್ಯಾಸಿಯಮ್ ಸಮೃದ್ಧವಾಗಿರುವ ಆಹಾರವನ್ನು ಸೇವಿಸುವುದರಿಂದ ಅಧಿಕ ರಕ್ತದೊತ್ತಡದಿಂದ ಪಾರಾಗಬಹುದು.  ಟೊಮ್ಯಾಟೊ ಹಣ್ಣಿನಲ್ಲಿ ಪೊಟ್ಯಾಸಿಯಂ ಸಮೃದ್ಧವಾಗಿದೆ. ಇದು ಬಿಪಿ ಮಟ್ಟವನ್ನು ಕಡಿಮೆ ಮಾಡುತ್ತದೆ. ಇದರಲ್ಲಿರುವ ಉತ್ಕರ್ಷಣ ನಿರೋಧಕಗಳು ಮತ್ತು ಲೈಕೋಪೀನ್ ಹೃದಯದ ಆರೋಗ್ಯಕ್ಕೆ ಸಹ ಪ್ರಯೋಜನವನ್ನು ನೀಡುತ್ತದೆ.

ಟೊಮ್ಯಾಟೊ ಎಲ್ಲರ ಅಡುಗೆಮನೆಯಲ್ಲಿ ಬಳದುವ ಸಾಮಾನ್ಯ ತರಕಾರಿ. ಇದು ಕೆಂಪು ಮತ್ತು ಹಳದಿ ಬಣ್ಣದಿಂದ ಕೂಡಿರುತ್ತದೆ. ಟೊಮೆಟೊದಲ್ಲಿ ಹಲವು ಆರೋಗ್ಯಕಾರಿ ಲಾಭಗಳು ಅಡಗಿವೆ. ಟೊಮೆಟೊದಲ್ಲಿ ವಿಟಮಿನ್‌ಗಳು, ಪೋಷಕಾಂಶಗಳು, ವಿಟಮಿನ್ ಸಿ, ಪೊಟ್ಯಾಸಿಯಮ್, ಫೋಲೇಟ್, ವಿಟಮಿನ್ ಕೆ ಮತ್ತು ಉತ್ಕರ್ಷಣ ನಿರೋಧಕಗಳು ಸಮೃದ್ಧವಾಗಿವೆ. ಅಧಿಕ ರಕ್ತದೊತ್ತಡದಿಂದ ಬಳಲುತ್ತಿರುವವರಿಗೂ ಟೊಮೆಟೊ ವರದಾನ.  ಮಾರಣಾಂತಿಕ ಕಾಯಿಲೆಗಳಿಂದ ನಮ್ಮನ್ನು ರಕ್ಷಿಸುವುದಲ್ಲದೆ ಚರ್ಮಕ್ಕೆ ಆರೋಗ್ಯವನ್ನೂ ನೀಡುತ್ತದೆ.

ಕ್ಯಾನ್ಸರ್ ತಡೆಗಟ್ಟುತ್ತದೆ

ನಾವು ಟೊಮ್ಯಾಟೊವನ್ನು ನಮ್ಮ ಆಹಾರದಲ್ಲಿ ಬಳಸುವುದರಿಂದ, ಆಹಾರವು ಉತ್ತಮ ರುಚಿಯಾಗಿರುವುದಲ್ಲದೆ ಇದು ಕ್ಯಾನ್ಸರ್ ವಿರುದ್ಧ ಹೋರಾಡುತ್ತದೆ. ಟೊಮ್ಯಾಟೊ ಸೇವನೆಯಿಂದ ಕ್ಯಾನ್ಸರ್ ಅಪಾಯವನ್ನು ಕಡಿಮೆ ಮಾಡುತ್ತದೆ. ಇದರಲ್ಲಿರುವ ಲೈಕೋಪೀನ್ ಕ್ಯಾಪ್ಸಿನೋಜೆನಿಕ್ ವಿರೋಧಿ ಗುಣಗಳನ್ನು ಹೊಂದಿದೆ. ಇದು ಹೊಟ್ಟೆ ಮತ್ತು ಯಕೃತ್ತಿನ ಕ್ಯಾನ್ಸರ್ ಅನ್ನು ತಡೆಯುತ್ತದೆ.

ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡುತ್ತದೆ.

ಟೊಮ್ಯಾಟೊ ಆರೋಗ್ಯಕರ ಖನಿಜಗಳನ್ನು ಹೊಂದಿರುತ್ತದೆ. ಫೈಬರ್, ಕೋಲಿನ್, ವಿಟಮಿನ್ ಸಿ, ಪೊಟ್ಯಾಸಿಯಮ್ ಇವುಗಳಿಂದ ಹೃದಯ ಅರೋಗ್ಯಕ್ಕೆ ಒಳ್ಳೆಯದು. ಲೈಕೋಪೀನ್ ನಮ್ಮ ದೇಹದಿಂದ ಕೆಟ್ಟ ಕೊಲೆಸ್ಟ್ರಾಲ್ ಅನ್ನು ತೆಗೆದುಹಾಕುತ್ತದೆ. ಅಲ್ಲದೆ ಬಿಪಿಯನ್ನು ನಿಯಂತ್ರಿಸುತ್ತದೆ.

ಚರ್ಮದ ಆರೋಗ್ಯಕ್ಕಾಗಿ

ತ್ವಚೆಯ ಆರೋಗ್ಯಕ್ಕಾಗಿ ಟೊಮ್ಯಾಟೊ ಆಹಾರದಲ್ಲಿ ಸೇವಿಸಬೇಕು. ಇದರಿಂದ ಮುಖ ಕಾಂತಿಯುತವಾಗುತ್ತದೆ. ಇದಲ್ಲದೇ ಟೊಮ್ಯಾಟೊ ರಸವನ್ನು ಮುಖಕ್ಕೆ ಹಚ್ಚುವುದರಿಂದ ಮುಖ ಕಾಂತಿಯುತವಾಗುತ್ತದೆ. ಮುಖದ ಮೇಲಿನ ಮೊಡವೆಗಳನ್ನು ಹೋಗಲಾಡಿಸುತ್ತದೆ. ಮುಖದ ಮೇಲಿನ ವಚನ ಚರ್ಮಕ್ಕೆ ಸಂಬಂಧಿಸಿದ ಹಲವು ಸಮಸ್ಯೆಗಳನ್ನು ಕಡಿಮೆ ಮಾಡಲು ಸಹ ಪರಿಣಾಮಕಾರಿಯಾಗಿದೆ.

 

(ಪ್ರಮುಖ ಸೂಚನೆ: ಆರೋಗ್ಯ ತಜ್ಞರು ಮತ್ತು ಇತರ ಅಧ್ಯಯನಗಳಿಂದ ಪಡೆದ ಮಾಹಿತಿಯ ಆಧಾರದ ಮೇಲೆ ನಾವು ಈ ವಿವರಗಳನ್ನು ಒದಗಿಸುತ್ತಿದ್ದೇವೆ. ವಿಷಯಗಳು ಕೇವಲ ತಿಳುವಳಿಕೆಗಾಗಿ ಮಾತ್ರ. ನಿಮಗೆ ಯಾವುದೇ ಅನುಮಾನಗಳು ಅಥವಾ ಸಮಸ್ಯೆಗಳಿದ್ದರೆ ವೈದ್ಯರನ್ನು ಸಂಪರ್ಕಿಸುವುದು ಸೂಕ್ತ.)

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment