Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಹಾಸನಾಂಬ ದೇವಾಲಯದಲ್ಲಿ 9 ದಿನಕ್ಕೆ ಸಂಗ್ರವಾದ ಕಾಣಿಕೆ ಎಷ್ಟು ಕೋಟಿ ಗೊತ್ತಾ..?

---Advertisement---

ಹಾಸನ: ವರ್ಷಕ್ಕರ ಒಂದೇ ಬಾರಿಗೆ ದರ್ಶನಕೊಡುವ ತಾಯಿ ಹಾಸನಾಂಬೆ. ಈ ವರ್ಷ ದೇವಾಲಯದ ಬಾಗಿಲು ತೆರೆದಿದ್ದು, ಒಂಭತ್ತು ದಿನಗಳ ಕಾಲ ತಾಯಿ ದರ್ಶನ ನೀಡುತ್ತಾಳೆ. ಇಂದು ಸಂಜೆಯ ತನಕ ತಾಯಿ ದರ್ಶನ ನೀಡಲಿದ್ದು, ಸಂಜೆ ವೇಳೆಗೆ ಬಾಗಿಲು ಹಾಕಲಾಗುತ್ತದೆ. ಈ ಹಿನ್ನೆಲೆ ಇಂದು ಭಕ್ತಾಧಿಗಳ ಸಂಖ್ಯೆ ಜಾಸ್ತಿಯೇ ಇದೆ.

 

ಕಳೆದ ಒಂಭತ್ತು ದಿನದಿಂದ ಕೂಡ ಹಾಸನಾಂಬೆ ದರ್ಶನ ಪಡೆಯಲು ಸಾವಿರಾರು ಜನ ಬಂದಿದ್ದರು. ಕಾಣಿಕೆ ರೂಪದಲ್ಲಿ ನಗದು, ಚಿನ್ನ, ಬೆಳ್ಳಿ ನೀಡಿ ತಮ್ಮ ಹರಕೆಯನ್ನು ತೀರಿಸಿದ್ದಾರೆ. ಹಾಸನಾಂಬೆಯ ಹುಂಡಿ ಎಣಿಕೆ ಕಾರ್ಯ ನಡೆದಿದ್ದು, ಬರೀ ಒಂಭತ್ತು ದಿನದಲ್ಲಿ ಸುಮಾರು 5.52 ಕೋಟಿ ರೂಪಾಯಿ ಸಂಗ್ರಹವಾಗಿದೆ. ಈ ಬಾರಿ ವಿಶೇಷ ಪಾಸ್ ವ್ಯವಸ್ಥೆಯನ್ನು ಮಾಡಲಾಗಿತ್ತು. ಅದಕ್ಕೆ ಒಂದು ಪಾಸ್ ಸಾವಿರ ರೂಪಾಯಿ ಇತ್ತು. ಜೊತೆಗೆ 400 ರೂಪಾಯಿಗಳ ಪಾಸ್ ಕೂಡ ವಿತರಣೆ ಮಾಡಲಾಗಿದೆ. ಲಡ್ಡು ಪ್ರಸಾದ ವಿತರಣೆ ಎಲ್ಲಾ ಸೇರಿ ಕೋಟಿ ಕೋಟಿ ಹಣ ಸಂಗ್ರಹವಾಗಿದೆ.

 

ಹಣ ಸಂಗ್ರಹದ ಬಗ್ಗೆ ದೇವಸ್ಥಾನದ ಆಡಳಿತ ಮಂಡಳಿ ಮಾಹಿತಿ ನೀಡಿದೆ. ದೇವಾಲಯವು ವರ್ಷದಲ್ಲಿ ಒಮ್ಮೆ ಮಾತ್ರ 10 ದಿನಗಳ ಕಾಲ ದೇವಾಲಯ ತೆರೆದಿರುತ್ತದೆ. ಹೀಗಾಗಿ, ಭಕ್ತರು ನೂಕುನುಗ್ಗಲಿನಲ್ಲಿ ದೇವಾಲಯಕ್ಕೆ ಭೇಟಿ ನೀಡುತ್ತಾರೆ. ಈ ಬಾರಿ 1,000 ರೂ. ಮೊತ್ತದ ವಿಶೇಷ ಟಿಕೆಟ್‌ಅನ್ನು 28,052 ಮಂದಿ ಖರೀಸಿದ್ದಾರೆ. 400 ರೂ. ಮೊತ್ತದ ಟಿಕೆಟ್‌ಅನ್ನು 71,885 ಮಂದಿ ಖರೀದಿಸಿದ್ದಾರೆ ಎಂದು ದೇವಸ್ಥಾನದ ಆಡಳಿತಾಧಿಕಾರಿ ಮಾರುತಿ ಗೌಡ ತಿಳಿಸಿದ್ದಾರೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment