Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಹಾಸನಾಂಬ ದೇವಾಲಯದಲ್ಲಿ 9 ದಿನಕ್ಕೆ ಸಂಗ್ರವಾದ ಕಾಣಿಕೆ ಎಷ್ಟು ಕೋಟಿ ಗೊತ್ತಾ..?

Facebook
Twitter
Telegram
WhatsApp

ಹಾಸನ: ವರ್ಷಕ್ಕರ ಒಂದೇ ಬಾರಿಗೆ ದರ್ಶನಕೊಡುವ ತಾಯಿ ಹಾಸನಾಂಬೆ. ಈ ವರ್ಷ ದೇವಾಲಯದ ಬಾಗಿಲು ತೆರೆದಿದ್ದು, ಒಂಭತ್ತು ದಿನಗಳ ಕಾಲ ತಾಯಿ ದರ್ಶನ ನೀಡುತ್ತಾಳೆ. ಇಂದು ಸಂಜೆಯ ತನಕ ತಾಯಿ ದರ್ಶನ ನೀಡಲಿದ್ದು, ಸಂಜೆ ವೇಳೆಗೆ ಬಾಗಿಲು ಹಾಕಲಾಗುತ್ತದೆ. ಈ ಹಿನ್ನೆಲೆ ಇಂದು ಭಕ್ತಾಧಿಗಳ ಸಂಖ್ಯೆ ಜಾಸ್ತಿಯೇ ಇದೆ.

 

ಕಳೆದ ಒಂಭತ್ತು ದಿನದಿಂದ ಕೂಡ ಹಾಸನಾಂಬೆ ದರ್ಶನ ಪಡೆಯಲು ಸಾವಿರಾರು ಜನ ಬಂದಿದ್ದರು. ಕಾಣಿಕೆ ರೂಪದಲ್ಲಿ ನಗದು, ಚಿನ್ನ, ಬೆಳ್ಳಿ ನೀಡಿ ತಮ್ಮ ಹರಕೆಯನ್ನು ತೀರಿಸಿದ್ದಾರೆ. ಹಾಸನಾಂಬೆಯ ಹುಂಡಿ ಎಣಿಕೆ ಕಾರ್ಯ ನಡೆದಿದ್ದು, ಬರೀ ಒಂಭತ್ತು ದಿನದಲ್ಲಿ ಸುಮಾರು 5.52 ಕೋಟಿ ರೂಪಾಯಿ ಸಂಗ್ರಹವಾಗಿದೆ. ಈ ಬಾರಿ ವಿಶೇಷ ಪಾಸ್ ವ್ಯವಸ್ಥೆಯನ್ನು ಮಾಡಲಾಗಿತ್ತು. ಅದಕ್ಕೆ ಒಂದು ಪಾಸ್ ಸಾವಿರ ರೂಪಾಯಿ ಇತ್ತು. ಜೊತೆಗೆ 400 ರೂಪಾಯಿಗಳ ಪಾಸ್ ಕೂಡ ವಿತರಣೆ ಮಾಡಲಾಗಿದೆ. ಲಡ್ಡು ಪ್ರಸಾದ ವಿತರಣೆ ಎಲ್ಲಾ ಸೇರಿ ಕೋಟಿ ಕೋಟಿ ಹಣ ಸಂಗ್ರಹವಾಗಿದೆ.

 

ಹಣ ಸಂಗ್ರಹದ ಬಗ್ಗೆ ದೇವಸ್ಥಾನದ ಆಡಳಿತ ಮಂಡಳಿ ಮಾಹಿತಿ ನೀಡಿದೆ. ದೇವಾಲಯವು ವರ್ಷದಲ್ಲಿ ಒಮ್ಮೆ ಮಾತ್ರ 10 ದಿನಗಳ ಕಾಲ ದೇವಾಲಯ ತೆರೆದಿರುತ್ತದೆ. ಹೀಗಾಗಿ, ಭಕ್ತರು ನೂಕುನುಗ್ಗಲಿನಲ್ಲಿ ದೇವಾಲಯಕ್ಕೆ ಭೇಟಿ ನೀಡುತ್ತಾರೆ. ಈ ಬಾರಿ 1,000 ರೂ. ಮೊತ್ತದ ವಿಶೇಷ ಟಿಕೆಟ್‌ಅನ್ನು 28,052 ಮಂದಿ ಖರೀಸಿದ್ದಾರೆ. 400 ರೂ. ಮೊತ್ತದ ಟಿಕೆಟ್‌ಅನ್ನು 71,885 ಮಂದಿ ಖರೀದಿಸಿದ್ದಾರೆ ಎಂದು ದೇವಸ್ಥಾನದ ಆಡಳಿತಾಧಿಕಾರಿ ಮಾರುತಿ ಗೌಡ ತಿಳಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಶಿಕ್ಷಕರ ಹಿತರಕ್ಷಣೆಗೆ ಕೈ ಸರ್ಕಾರ ಬದ್ಧ | ಕೊಟ್ಟ ಮಾತು ತಪ್ಪದ ಸಿಎಂ ಸಿದ್ದು :  ಮಾಜಿ ಶಾಸಕಿ ಕೆ.ಪೂರ್ಣಿಮಾ ಶ್ರೀನಿವಾಸ್

ಚಿತ್ರದುರ್ಗ, ಮೇ 19 :  ಶಿಕ್ಷಕರ ಹಿತ ಕಾಯುವಲ್ಲಿ ಕಾಂಗ್ರೆಸ್ ಸರ್ಕಾರದ ಬದ್ಧತೆ, ದೃಢ ನಿರ್ಧಾರ ಪ್ರಶ್ನಾತೀತ ಎಂದು ಮಾಜಿ ಶಾಸಕಿ ಕೆ.ಪೂರ್ಣಿಮಾ ಶ್ರೀನಿವಾಸ್ ಹೇಳಿದರು. ತಾಲೂಕಿನ ಸೀಬಾರದಲ್ಲಿ ಆಗ್ನೇಯ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್

ವಿ.ಪಿ ಅಕಾಡೆಮಿ ವತಿಯಿಂದ ಕೃಷಿ ಜಾಗೃತಿ ಮೂಡಿಸುತ್ತಿರುವುದು ಶ್ಲಾಘನೀಯ : ಡಾ.ರುದ್ರಮುನಿ

ಸುದ್ದಿಒನ್, ಚಿತ್ರದುರ್ಗ, ಮೇ. 19 : ಸಾಂಪ್ರದಾಯಿಕ ಕೃಷಿ ಚಟುವಟಿಕೆಗೆ ಸಂಬಂಧಿಸಿದಂತೆ ನಗರದ ವಿ.ಪಿ ಅಕಾಡೆಮಿ ವತಿಯಿಂದ ಆಸಕ್ತ ಮಕ್ಕಳಿಗೆ ಕೃಷಿ ಜಾಗೃತಿ ಮೂಡಿಸುತ್ತಿರುವುದು ಶ್ಲಾಘನೀಯ. ಸಾವಯವ ಕೃಷಿ ಪದ್ಧತಿಯು ಆರೋಗ್ಯಕರ ವಾತಾವರಣವನ್ನು ಸೃಷ್ಟಿಸುವ

ಶಿವಶಿಂಪಿ ಸಮಾಜಕ್ಕೆ 25 ವರ್ಷ | ಅದ್ದೂರಿಯಾಗಿ ಆಚರಣೆಗೆ ವಾರ್ಷಿಕ ಸಭೆಯಲ್ಲಿ ತೀರ್ಮಾನ

ಸುದ್ದಿಒನ್, ಚಿತ್ರದುರ್ಗ ಮೇ. 19 : ಚತ್ರದುರ್ಗ ಜಿಲ್ಲೆಯಲ್ಲಿ ಶಿವಶಿಂಪಿ ಸಮಾಜ ಪ್ರಾರಂಭವಾಗಿ ಈ ವರ್ಷಕ್ಕೆ 25 ವರ್ಷಕ್ಕೆ ಪಾದಾರ್ಪಣೆ ಮಾಡುತ್ತಿರುವುದರಿಂದ ಈ ವರ್ಷ ಅದ್ದೂರಿಯಾಗಿ ಆಚರಣೆ ಮಾಡಲು ಇಂದು ನಡೆದ ಚಿತ್ರದುರ್ಗ ಜಿಲ್ಲಾ

error: Content is protected !!