Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ರಾಮಮಂದಿರಕ್ಕೆ 15 ದಿನಕ್ಕೆ ಹರಿದು ಬಂದ ಕಾಣಿಕೆ ಎಷ್ಟು ಕೋಟಿ ಗೊತ್ತಾ..?

---Advertisement---

 

ಅಯೋಧ್ಯೆ: ರಾಮಮಂದಿರ ನಿರ್ಮಾಣದ ಕನಸು ಹಲವು ವರ್ಷಗಳ ಹಿಂದಿನದ್ದು. ಕಡೆಗೂ ಈ ವರ್ಷ ನನಸಾಗಿದೆ. ಜನವರಿ 22 ರಂದು ರಾಮಜನ್ಮ ಭೂಮಿಯಲ್ಲಿ ರಾಮಲಲ್ಲಾನ ಪ್ರತಿಷ್ಠಾಪನೆಯಾಗಿದೆ. ಅಂದಿನಿಂದ ಸಾರ್ವಜನಿಕರ ಪ್ರವೇಶಕ್ಕೂ ಅನುಮತಿ ನೀಡಲಾಗಿದೆ. ಪ್ರತಿ ದಿನ ಹರಿದು ಬರುತ್ತಿರುವ ಭಕ್ತ ಸಾಗರ ಲಕ್ಷ ಲಕ್ಷ ಸಂಖ್ಯೆಯಲ್ಲಿ ಬರುತ್ತಿದೆ.

ದೇಶದ ಎಲ್ಲಾ ರಾಜ್ಯಗಳಿಂದಾನೂ ಅಯೋಧ್ಯೆಗೆ ನೇರವಾಗಿ ರೈಲಿನ ವ್ಯವಸ್ಥೆ ಮಾಡಲಾಗಿದೆ. ಹೀಗಾಗಿ ಹಿರಿಯರಿಂದ ಹಿಡಿದು ಕಿರಿಯರ ತನಕ ರಾಮನನ್ನು ನೋಡಲು ಹೊರಟು ನಿಂತಿದ್ದಾರೆ. ಯಾವುದೇ ರಾಜ್ಯದಿಂದ ಟ್ರೈ‌ನ್ ಹೊರಟರು ಇಡೀ ಟ್ರೈ‌ನ್ ತುಂಬಿರುತ್ತದೆ. ಹಿಂಗೆ ಪ್ರತಿದಿನ ರಾಮನನ್ನು ನೋಡಲು ಬರುವ ಭಕ್ತರ ಸಂಖ್ಯೆ, ಎರಡು ಲಕ್ಷಕ್ಕೂ ಅಧಿಕ ಸಂಖ್ಯೆಯಲ್ಲಿ ಬರುತ್ತಿದ್ದಾರೆ.

ಕಳೆದ ಹದಿನೈದು ದಿನಕ್ಕೆ ಸುಮಾರು 30 ಲಕ್ಷ ಭಕ್ತಾಧಿಗಳು ಭೇಟಿ ನೀಡಿದ್ದಾರೆ. ರಾಮನನ್ನು ನೋಡಲು ಅಷ್ಟು ದೂರ ಬಂದವರು ರಾಮನಿಗೆ ಹರಕೆಯ ಕಾಣಿಕೆಯನ್ನು ನೀಡಿಯೇ ತೆರಳಿದ್ದಾರೆ. ಭಕ್ತರ ಕಾಣಿಕೆಯನ್ನು ಎಣಿಕೆ ಮಾಡಿದ್ದು, ಕೇವಲ 15 ದಿನಕ್ಕೆ 12.8ಕೋಟಿ ಕಾಣಿಕೆ ಬಂದಿದೆ. ಇದು ಹೊಸ ದಾಖಲೆಯನ್ನೇ ಸೃಷ್ಟಿ ಮಾಡಿದೆ. ದೇಶ ವಿದೇಶಗಳಿಂದಾನೂ ಬಾಲರಾಮನನ್ನು ನೋಡಲು ಜನಸಾಗರ ಹರಿದು ಬರುತ್ತಿದೆ.

ಬಲರಾಮನ ಮೂರ್ತಿಯನ್ನು ಮೈಸೂರಿನ ಅರುಣ್ ಯೋಗಿರಾಜ್ ನಿರ್ಮಿಸಿದ್ದು, ಅಲಂಕಾರಗೊಂಡ ರಾಮನನ್ನು ನೋಡಲು ಎರಡು ಕಣ್ಣುಗಳು ಸಾಲದು. ಅಷ್ಟು ಸುಂದರವಾಗಿ, ಮಗುವಿನಂತೆ, ಮುಗುಳ್ನಗುವಿನಲ್ಲಿಯೇ ಕಂಗೊಳಿಸುತ್ತಿದ್ದಾನೆ ಬಾಲ ರಾಮ. ಹೀಗಾಗಿ ಒಮ್ಮೆ ಅಯೋಧ್ಯೆಗೆ ಭೇಟಿ ನೀಡಿ ರಾಮನ ದರ್ಶನ ಪಡೆದು ಬರುವವರ ಸಂಖ್ಯೆ ಜಾಸ್ತಿಯಾಗುತ್ತಿದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment