Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಬೆಂಡೆಕಾಯಿ ತಿನ್ನುವುದರಿಂದ ಎಷ್ಟೊಂದು ರೋಗಗಳಿಂದ ದೂರವಿರಬಹುದು ಗೊತ್ತಾ..?

---Advertisement---

ಮನುಷ್ಯನ ದೇಹಕ್ಕೆ ಪೌಷ್ಠಿಕಾಂಶ ಬಹಳ ಮುಖ್ಯ. ಒಂದೊಂದು ತರಕಾರಿಯಲ್ಲೂ ಹಲವು ಪೌಷ್ಠಿಕಾಂಶ ಅಡಗಿರುತ್ತದೆ. ಹೀಗಾಗಿ ಯಾವುದೇ ತರಕಾರಿ ಕೊಟ್ಟರು ಬೇಡ ಎನ್ನದೆ ತಿನ್ನಬೇಕು. ಆದರೆ ಕೆಲವೊಬ್ಬರು ಎಷ್ಟೋ ತರಕಾರಿಯನ್ನು ವಾಕರಿಕೆ ಬರುವವರಂತೆ ಫೀಲ್ ಮಾಡುತ್ತಾರೆ. ಅದರಲ್ಲೂ ಬೆಂಡೆಕಾಯಿ ಸಾಂಬಾರ್, ಬೆಂಡೆಕಾಯಿ ಪಲ್ಯ ಎಂದರೆ ಮೂಗು ಮುರಿಯುವವರೆ ಜಾಸ್ತಿ. ಆದರೆ ಬೆಂಡೆಕಾಯಿಯಿಂದ ಎಷ್ಟೆಲ್ಲಾ ಆರೋಗ್ಯಕರ ಲಾಭಗಳಿವೆ ಗೊತ್ತಾ..? ಇಲ್ಲಿದೆ ನೋಡಿ ಡಿಟೈಲ್ಸ್

ಬೆಂಡೆಕಾಯಿ ಮಧುಮೇಹ ಇರುವವರಿಗೆ ಅತ್ಯುತ್ತಮ ಆಹಾರ. ಇದರಲ್ಲಿ ಫೈಬರ್ ಶಕ್ತಿ ಹೆಚ್ಚಾಗಿದೆ. ಇದರಿಂದ ಜೀರ್ಣಾಂಗ ಶಕ್ತಿ ವೃದ್ಧಿಯಾಗುತ್ತದೆ. ಜೀರ್ಣಾಂಗ ಕ್ರಿಯೆಯಲ್ಲಿ ಸಕ್ಕರೆ ಮಟ್ಟವನ್ನು ಹೀರಿಕೊಳ್ಳುವುದರಿಂದ ಸಕ್ಕರೆ ಮಟ್ಟ ನಿಯಂತ್ರಣಕ್ಕೆ ಬರುತ್ತದೆ. ಇನ್ಸುಲಿನ್ ಉತ್ಪಾದನೆಯನ್ನು ಹೆಚ್ಚಿಸಲು ಪ್ರಯೋಜನಕಾರಿಯಾಗುತ್ತದೆ.

ಬೆಂಡೆಕಾಯಿಯಲ್ಲಿರುವ ಹೆಚ್ಚಿನ ಉತ್ಕರ್ಷಣ ನಿರೋಧಕಗಳು ನಿಮ್ಮ ಕೋಶಗಳನ್ನು ಸ್ವತಂತ್ರ ರಾಡಿಕಲ್ ಕೋಶಗಳಿಂದ ಹಾನಿಯಾಗದಂತೆ ರಕ್ಷಿಸುತ್ತದೆ. ಜೊತೆಗೆ ದೇಹದಲ್ಲಿ ಕ್ಯಾನ್ಸರ್ ಕೋಶಕಗಳು ಬೆಳೆಯದಂತೆ ರಕ್ಷಣೆ ನೀಡುತ್ತದೆ.

ದೇಹಕ್ಕೆ ವಿಟಮಿನ್ ಸಿ ಅಂಶ ಬಹಳ ಮುಖ್ಯವಾಗಿ ಬೇಕಾಗುತ್ತದೆ. ಬೆಂಡೆಕಾಯಿಯನ್ನು ನಮ್ಮ ದೈನಂದಿನ ಆಹಾರ ಕ್ರಮದಲ್ಲಿ ಬಳಕೆ ಮಾಡುವುದರಿಂದ ವಿಟಮಿನ್ ಸಿ ಹೇರಳವಾಗಿ ಸಿಗಲಿದೆ. ಶೇಕಡ 38% ರಷ್ಟು ಹೆಚ್ಚಳ ಮಾಡುತ್ತದೆ. ವಿಟಮಿನ್ ಸಿ ನಮ್ಮ ದೇಹದಲ್ಲಿ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ.

ದೇಹದ ತೂಕ ಇಳಿಸಬೇಕು ಅಂತ ಸಿಕ್ಕಾಪಟ್ಟೆ ವರ್ಕೌಟ್ ಮಾಡುವವರು ಅದರ ಜೊತೆಗೆ ಬೆಂಡೆಕಾಯಿ ಕೂಡ ಸೇರಿಸಿಕೊಳ್ಳಿ. ಬೆಂಡೆಕಾಯಿ ಸೇವನೆಯಿಂದ ತೂಕ ಇಳಿಕೆ ಬೇಗ ಆಗುತ್ತದೆ. ಯಾಕಂದ್ರೆ ಇದರಲ್ಲಿ ಫೈಬರ್ ಅಂಶ ಹೆಚ್ಚಾಗಿದೆ.

ಯಾರ ದೇಹ ಹೆಚ್ಚು ಉಷ್ಣಾಂಶದಿಂದ ಕೂಡಿರುತ್ತದೋ ಅವರು ದೇಹವನ್ನು ತಂಪಾಗಿಸಿಕೊಳ್ಳಲು ಬಮಡೆಕಾಯಿಯನ್ನು ತಿನ್ನಿ. ಇದರಿಂದ ದೇಹದ ಉಷ್ಣಾಂಶ ಕಡಿಮೆಯಾಗಿ ದೇಹ ತಂಪಾಗಿರುತ್ತದೆ.

 

(ಪ್ರಮುಖ ಸೂಚನೆ: ಆರೋಗ್ಯ ತಜ್ಞರು ಮತ್ತು ಇತರ ಅಧ್ಯಯನಗಳಿಂದ ಪಡೆದ ಮಾಹಿತಿಯ ಆಧಾರದ ಮೇಲೆ ನಾವು ಈ ವಿವರಗಳನ್ನು ಒದಗಿಸುತ್ತಿದ್ದೇವೆ. ಇದು ಕೇವಲ ಪ್ರಾಥಮಿಕ ಮಾಹಿತಿಯಾಗಿದ್ದು, ಇಲ್ಲಿ ಒದಗಿಸಲಾದ ವಿಷಯಗಳು ಕೇವಲ ತಿಳುವಳಿಕೆಗಾಗಿ ಮಾತ್ರ. ನಿಮಗೆ ಯಾವುದೇ ಅನುಮಾನಗಳು ಅಥವಾ ಸಮಸ್ಯೆಗಳಿದ್ದರೆ ವೈದ್ಯರನ್ನು ಸಂಪರ್ಕಿಸುವುದು ಸೂಕ್ತ.)

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment