Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಡಿಕೆ ಶಿವಕುಮಾರ್ ನೇತೃತ್ವದ ಶಾಲೆಯಲ್ಲಿ ಎಷ್ಟು ಲಕ್ಷ ಪೀಸ್ ಗೊತ್ತಾ..?

ಡಿಕೆ ಶಿವಕುಮಾರ್
---Advertisement---

ಎಲ್ಲರಿಗೂ ಗೊತ್ತಿರುವಂತೆ ಡಿಸಿಎಂ ಡಿಕೆ ಶಿವಕುಮಾರ್ ಅವರು ಶಾಲೆಗಳನ್ನ ನಡೆಸುತ್ತಿದ್ದಾರೆ. ಆ ಶಾಲೆಯನ್ನ ಅವರ ಮಗಳು ಐಶ್ವರ್ಯಾ ಅವರು ಮುನ್ನಡೆಸುತ್ತಿದ್ದಾರೆ. ಐಶ್ಚರ್ಯಾ ಅವರು ಆಗಾಗ ಶಾಲೆಯ ವಿಡಿಯೋಗಳನ್ನ ಹಂಚಿಕೊಳ್ಳುತ್ತಾ ಇರುತ್ತಾರೆ. ಅದನ್ನ ನೋಡಿದರೇನೆ, ಶಾಲೆ ಎಷ್ಟು ರಿಚ್ ಆಗಿದೆ ಅನ್ನೋದು ಗೊತ್ತಾಗುತ್ತೆ. ಅಷ್ಟು ದೊಡ್ಡ ಶಾಲೆಯಲ್ಲಿ ಶುಲ್ಕ ಎಷ್ಟಿರಬಹುದು ಎಂಬ ಕುತೂಹಲವೂ ಇರುತ್ತೆ. ಸಾಮಾನ್ಯ ಜನರು ಆ ಶಾಲೆಯಲ್ಲಿ ಮಕ್ಕಳನ್ನ ಸೇರಿಸಬಹುದಾ ಎಂಬ ಪ್ರಶ್ನೆಯೂ ಕಾಡುತ್ತದೆ. ಡಿಕೆ ಶಿವಕುಮಾರ್ ಅವರ ಶಾಲೆಯಲ್ಲಿ ಫೀಸ್ ಎಷ್ಟಿದೆ ಎಂಬ ಮಾಹಿತಿಯನ್ನ ಇದೀಗ ನೀಡಿದ್ದಾರೆ.

ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಶೆಟ್ಟಿಹಳ್ಳಿಯಲ್ಲಿ ಶಾಲಾ ಕಾರ್ಯಕ್ರಮ ಒಂದರಲ್ಲಿ ಇಂದು ಭಾಗವಹಿಸಿದ್ದರು. ಈ ವೇಳೆ ತಮ್ಮ ಶಾಲೆಯ ಶುಲ್ಕದ ಬಗ್ಗೆಯೂ ಮಾತಾಡಿದ್ದಾರೆ. ನಾನು ಸಹ ಬೆಂಗಳೂರಿನಲ್ಲಿ ಸ್ಕೂಲ್ ನಡೆಸುತ್ತಿದ್ದೇನೆ. ಅಲ್ಲೂ ಸಹ ಸಿಬಿಎಸ್ ಸಿಲಬಸ್ ಇದೆ. ಶಿಕ್ಷಣ ಸಂಸ್ಥೆಯಲ್ಲಿ ನನಗೆ 25 ವರ್ಷದ ಅನುಭವವಿದೆ. ನನಗೆ ಈಗ ಸಮಯ ಇಲ್ಲ ಅಂತ ಮಕ್ಕಳಿಗೆ ಜವಾಬ್ದಾರಿಯನ್ನ ವಹಿಸಿದ್ದೇನೆ.

ಎಲ್ಲರಿಗೂ ಕ್ವಾಲಿಟಿ ಎಜುಕೇಷನ್ ಕೊಡಬೇಕು. ನನ್ನ ಖಾಸಗಿ ಶಾಲೆಯಲ್ಲಿ ಸಿಬಿಎಸ್ ಸಿಲಬಸ್ ಗೆ ಒಂದು ಲಕ್ಷದ ಐವತ್ತು ಸಾವಿರ ಶುಲ್ಕವನ್ನ ನಿಗದಿ ಮಾಡಲಾಗಿದೆ. ಅದೇ ಮಂಡ್ಯದಲ್ಲಿ 40 ಸಾವಿರ ಇದೆ. ಗ್ರಾಮೀಣ ಭಾಗಕ್ಕೆ ನಾನೊಂದು ಸ್ಕೀಮ್ ಯೋಚನೆ ಮಾಡಿದ್ದೇನೆ. ಗ್ರಾಮೀಣ ಪ್ರದೇಶದಲ್ಲಿ ಎರಡು ಸಾವಿರ ಶಾಲೆಗಳು ಅಂದರೆ ಎರಡರಿಂದ ಮೂರು ಪಂಚಾಯ್ತಿ ವ್ಯಾಪ್ತಿಯಲ್ಲಿ ಇದೇ ಮಾದರಿಯ ಸ್ಕೂಲ್ ಗಳನ್ನ ನಿರ್ಮಾಣ ಮಾಡುವುದಾಗಿ ಹೇಳಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment