Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

BPL ಕಾರ್ಡ್ ಪಡೆಯಬೇಕು ಅಂದ್ರೆ ವಾರ್ಷಿಕ ಆದಾಯ ಎಷ್ಟಿರಬೇಕು ಗೊತ್ತಾ..? ಹೊಸ ಸರ್ವೇ ನಡೆಸುತ್ತಿರುವ ಸರ್ಕಾರ ವಿಧಿಸಿದ ಮಾನದಂಡಗಳೇನು..?

Facebook
Twitter
Telegram
WhatsApp

 

ಬಡತನ ರೇಖೆಗಿಂತ ಕೆಳಗೆ ಇರುವವರಿಗೆ ಬಿಪಿಎಲ್ ಕಾರ್ಡ್ ನೀಡಲಾಗುತ್ತದೆ. ಆ ಬಿಪಿಎಲ್ ಕಾರ್ಡ್ ಇದ್ದರೆ ತಿಂಗಳ ರೇಷನ್, ಆಸ್ಪತ್ರೆಯಲ್ಲಿ ಒಂದಿಷ್ಟು ಉಚಿತ ಸೌಲಭ್ಯವೂ ಇರಲಿದೆ. ಆದ್ರೆ ಬಿಪಿಎಲ್ ಕಾರ್ಡ್ ಅನ್ನು ಫಲಾನುಭವಿಗಳಿಗಿಂತ ಅನುಕೂಲವಾಗುವಂತರೂ ಕೂಡ ಬಳಕೆ ಮಾಡುವುದೇ ಹೆಚ್ಚಾಗಿದೆ. ಹೀಗಾಗಿ ಸರ್ಕಾರ ಈ ಬಾರಿ ಈ ವಿಚಾರವನ್ನು ಗಂಭೀರವಾಗಿ ತೆಗೆದುಕೊಂಡಿದ್ದು, ಹೊಸದಾಗಿ ಸರ್ವೇ ಮಾಡಿಸಲು ಹೊರಟಿದೆ.

ರಾಜ್ಯ ಸರ್ಕಾರಕ್ಕೆ ಸದ್ಯ ಸಿಕ್ಕಿರುವ ಮಾಹಿತಿ ಪ್ರಕಾರ, 1 ಕೋಟಿ 28 ಲಕ್ಷ ಮಂದಿ ಬಿಪಿಎಲ್ ಕಾರ್ಡ್ ಹೊಂದಿದ್ದಾರೆ. ಆದರೆ ಇಷ್ಟು ಮಂದಿ ಬಿಪಿಎಲ್ ಕಾರ್ಡ್ ಪಡೆಯುವ ಫಲಾನುಭವಿಗಳಲ್ಲ. ಒಂದು ವೇಳೆ ಸರ್ವೇ ನಡೆದರೆ ಅದರಲ್ಲಿ 35 ಲಕ್ಷಕ್ಕೂ ಅಧಿಕ ಮಂದಿಯ ಬಿಪಿಎಲ್ ಕಾರ್ಡ್ ಗಳು ರದ್ದಾಗುವ ಸಾಧ್ಯತೆ ಇದೆ. ಹೀಗಾಗಿ ರಾಜ್ಯ ಸರ್ಕಾರ ಆರು ಮಾನದಂಡಗಳ ಆಧಾರದ ಮೇಲೆ ಸರ್ವೇ ಮಾಡಲು ಹೊರಟಿದೆ. ಸರ್ವೇ ಪ್ರಕಾರ ಆ ನಿಯಮಗಳನ್ನು ಪಾಲನೇ ಮಾಡಿಲ್ಲವಾದರೆ ಆಗ ಬಿಪಿಎಲ್ ಕಾರ್ಡ್ ರದ್ದಾಗುವ ಸಾಧ್ಯತೆ ಇದೆ.

ಹಾಗಾದ್ರೆ ರಾಜ್ಯ ಸರ್ಕಾರ ಸುಳ್ಳು ಬಿಪಿಎಲ್ ಕಾರ್ಡ್ ಮಾಲೀಕರನ್ನು ಕಂಡು ಹಿಡಿಯಲು ಯಾವ ಮಾನದಂಡಗಳನ್ನು ಅನುಸರಿಸಿದೆ ಎಂಬ ವಿವರ ಇಲ್ಲಿದೆ. ವಾರ್ಷಿಕ ಆದಾಯ 1.2 ಲಕ್ಷ ಮೀರಬಾರದು

3 ಹೆಕ್ಟರ್‌ಗಿಂತ ಹೆಚ್ಚಿನ ಒಣಭೂಮಿ ಹೊಂದಿರಬಾರದು

ವೈಟ್ ಬೋರ್ಡ್ ನಾಲ್ಕು ಚಕ್ರದ ವಾಹನ ಇರಬಾರದು

ಯಾವುದೇ ಸರ್ಕಾರಿ ನೌಕರರಾಗಿರಬಾರದು

ನಗರದ ಭಾಗದಲ್ಲಿ ಮನೆಯ ವಿಸ್ತೀರ್ಣ 1000 ಅಡಿ ಇರಬಾರದು

ವಾಣಿಜ್ಯ, ಆದಾಯ ತೆರಿಗೆ, ITR ಪಾವತಿದಾರಾಗಿರಬಾರದು ಇಷ್ಟು ಮಾನದಂಡ ಅನುಸರಿಸಿ, ಕಾರ್ಡ್ ಗಳನ್ನು ಕ್ಯಾನ್ಸಲ್ ಮಾಡಲಾಗುತ್ತದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

Curry Leaves Juice : ಕರಿಬೇವಿನ ಜ್ಯೂಸ್ ಕುಡಿಯುವುದರಿಂದ ಆಗುವ ಲಾಭಗಳೇನು ?

ಸುದ್ದಿಒನ್ : ಅಡುಗೆಯಲ್ಲಿ ಕರಿಬೇವಿನ ಸೊಪ್ಪನ್ನು ಸಾಮಾನ್ಯವಾಗಿ ಬಳಸುತ್ತೇವೆ. ವಿವಿಧ ರೀತಿಯ ಅಡುಗೆಗೆ ಅವಶ್ಯವಾಗಿ ಬಳಸಲಾಗುತ್ತದೆ. ಕರಿಬೇವಿನ ಎಲೆಗಳನ್ನು ಹಾಕುವುದರಿಂದ ಉತ್ತಮ ರುಚಿ ಮತ್ತು ಪರಿಮಳ ಹೆಚ್ಚುತ್ತದೆ. ರುಚಿ ಮತ್ತು ವಾಸನೆ ಮಾತ್ರವಲ್ಲದೆ ತುಂಬಾ

ಈ ರಾಶಿಯ ಗುತ್ತಿಗೆದಾರರಿಗೆ ಹೊಸ ಟೆಂಡರ್ ಹಾಗೂ ಹಳೆ ಬಾಕಿ ಅತಿ ಶೀಘ್ರದಲ್ಲಿ ಪಡೆಯಲಿದ್ದೀರಿ

ಈ ರಾಶಿಯ ಗುತ್ತಿಗೆದಾರರಿಗೆ ಹೊಸ ಟೆಂಡರ್ ಹಾಗೂ ಹಳೆ ಬಾಕಿ ಅತಿ ಶೀಘ್ರದಲ್ಲಿ ಪಡೆಯಲಿದ್ದೀರಿ, ಈ ರಾಶಿಯವರು ಆಸ್ತಿ ಉಡುಗೊರೆಯಾಗಿ ಪಡೆಯುವಿರಿ, ಶನಿವಾರ ರಾಶಿ ಭವಿಷ್ಯ -ಜುಲೈ-27,2024 ಸೂರ್ಯೋದಯ: 05:58, ಸೂರ್ಯಾಸ್ತ : 06:47

ಹೊಳಲ್ಕೆರೆ | ಸ್ನೇಹ ಪಬ್ಲಿಕ್ ಶಾಲೆಯಲ್ಲಿ ಕಾರ್ಗಿಲ್ ವಿಜಯ ದಿವಸ್ ಆಚರಣೆ

ಸುದ್ದಿಒನ್, ಹೊಳಲ್ಕೆರೆ, ಜುಲೈ. 26 : ನಮ್ಮ ರಾಷ್ಟ್ರಧ್ವಜವು ಗಾಳಿಯಿಂದ ಹಾರುತ್ತಿಲ್ಲ ಬದಲಾಗಿ ಅದು ಹಾರುತ್ತಿರುವುದು ಈ ದೇಶಕ್ಕಾಗಿ ಮಡಿದ ವೀರ ಯೋಧರ ಸೈನಿಕರ ಉಸಿರಿನಿಂದ ಎಂದು ಸಂಸ್ಥೆಯ ಕಾರ್ಯದರ್ಶಿ ಜಿ.ಎಸ್. ವಸಂತ್ ಹೇಳಿದರು.

error: Content is protected !!