ಕಾಂಗ್ರೆಸ್ ಸೇರಿರುವ ಗೀತಕ್ಕನ ಜೊತೆ ಶಿವಣ್ಣ ನಾಳೆ ಎಲ್ಲೆಲ್ಲಾ ಪ್ರಚಾರ ಮಾಡ್ತಾರೆ ಗೊತ್ತಾ..?

suddionenews
1 Min Read

ಬೆಂಗಳೂರು: ದೊಡ್ಮನೆ ಸೊಸೆ ಗೀತಾ ಶಿವರಾಜ್ಕುಮಾರ್ ಜೆಡಿಎಸ್ ಬಿಟ್ಟು ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಈ ಮೂಲಕ ಕಾಂಗ್ರೆಸ್ ಅಭ್ಯರ್ಥಿಗಳ ಪ್ರಚಾರ ನಡೆಸಲಿದ್ದಾರೆ. ಗೀತಕ್ಕನ ಜೊತೆಗೆ ಶಿವಣ್ಣ ಕೂಡ ಪ್ರಚಾರ ಕಾರ್ಯದಲ್ಲಿ ತೊಡಗಿಸಿಕೊಳ್ಳಲಿದ್ದಾರೆ. ನಾಳೆ ಕಾಂಗ್ರೆಸ್ ಅಭ್ಯರ್ಥಿಗಳ ಪರ ಶಿವಣ್ಣ ಕೂಡ ಪ್ರಚಾರದಲ್ಲಿ ಭಾಗಿಯಾಗಲಿದ್ದಾರೆ.

ರಾಜ್ಯ ವಿಧಾನಸಭಾ ಚುನಾವಣೆಗೆ ಇನ್ನು ಕೇವಲ 10 ದಿನಗಳು ಮಾತ್ರ ಬಾಕಿ ಇದೆ. ಹೀಗಾಗಿ ಭರ್ಜರಿ ಪ್ರಚಾರ ಕಾರ್ಯಗಳು ನಡೆಯುತ್ತಿವೆ. ನಟ ಶಿವರಾಜ್ಕುಮಾರ್ ಕೂಡ ನಾಳೆಯಿಂದ ಅಭ್ಯರ್ಥಿಗಳ ಪರ ಪ್ರಚಾರ ನಡೆಸಲಿದ್ದಾರೆ. ಶಿವಮೊಗ್ಗದ ಸೊರಬ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮಧು ಬಂಗಾರಪ್ಪ ಅವರ ಪರ ಭರ್ಜರಿ ಪ್ರಚಾರ ನಡೆಸಲಿದ್ದಾರೆ.

ಶಿವಮೊಗ್ಗದಲ್ಲಿ ಪ್ರಚಾರ ನಡೆಸಿದ ಬಳಿಕ, ವರುಣಾದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಪರ ಪ್ರಚಾರ ನಡೆಸಲಿದ್ದಾರೆ. ವರುಣಾ‌ ನಂತರ ಹುಬ್ಬಳ್ಳಿ – ಧಾರಾವಾಡ ಸೆಂಟ್ರಲ್ ಕ್ಷೇತ್ರದಲ್ಲಿ ಜಗದೀಶ್ ಶೆಟ್ಟರ್ ಪರ ಪ್ರಚಾರ ನಡೆಸಲಿದ್ದಾರೆ. ಶಿರಸಿಯಲ್ಲಿ ಭೀಮಣ್ಣ ನಾಯಕ್. ಮತ್ತು ಅಶೋಕ್ ಖೇಣಿ ಪರವೂ ಪ್ರಚಾರ ನಡೆಸಲಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *