Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಐಸಿಸಿ ಅಧ್ಯಕ್ಷರಾದ ಜೈ ಶಾಗೆ ತಿಂಗಳ ಸಂಬಳ ಎಷ್ಟು ಗೊತ್ತಾ..? ಹೋದಲ್ಲಿ ಬಂದಲ್ಲಿ ಎಷ್ಟೆಲ್ಲಾ ಸೌಲಭ್ಯವಿದೆ..?

Facebook
Twitter
Telegram
WhatsApp

ಜೈ ಶಾ.. ಬಹಳ ಕಡಿಮೆ ವಯಸ್ಸಿಗೇನೆ ಉನ್ನತ ಹುದ್ದೆಗೆ ಏರಿರುವ ಹೆಗ್ಗಳಿಕೆ ಇವರದ್ದು. ಈಗಿನ್ನು 35 ವರ್ಷ. ಆದರೆ ಈಗಾಗಲೇ ಅಂತರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ ಗೆ ಜೈ ಶಾ ಅಧ್ಯಕ್ಷರಾಗಿದ್ದಾರೆ. ಅದರಲ್ಲೂ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. 16 ದೇಶಗಳು ಇವರನ್ನು ಒಪ್ಪಿ ಆಯ್ಕೆ ಮಾಡಿದ್ದಾರೆ. ತಮ್ಮ 35ನೇ ವರ್ಷಕ್ಕೆ ಐಸಿಸಿ ಮುಖ್ಯಸ್ಥರಾಗಿರುವ 5ನೇ ಭಾರತೀಯ ಮತ್ತು ಅತ್ಯಂತ ಕಿರಿಯ ಎಂಬ ಹೆಗ್ಗಳಿಕೆ ಜೈಶಾ ಅವರದ್ದಾಗಿದೆ. ಐಸಿಸಿ ಅಧ್ಯಕ್ಷರಾಗಿ ಡಿಸೆಂಬರ್ ನಲ್ಲಿ ಅಧಿಕಾರ ಸ್ವೀಕಾರ ಮಾಡಲಿದ್ದಾರೆ.

ಐಸಿಸಿ ಅಧ್ಯಕ್ಷ ರಾಗಿರುವ ಜೈ ಶಾ ಅವರ ಸಂಬಳ ಎಷ್ಟಿರಬಹುದೆಂಬ ಕುತೂಹಲ ಎಲ್ಲರಲ್ಲೂ ಇದ್ದೆ ಇರುತ್ತದೆ. ಹಾಗೇ ಏನೆಲ್ಲಾ ಸೌಲಭ್ಯಗಳು ಸಿಗಬಹುದು ಎಂಬ ಪ್ರಶ್ನೆಯೂ ಕಾಡುತ್ತದೆ. ಯಾಕಂದ್ರೆ ಚಿಕ್ಕ ವಯಸ್ಸಿನಲ್ಲಿಯೇ ಹಲವು ಜವಾಬ್ದಾರಿಗಳನ್ನು ನಿಭಾಯಿಸಿದವರು ಅವರು. ಮಾಹಿತಿಗಳ ಪ್ರಕಾರ ಐಸಿಸಿ ಉನ್ನತ ಹುದ್ದೆಯಲ್ಲಿರುವ ವ್ಯಕ್ತಿಗಳಿಗೆ ಯಾವುದೇ ನಿರ್ದಿಷ್ಟ ವೇತನವನ್ನು ನಿಗಧಿ ಮಾಡುವುದಿಲ್ಲ. ಜವಾಬ್ದಾರಿ ಮತ್ತು ಕೆಲಸದ ಆಧಾರದ ಮೇಲೆ ಪಾವತಿ ಮಾಡುತ್ತದೆ ಎನ್ನಲಾಗಿದೆ. ಇನ್ನು ಐಸಿಸಿ ಸಭೆ, ಹೋಟೆಲ್ ವಸತಿ, ಪ್ರಯಾಣದ ಟಿಕೆಟ್ ಇವುಗಳ ಕುರಿತಾಗಿ ಐಸಿಸಿ ಇನ್ನು ಯಾವುದೇ ಮಾಹಿತಿಯನ್ನು ಬಹಿರಂಗ ಪಡಿಸಿಲ್ಲ.

ಜೈ ಶಾ ಬಿಸಿಸಿಐ ನಲ್ಲಿದ್ದಾಗ ದೇಶದಿಂದ ಅಂತರಾಷ್ಟ್ರೀಯ ಸಭೆಗಳಲ್ಲಿ ಭಾಗವಹಿಸಲು 82 ಸಾವಿರ, ಭಾರತದಲ್ಲಿಯೇ ನಡೆಯುವ ಸಭೆಗಳಲ್ಲಿ ಭಾಗವಹಿಸುವುದಕ್ಕೆ 40 ಸಾವಿರ, ಸಭೆಗಳನ್ನು ಹೊರತಾಗಿ ದೇಶದ ಒಳಗೆ ಪ್ರವೇಶಿಸಲು 30 ಸಾವಿರ ರೂಪಾಯಿ ನೀಡುತ್ತಾ ಇತ್ತು. ಇದನ್ನು ಹೊರತುಪಡಿಸಿ ಹೈಫೈ ಸೌಲಭ್ಯಗಳನ್ನು ನೀಡುತ್ತಾ ಇತ್ತು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯ ಪ್ರೇಮಿಗಳಿಗೆ ಯಾರಿಂದಲೂ ಅಗಲಿಕೆ ಮಾಡಲು ಸಾಧ್ಯವಿಲ್ಲ

ಈ ರಾಶಿಯವರ ಇನ್ಮುಂದೆ ಆರ್ಥಿಕ ಬಲ ಪವರ್ ಫುಲ್. ಈ ರಾಶಿಯ ಪ್ರೇಮಿಗಳಿಗೆ ಯಾರಿಂದಲೂ ಅಗಲಿಕೆ ಮಾಡಲು ಸಾಧ್ಯವಿಲ್ಲ, ಗುರುವಾರ-ರಾಶಿ ಭವಿಷ್ಯ ಸೆಪ್ಟೆಂಬರ್-19,2024 ಸೂರ್ಯೋದಯ: 06:08, ಸೂರ್ಯಾಸ್ತ : 06:11 ಶಾಲಿವಾಹನ ಶಕೆ :1946,

ಸೆಪ್ಟೆಂಬರ್ 28 ರಂದು ಹಿಂದೂ ಮಹಾಗಣಪತಿ ವಿಸರ್ಜನೆ ಹಾಗೂ ಶೋಭಾಯಾತ್ರೆ : 3 ಲಕ್ಷ ಜನ ಭಾಗವಹಿಸುವ ನಿರೀಕ್ಷೆ : ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಮಾಹಿತಿ

ಚಿತ್ರದುರ್ಗ.ಸೆ.18: ಸೆ.28 ರಂದು ನಗರದಲ್ಲಿ ನಡೆಯಲಿರುವ ಹಿಂದೂ ಮಹಾಗಣಪತಿ ವಿಸರ್ಜನಾ ಮೆರವಣೆಗೆ ಹಾಗೂ ಶೋಭಾ ಯಾತ್ರೆಯನ್ನು ಶಾಂತಿ ಹಾಗೂ ಸೌಹಾರ್ಧತೆಯಿಂದ ನಡೆಸುವಂತೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಹಿಂದೂ ಮಹಾ ಗಣಪತಿ ಪ್ರತಿಷ್ಟಾಪನಾ ಸಮಿತಿ ಸದಸ್ಯರಗೆ ಸೂಚನೆ

ಸೆಪ್ಟೆಂಬರ್ 28 ರಂದು ಹಿಂದೂ ಮಹಾಗಣಪತಿ ವಿಸರ್ಜನೆ : ಬಂದೋಬಸ್ತ್ ಕಾರ್ಯಕ್ಕೆ 3000 ಪೊಲೀಸ್ ಸಿಬ್ಬಂದಿ ನೇಮಕ : ರಂಜಿತ್ ಕುಮಾರ ಬಂಡಾರು

ಸೆಪ್ಟೆಂಬರ್‌ 28 ರಂದು ನಡೆಯಲಿರುವ ಹಿಂದೂ ಮಹಾಗಣಪತಿ ವಿಸರ್ಜನಾ ಮೆರವಣೆಗೆ ಹಾಗೂ ಶೋಭಾ ಯಾತ್ರೆಯ ಬಂದೋಬಸ್ತ್ ಕಾರ್ಯಕ್ಕೆ 3000 ಪೊಲೀಸ್ ಸಿಬ್ಬಂದಿ ನಿಯೋಜಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ ಬಂಡಾರು ತಿಳಿಸಿದರು.

error: Content is protected !!