Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಶಾಸಕ ಆರಗ ಜ್ಞಾನೇಂದ್ರ PA ಅರೆಸ್ಟ್ ಕಾರಣ ಏನು ಗೊತ್ತಾ..?

---Advertisement---

ಶಿವಮೊಗ್ಗ: ತೀರ್ಥಹಳ್ಳಿ ಶಾಸಕ ಆರಗ ಜ್ಞಾನೇಂದ್ರ ಅವರ ಆಪ್ತ ಸಹಾಯಕನನ್ನು ಪೊಲೀಸರು ಬಂಧಿಸಿದ್ದಾರೆ. ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ರಾಜೇಶ್ ಹಿರಿಮನೆ, ಅವಹೇಳನಕಾರಿಯಾಗಿ ಪೋಸ್ಟ್ ಹಾಕಿದ್ದರು. ರಾಹುಲ್ ಗಾಂಧಿ ಅವರ ಮುಖ್ ಅರ್ಧ ಭಾಗ ಹಾಗೂ ಪಾಕಿಸ್ತಾನ ಸೇನೆಯ ಸಮವಸ್ತ್ರ ಧರಿಸಿದ ಅಧಿಕಾರಿ ಅಸಿಮ್ ಫೋಟೋವನ್ನು ಎಡಿ್ ಮಾಡಿ, ಒಂದಕ್ಕೊಂದು ಸೇರಿಸಿದ್ದರು.

ಈ ವಿವಾದಾತ್ಮಕ ಚಿತ್ರಕ್ಕೆ ಒನ್ ಅಜೆಂಡಾ ಎಂಬ ಟ್ಯಾಗ್ ಲೈನ್ ನೀಡಿ ಫೇಸ್ ಬುಕ್ ನಲ್ಲಿ ಹರಿಬಿಡಲಾಗಿತ್ತು. ಇದು ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ ಕಾರಣವಾಗಿತ್ತು. ಈ ಆಕ್ಷೇಪಾರ್ಹ ಪೋಸ್ಟ್ ಗಮನಿಸಿದ ಹೊಸನಗರ – ನಗರ ಪೊಲೀಸರು ಮೇ 20, 2025 ರಂದೇ ಬಿಎನ್ಎಸ್ ಕಾಯ್ದೆಯ ಸೆಕ್ಷನ್ 353(2)ರ ಅಡಿಯಲ್ಲಿ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡೊದ್ದರು. ಪ್ರಕರಣದ ತನಿಖೆ ಮುಂದುವರೆಸಿದ್ದು, ಪೊಲೀಸರು ಇದೀಗ ಆರೋಪಿಯನ್ನು ಬಂಧಿಸಿ ಹಾಜರುಪಡಿಸಿದ್ದರು.

ಹೊಸನಗರ ತಾಲೂಕಿನ ಮಳಲಿ ಗ್ರಾಮದ ನಿವಾಸಿ ಹಾಗೂ ಶಾಸಕರ ಆಪ್ತ ಸಹಾಯಕ ರಾಜೇಶ್ ಹಿರಿಮನೆ ಬಂಧಿತ ಆರೋಪಿ. ಇಲ್ಲಿನ ಜೆ.ಎಂ.ಎಫ್.ಸಿ ನ್ಯಾಯಾಲಯವು ಆರೋಪಿಗೆ ಫೆಬ್ರವರಿ 24, 2026 ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶ ಹೊರಡಿಸಿದೆ. ರಾಜೇಶ್ ಹಿರಿಮನೆಯನ್ನ ಅರೆಸ್ಟ್ ಮಾಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now