Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಬೆಂಗಳೂರಿನಲ್ಲಿ ಜಲಕ್ಷಾಮ ಉಂಟಾಗುವುದಕ್ಕೆ ಕಾರಣವೇನು ಗೊತ್ತಾ..?

Facebook
Twitter
Telegram
WhatsApp

ಬೆಂಗಳೂರು: ನಗರಾದ್ಯಂತ ಬೇಸಿಗೆಯ ಆರಂಭದಲ್ಲಿಯೇ ನೀರಿಗೆ ಹಾಹಾಕಾರ ಶುರುವಾಗಿದೆ. ಎಷ್ಟೋ ಏರಿಯಾಗಳಿಗೆ ಈಗಾಗಲೇ ಟ್ಯಾಂಕರ್ ನೀರನ್ನು ಸರಬರಾಜು ಮಾಡಲಾಗುತ್ತಿದೆ. ಅಪಾರ್ಟ್ಮೆಂಟ್ ಗಳಿಗಂತು ನೀರಿನ ಸಮಸ್ಯೆ ಜೋರು ತಲೆದೂರಿದೆ. ಬೆಂಗಳೂರು ಕೆರೆಗಳ ಊರಾಗಿತ್ತು. ಆದರೆ ಸಿಲಿಕಾನ್ ಸಿಟಿಯಲ್ಲಿ ನೀರಿನ ಕ್ಷಾಮ ಎದುರಾಗಿದ್ದೇಕೆ ಎಂಬುದೇ ಎಲ್ಲರ ಪ್ರಶ್ನೆ. ಅದಕ್ಕೆ ಉತ್ತರ ಇಲ್ಲಿದೆ.

 

ನಗರದಲ್ಲಿ ಒಟ್ಟು 4 ಲಕ್ಷ ಕೊಳವೆ ಬಾವಿಗಳಿದೆ. ವಾಡಿಕೆಯಷ್ಟು ಮಳೆಯಾಗದ ಕಾರಣ ಅಂತರ್ಜಲ ಪಾತಾಳ ಸೇರಿದ್ದು, ಶೇ.30ರಿಂದ ಶೇ.40ರಷ್ಟು ಬೋರ್ ವೆಲ್ ಗಳು ಬತ್ತಿ ಹೋಗಿವೆ. 16,781 ಕೊಳವೆ ಬಾವಿಗಳ ಪೈಕಿ 6997 ಬೋರ್ ವೆಲ್ ಗಳು ಬತ್ತಿ ಹೋಗಿವೆ. 7,784 ಕೊಳವೆ ಬಾವಿಗಳಷ್ಟೇ ಚಾಲ್ತಿಯಲ್ಲಿವೆ. ಅದಷ್ಟೇ ಅಲ್ಲ ಸಾರ್ವಜನಿಕರೂ ಸ್ವಂತ ಬಳಕೆಗೆ ಕೊರೆಸಿದ್ದ ಕೊಳವೆ ಬಾವಿಗಳಲ್ಲೂ ಅಂತರ್ಜಲದ ಮಟ್ಟ ಕುಸಿತ ಕಂಡಿದೆ.

ಅಂದು ಬೆಂಗಳೂರು ಸುತ್ತಮುತ್ತಲಿನ ವಿಸ್ತಿರ್ಣ ಕಡಿಮೆ ಇತ್ತು. ಆದರೆ ಇಂದು ಆ ವಿಸ್ತೀರ್ಣ 800ರಷ್ಟು ಜಾಸ್ತಿ ಆಗಿದೆ. ಜನಸಂಖ್ಯೆ ಕೂಡ 1.30 ಕೋಟಿಗೆ ಮುಟ್ಟಿದೆ. 2007 ರಲ್ಲಿ ಬಿಬಿಎಂಪಿ ತೆಕ್ಕೆಗೆ 110 ಹಳ್ಳಿ, 7 ನಗರಸಭೆ ಹಾಗೂ ಪುರಸಭೆಗೆ ನೀರು ಕಲ್ಪಿಸಲಾಗಿತ್ತು. ಹೀಗಾಗಿ ಎಲ್ಲಾ ಸಾಕಷ್ಟು ನೀರಿನ ಸಮಸ್ಯೆ ಉಂಟಾಗಿದೆ. ಮಳೆ ಇಲ್ಲದೆ ಕಾವೇರಿ ಕೊಳ್ಳದಲ್ಲೂ ಮಳೆಯಿಲ್ಲದೆ ನೀರಿಗೆ ಅಭಾವ ಬಂದಿದೆ. ಕೆರೆ ಕಟ್ಟೆಗಳು, ಕೊಳವೆ ಬಾವಿಗಳು ಬತ್ತಿ ಹೋಗಿದೆ. ಈ ಎಲ್ಲದರಿಂದಾಗಿ ನೀರಿಗೆ ಸಮಸ್ಯೆಯಾಗಿದೆ‌. ಹೀಗಾಗಿ ಬೆಂಗಳೂರಿನಾದ್ಯಂತ ನೀರಿಗೆ ಹಾಹಾಕಾರ ಶುರುವಾಗಿದೆ. ಅದಕ್ಕೆ ಜನ ಟ್ಯಾಂಕರ್ ಮೂಲಕ, ಕ್ಯಾನ್ ಮೂಲಕ ನೀರನ್ನು ಒದಗಿಸಲಾಗುತ್ತಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಸಾಹಿತಿ ಬಿ.ಎಲ್.ವೇಣು ನಿವಾಸಕ್ಕೆ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಭೇಟಿ

ಸುದ್ದಿಒನ್, ಚಿತ್ರದುರ್ಗ, ಮೇ. 02 :  ಖ್ಯಾತ ಸಾಹಿತಿ, ಚಿಂತಕ ಬಿ.ಎಲ್.ವೇಣು ಅವರ ನಿವಾಸಕ್ಕೆ ಸ್ಥಳೀಯ ಶಾಸಕ ಕೆ.ಸಿ.ವೀರೆಂದ್ರ ಪಪ್ಪಿ ಅವರು ಭೇಟಿ ಮಾಡಿ, ಆಶೀರ್ವಾದ ಪಡೆದು, ಅಭಿವೃದ್ಧಿ ಕಾರ್ಯಗಳ ಬಗ್ಗೆ ಸಲಹೆಗಳನ್ನು ಪಡೆದರು.

ಹೆಚ್ಚುತ್ತಿರುವ ಬಿಸಿಲ ಝಳ : ಸಾರ್ವಜನಿಕರು ಅನುಸರಿಸಬೇಕಾದ ಸರಳ ಉಪಾಯಗಳ ಬಗ್ಗೆ ಮಾಹಿತಿ ನೀಡಿದ ಜಿಲ್ಲಾ ಆಯುಷ್ ಅಧಿಕಾರಿ ಡಾ.ಚಂದ್ರಕಾಂತ್ ಎಸ್.ನಾಗಸಮುದ್ರ

ಚಿತ್ರದುರ್ಗ. ಮೇ.02: ರಾಜ್ಯಾದ್ಯಂತ ಬಿಸಿಲಬೇಗೆ ದಿನೇ ದಿನೇ ಹೆಚ್ಚಾಗುತ್ತಿದ್ದು, ಇನ್ನೂ ಕೆಲವು ದಿನಗಳ ಕಾಲ ಉಷ್ಣ ಹವೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಿಸಿಲ ಝಳವು ಮನುಷ್ಯನ ಆರೋಗ್ಯದ ಮೇಲೆ ತೀವ್ರತರವಾದ

ಕಾರ್ಮಿಕರು ಕೆಲಸದ ಜೊತೆ ಆರೋಗ್ಯದ ಕಡೆಗೂ ಹೆಚ್ಚಿನ ಗಮನ ಕೊಡಬೇಕು : ನ್ಯಾಯಾಧೀಶೆ ಬಿ.ಗೀತ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 02 : ಅನೇಕ ಸೌಲಭ್ಯಗಳಿಂದ ವಂಚಿತರಾಗಿರುವ ಅಸಂಘಟಿತ ಕಾರ್ಮಿಕರಿಗೆ ಹಕ್ಕುಗಳ ಕುರಿತು ಕಾನೂನು ಜಾಗೃತಿ

error: Content is protected !!