ಧನಿಯಾ ಬೀಜವನ್ನ ಬಳಸುವುದರಿಂದ ಏನೆಲ್ಲಾ ಆರೋಗ್ಯ ಲಾಭಗಳಿದಾವೆ ಗೊತ್ತಾ..?

 

ನಮ್ಮ ಅಡುಗೆ ಮನೆಯಲ್ಲಿರುವ ಪದಾರ್ಥಗಳೇ ನಮ್ಮ ಆರೋಗ್ಯವನ್ನ ಕಾಪಾಡುತ್ತವೆ. ಆ ಬಗ್ಗೆ ನಮ್ಮ ಹಿರಿಯರು ಈಗಾಗಲೇ ಸಾಕಷ್ಟು ಸಲ ಹೇಳಿದ್ದಾರೆ. ಅದರಲ್ಲೂ ಈ ಗ್ಯಾಸ್ಟ್ರಿಕ್‌ ಸಮಸ್ಯೆ ಇರುವವರು, ಜೀರ್ಣಕ್ರಿಯೆ ಸರಿಯಾಗಿ ಆಗುತ್ತಿಲ್ಲ ಎನ್ನುವವರು ಅಡುಗೆ ಮನೆಯಲ್ಲಿರುವ ಅಡುಗೆಗೆ ಪ್ರತಿನಿತ್ಯ ಬಳಸುವ ಪದಾರ್ಥಗಳಿಂದಾನೇ ಆರೋಗ್ಯ ಸಮಸ್ಯೆಯನ್ನ ಬಗೆಹರಿಸಿಕೊಳ್ಳಬಹುದು. ಅದರಲ್ಲೂ ಧನ್ಯ ಎಲ್ಲರ ಮನೆಯಲ್ಲೂ ಇದ್ದೇ ಇರುತ್ತದೆ. ಆ ಧನ್ಯದಿಂದ ಏನೆಲ್ಲಾ ಆರೋಗ್ಯಕರ ಲಾಭಗಳು ಇದಾವೆ ಎಂಬುದರ ಮಾಹಿತಿ ಇಲ್ಲಿದೆ‌ ನೋಡಿ.

 

1. ಜೀರ್ಣಕ್ರಿಯೆ ಸುಧಾರಿಸಲು ಈ ಧನ್ಯವನ್ನು ಮದ್ದಾಗಿ ಬಳಸಬಹುದಾಗಿದೆ. ಇದನ್ನ ಬಳಕೆ ಮಾಡುವುದು ಹೇಗೆ ಗೊತ್ತಾ..? 1 ಚಮಚ ಕೊತ್ತಂಬರಿ ಬೀಜವನ್ನು ನೀರಿನಲ್ಲಿ ಕುದಿಸಿ. ನಂತರ ತಣ್ಣಗಾಗಲು ಬಿಡಿ. ಆ ನೀರನ್ನ ಕುಡಿಯುತ್ತಾ ಬಂದರೆ ನಿಮಗೆ ಜೀರ್ಣಕ್ರಿಯೆ ಸುಲಲಿತವಾಗುತ್ತದೆ. ಇದರಿಂದ ಹೊಟ್ಟೆ ಉರಿಯೂತ, ಆಮ್ಲತೆ (ಅಸಿಡಿಟಿ), ಗ್ಯಾಸ್ಟ್ರಿಕ್ ಸಮಸ್ಯೆ ನಿವಾರಣೆಯಾಗುತ್ತದೆ.

ಅಷ್ಟೇ ಅಲ್ಲ ರಕ್ತದೊತ್ತಡ ಬಿ.ಪಿ.ನಿಯಂತ್ರಣಕ್ಕೆ ಬರುತ್ತದೆ. 1 ಚಮಚ ಕೊತ್ತಂಬರಿ ಬೀಜವನ್ನು ರಾತ್ರಿ ನೀರಿನಲ್ಲಿ ನೆನೆಸಿ, ಬೆಳಗ್ಗೆ ಖಾಲಿ ಹೊಟ್ಟೆಗೆ ಆ ತಂಪಾಗಿರುವ ನೀರನ್ನು ಸೋಸಿ ಕುಡಿಯಿರಿ. ಇದರಿಂದ ರಕ್ತ ಒತ್ತಡ ನಿಯಂತ್ರಣಕ್ಕೆ ಬರಲಿದೆ. ರಕ್ತದೊತ್ತಡ ತಗ್ಗಿಸಲು, ದೇಹದ ತಾಪಮಾನವನ್ನು ಸಮತೋಲನದಲ್ಲಿರಿಸಲು ಸಹಾಯ ಮಾಡುತ್ತದೆ. ಹೀಗಾಗಿ ಪ್ರತಿದಿನ ಈ ನೀರನ್ನ ಸೇವಿಸಿ.

ಇನ್ನು ಥೈರಾಯ್ಡ್ ಸಮಸ್ಯೆ ಇರುವವರು ಹೆಚ್ಚಾಗಿದ್ದಾರೆ. ಅಂಥವರು ರಾತ್ರಿ ನೀರಿನಲ್ಲಿ ಮೇಲಿನ ಪ್ರಮಾಣದಲ್ಲಿ ನೆನೆಸಿಟ್ಟು ಬೆಳಿಗ್ಗೆ ಖಾಲಿ ಹೊಟ್ಟೆಗೆ ತಂಪಾದ ಕೊತ್ತಂಬರಿ ನೀರನ್ನು ಸೋಸಿ ಕುಡಿಯಿರಿ ದೇಹಕ್ಕೆ ತಂಪು, ಥೈರಾಯ್ಡ್ ನಿಂದ ಮುಕ್ತಿಯನ್ನು ಪಡೆಯಬಹುದಾಗಿದೆ.

suddionenews

Recent Posts

ಆರ್‌ಸಿಬಿ VS ಕೆಕೆಆರ್ : ಇದು ಬರೀ ಗೆಲುವಲ್ಲ : 18 ವರ್ಷಗಳ ಹಿಂದೆ ರಾಹುಲ್ ದ್ರಾವಿಡ್‌ಗೆ ಆದ ಅವಮಾನಕ್ಕೆ ಸೇಡು ತೀರಿಸಿಕೊಂಡ ವಿರಾಟ್ ಕೊಹ್ಲಿ

ಸುದ್ದಿಒನ್ : ಐಪಿಎಲ್ 2025 ರ ಮೊದಲ ಪಂದ್ಯದಲ್ಲಿ ಆರ್‌ಸಿಬಿ ಭರ್ಜರಿ ಗೆಲುವು ಸಾಧಿಸಿದೆ. ಎದುರಾಳಿ ಕೆಕೆಆರ್ ವಿರುದ್ಧ ತವರಿನಲ್ಲಿ…

2 hours ago

ಚಿತ್ರದುರ್ಗ : ಜೆಸಿಆರ್ ಬಡಾವಣೆ ಬಳಿ ಭೀಕರ ಅಪಘಾತ : ಇಬ್ಬರು ಸಾವು

ಸುದ್ದಿಒನ್, ಚಿತ್ರದುರ್ಗ, ಮಾರ್ಚ್. 23 : ನಗರದ ಜೆಸಿಆರ್ ಬಡಾವಣೆ 7 ನೇ ಕ್ರಾಸ್ ಸಮೀಪದ ರಾಷ್ಟ್ರೀಯ ಹೆದ್ದಾರಿಯ ಬ್ರಿಡ್ಜ್…

4 hours ago

ಆರ್‌ಸಿಬಿ ಶುಭಾರಂಭ : ಕೆಕೆಆರ್ ವಿರುದ್ಧದ ಮೊದಲ ಪಂದ್ಯದಲ್ಲಿ ಭರ್ಜರಿ ಗೆಲುವು

ಸುದ್ದಿಒನ್ : ಐಪಿಎಲ್-18ನೇ ಆವೃತ್ತಿಯ ಮೊದಲ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ಭರ್ಜರಿ ಗೆಲುವು ಸಾಧಿಸಿತು. ಬೆಂಗಳೂರು ತಂಡವು…

4 hours ago

ವಿಪರೀತ ತಲೆನೋವಿನಿಂದ ಬಳಲುತ್ತಿದ್ದೀರಾ?

ಸುದ್ದಿಒನ್ : ತಲೆನೋವು ಬಹುತೇಕ ಎಲ್ಲರೂ ಎದುರಿಸುವ ಪ್ರಮುಖ ಆರೋಗ್ಯ ಸಮಸ್ಯೆಗಳಲ್ಲಿ ಒಂದಾಗಿದೆ. ಈ ತಲೆನೋವಿನಿಂದ ಅನೇಕ ಜನರು ಬಳಲುತ್ತಿದ್ದಾರೆ.…

7 hours ago

ಈ ರಾಶಿಯವರಿಗೆ ಅತಿ ಶೀಘ್ರದಲ್ಲಿ ಇಷ್ಟಪಟ್ಟವರ ಜೊತೆ ಮದುವೆ ನೆರವೇರಲಿದೆ

ಈ ರಾಶಿಯವರು ತುಂಬಾ ವಿಶ್ವಾಸಿಕರು, ಈ ರಾಶಿಯವರಿಗೆ ಅತಿ ಶೀಘ್ರದಲ್ಲಿ ಇಷ್ಟಪಟ್ಟವರ ಜೊತೆ ಮದುವೆ ನೆರವೇರಲಿದೆ, ಭಾನುವಾರದ ರಾಶಿ ಭವಿಷ್ಯ…

8 hours ago

ಕೋತಿರಾಜನ ಹೊಸ ಸಾಹಸ ; ಬಂಟ್ವಾಳದ ಈ ಬೆಟ್ಟ ಹತ್ತಲಿದ್ದಾರೆ ನಾಳೆ..!

ಕೋತಿರಾಜ್ ಯಾರಿಗೆ ತಾನೇ ಗೊತ್ತಿಲ್ಲ ಹೇಳಿ. ಚಿತ್ರದುರ್ಗ ಮೂಲದವರು. ಜ್ಯೋತಿರಾಜ್ ಮೂಲ ಹೆಸರಾದರೂ ಮಾಡುವ ಸಾಹಸಗಳಿಂದ ಕೋತಿರಾಜ್ ಎಂದೇ ಖ್ಯಾತಿ…

18 hours ago