ಗೃಹಲಕ್ಷ್ಮೀ ಹಣ ನಿಮ್ಮ ಖಾತೆಗೆ ಬರೋದು ಯಾವಾಗ ಗೊತ್ತಾ..? ಇಲ್ಲಿದೆ ನೋಡಿ ಕಂಪ್ಲೀಟ್ ಡಿಟೈಲ್

ಮೈಸೂರು: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ತಾನೂ ನೀಡಿದ್ದ ಗ್ಯಾರಂಟಿಗಳನ್ನೇನೋ ಚಾಲ್ತಿಗೆ ತಂದಿದೆ. ಜನ ಕೂಡ ಅರ್ಜಿಯನ್ನು ಹಾಕಿದ್ದಾರೆ. ಈಗಾಗಲೇ ಶಕ್ತಿ ಯೋಜನೆ ಹಾಗೂ ವಿದ್ಯುತ್ ಉಚಿತ ನೀಡಿ ಆಗಿದೆ. ಈಗ ಬಹು ನಿರೀಕ್ಷಿತ ಯೋಜನೆ ಗೃಹಲಕ್ಷ್ಮೀ. ರಾಜ್ಯದ ಹಿರಿಯ ಮಹಿಳೆಯರು ಇದಕ್ಕಾಗಿಯೇ ಕಾಯುತ್ತಿದ್ದಾರೆ. ಈ ಸಂಬಂಧ ಗೃಹ ಸಚಿವ ಜಿ ಪರಮೇಶ್ವರ್ ಮಾಹಿತಿ ನೀಡಿದ್ದಾರೆ.

ಮೈಸೂರಿನಲ್ಲಿ ಮಾತನಾಡಿದ ಜಿ ಪರಮೇಶ್ವರ್ ಅವರು, ಆಗಸ್ಟ್ 30 ರಂದು ಗೃಹಲಕ್ಷ್ಮೀ ಯೋಜನೆಗೆ ಚಾಲನೆ ಸಿಗಲಿದೆ. ಅಂದು ಬೆಳಗ್ಗೆ 11 ಗಂಟೆಗೆ ರಾಹುಲ್ ಗಾಂಧಿ ಅವರು ಚಾಲನೆ ನೀಡಲಿದ್ದಾರೆ. ಆಗಸ್ಟ್ 30ರಂದೇ ಅಕೌಂಟ್ ಗೆ ಹಣ ಜಮೆ ಆಗುತ್ತದೆ. ಬಟನ್ ಒತ್ತುವ ಮೂಲಕ ಚಾಲನೆ ನೀಡಲಾಗುತ್ತದೆ. ಆ ಕ್ಷಣದಿಂದ ಮನೆಯ ಯಜಮಾನಿಗೆ ಹಣ ಜಮಾವಣೆಯಾಗುತ್ತದೆ. ಬಳಿಕ ಪ್ರತಿ ತಿಂಗಳು ಹಣ ಜಮಾವಣೆಯಾಗಲಿದೆ.

ಜನಗಳಿಗೆ ಏನು ಭರವಸೆ ಕೊಟ್ಟಿದ್ದೇವೊ ಆ ರೀತಿ ನಡೆದುಕೊಳ್ಳುತ್ತಾ ಇದ್ದೀವಿ. ಗ್ಯಾರಂಟಿಗಳನ್ನು ಈಗ ಅನುಷ್ಠಾನ ಮಾಡುತ್ತಿದ್ದೇವೆ. 11 ಗಂಟೆಗೆ ಮೈಸೂರಿನಲ್ಲಿ ಪ್ರಾರಂಭ ಮಾಡ್ತಾ ಇದ್ದೀವಿ. ಸ್ವಲ್ಪ ಸ್ಥಗಿತವಾಗಿರಬಹುದು. ಯಾಕಂದ್ರೆ ಬಜೆಟ್ ನಲ್ಲಿ ಸ್ವಲ್ಪ ಏರುಪೇರಾಗುತ್ತದೆ. ಬಸವರಾಜ್ ಬೊಮ್ಮಾಯಿ ಅವರು ಈ ಮೊದಲೇ ಬಜೆಟ್ ಘೋಷಣೆ ಮಾಡಿದ್ದರು. ಅದನ್ನೆಲ್ಲಾ ನೋಡಿಕೊಂಡು ಮಾಡಬೇಕಾಗುತ್ತದೆ ಎಂದಿದ್ದಾರೆ.

ಇನ್ನು ಇದೇ ವಿಚಾರವಾಗಿ ಹುಬ್ಬಳ್ಳಿಯಲ್ಲಿ ಮಾತನಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಮೈಸೂರಿನಲ್ಲಿ ಗೃಹಲಕ್ಷ್ಮೀ ಯೋಜನೆಗೆ ಚಾಲನೆ ನೀಡಲಾಗುವುದು. ಎಲೆಕ್ಷನ್ ಗೋಸ್ಕರ ಮಾಡಿದ ಗ್ಯಾರಂಟಿಗಳಲ್ಲ. ಜನರಿಗಾಗಿ ಮಾಡಿದ ಯೋಜನೆ ಇದು. ಅವರು ಏನೇ ಹೇಳಿದರು ನಮ್ಮ ಕೆಲಸವನ್ನು ನಾವೂ ಮಾಡುತ್ತಾ ಹೋಗುತ್ತೇವೆ. ವಿಪಕ್ಷಗಳು ಮೊಸರಿನಲ್ಲೂ ಕಲ್ಲು ಹುಡುಕುವ ಕೆಲಸ ಮಾಡುತ್ತಾರೆ ಎಂದಿದ್ದಾರೆ.

suddionenews

Recent Posts

ಮೈಕ್ರೋ ಫೈನಾನ್ಸ್ ಸುಗ್ರಿವಾಜ್ಞೆಗೆ ಅಂಕಿತ ಹಾಕದ ರಾಜ್ಯಪಾಲರು : ಸರ್ಕಾರಕ್ಕೆ ಹಿನ್ನಡೆ

ಬೆಂಗಳೂರು: ರಾಜ್ಯಾದ್ಯಂತ ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳ ಹೆಚ್ಚಾಗಿದೆ. ಇದರಿಂದ ಅದೆಷ್ಟೋ ಜನ ತಮ್ಮ ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ಸಾಲ ಕೊಟ್ಟ…

1 hour ago

ಚಿತ್ರದುರ್ಗ APMC | ಶೇಂಗಾ, ಕಡಲೆ ಸೇರಿದಂತೆ ಇತರೆ ಉತ್ಪನ್ನಗಳ ಫೆಬ್ರವರಿ 07 ರ ಮಾರುಕಟ್ಟೆ ಧಾರಣೆ ವಿವಿರ ಇಲ್ಲಿದೆ…!

  ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 07 : ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಶೇಂಗಾ, ಕಡಲೆ, ಮೆಕ್ಕೆಜೋಳ ಸೇರಿದಂತೆ ಇತರೆ…

2 hours ago

ಚಿತ್ರದುರ್ಗದ ಅಳಿಯ ಡಾಲಿ ಮೇಲೆ ದರ್ಶನ್ ಫ್ಯಾನ್ಸ್ ಗರಂ : ಫುಲ್ ಟ್ರೋಲ್..!

ಬೆಂಗಳೂರು: ನಟ ಡಾಲಿ ಧನಂಜಯ್ ಮದುವೆ ಸಂಭ್ರಮದಲ್ಲಿದ್ದಾರೆ. ಚಿತ್ರದುರ್ಗದ ಅಳಿಯ ಬೇರೆ ಆಗ್ತಾ ಇದ್ದಾರೆ. ಧನ್ಯತಾ ಮೂಲತಃ ಚಿತ್ರದುರ್ಗದವರು. ಆದರೆ…

4 hours ago

ಮೂಡಾ ಅಪ್ಡೇಟ್: ಸಿಎಂ ಸಿದ್ದರಾಮಯ್ಯರಿಗೆ ರಿಲೀಫ್ ನೀಡಿದ ಹೈಕೋರ್ಟ್

ಬೆಂಗಳೂರು: ಇಂದು ಹೈಕೋರ್ಟ್ ಮೂಡಾ ಹಗರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ್ದು ಸಿಎಂ ಸಿದ್ದರಾಮಯ್ಯ ಅವರಿಗೆ ಬಿಗ್ ರಿಲೀಫ್ ನೀಡಿದೆ. ಈ…

5 hours ago

ಈ ರಾಶಿಯವರಿಗೆ ಒಳ್ಳೆಯ ಉದ್ಯೋಗ ಅವಕಾಶಗಳು ಒದಗಿ ಬರಲಿವೆ

ಈ ರಾಶಿಯವರಿಗೆ ಒಳ್ಳೆಯ ಉದ್ಯೋಗ ಅವಕಾಶಗಳು ಒದಗಿ ಬರಲಿವೆ, ಈ ರಾಶಿಯವರಿಗೆ ಉತ್ತಮ ಸಂಗಾತಿ ಸಿಗುವರು, ಶುಕ್ರವಾರದ ರಾಶಿ ಭವಿಷ್ಯ…

11 hours ago

ಫೆಬ್ರವರಿ 10ಕ್ಕೆ ಕರ್ನಾಟಕದಲ್ಲಿ ಕುಂಭಮೇಳ : ಹೇಗಿದೆ ತಯಾರಿ..?

  144 ವರ್ಷಗಳಿಗೊಮ್ಮೆ ಬರುವ ಮಹಾಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡಿದರೆ ಕರ್ಮ ಕಳೆಯುತ್ತದೆ ಎಂದು ನಂಬಲಾಗಿದೆ. ಹೀಗಾಗಿ ಕೋಟ್ಯಾಂತರ ಮಂದಿ…

20 hours ago