Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ನಿಖಿಲ್ ಕುಮಾರಸ್ವಾಮಿ ಈ ಬಾರಿ ಸ್ಪರ್ಧಿಸುವ ಕ್ಷೇತ್ರ ಯಾವುದು ಗೊತ್ತೆ ?

---Advertisement---

ಮಂಡ್ಯ, ಬಳಿಕ ರಾಮನಗರದಲ್ಲಿ ಆಘಾತಕಾರಿ ಸೋಲುಂಡರು. ಇದೀಗ 2028ರ ಚುನಾವಣೆಗೆ ಸ್ಪರ್ಧಿಸಲು ನಿಖಿಲ್ ಸಿದ್ಧತೆ ನಡೆಸಿದ್ದಾರೆ.ಈ ಬಾರಿಯೂ ರಾಮನಗರದಿಂದಲೇ ಸ್ಪರ್ಧಿಸೋದಾಗಿ ಘೋಷಣೆ ಮಾಡಿದ್ದಾರೆ.’ನಾನು ರಾಮನಗರಕ್ಕೆ ಫಿಕ್ಸ್ ಆಗಿದ್ದೇನೆ, ಯಾವುದೇ ಅನುಮಾನ ಬೇಡ. ನಾನು ಪಲಾಯನವಾದಿ ರಾಜಕಾರಣ‌ ಮಾಡಲ್ಲ, ನಮ್ಮ ಕಾರ್ಯಕರ್ತರ ಆದೇಶವೇ ಅಂತಿಮ’ ಎಂದು ಹೇಳುವ ಮೂಲಕ ಮುಂದಿನ ಚುನಾವಣೆಯಲ್ಲಿ ರಾಮನಗರ ಕ್ಷೇತ್ರದಿಂದ ಸ್ಪರ್ಧಿಸುವುದಾಗಿ ನಿಖಿಲ್ ಕುಮಾರಸ್ವಾಮಿ ಘೋಷಣೆ ಮಾಡಿದ್ದಾರೆ.

ಮುಂದಿನ ಚುನಾವಣೆಯಲ್ಲಿ ನಾನು ಎಲ್ಲಿಂದ ಸ್ಪರ್ಧಿಸುತ್ತೇನೆ ಎಂಬುದರ ಬಗ್ಗೆ ಪದೇ ಪದೇ ಪ್ರಶ್ನೆ ಕೇಳಬೇಡಿ. ರಾಮನಗರದಲ್ಲಿ ಸ್ಪರ್ಧಿಸುವ ವಿಷಯದಲ್ಲಿ ಅಷ್ಟೊಂದು ಅನುಮಾನ ಬೇಡ. ರಾಮನಗರ ಜನರೇ ನನ್ನ ಸ್ಪರ್ಧೆ ಬಗ್ಗೆ ಯಾರೂ ಅನುಮಾನ ಪಡುವುದು ಬೇಡ.

ರಾಮನಗರ ಕ್ಷೇತ್ರದಿಂದ ಸ್ಪರ್ಧೆ ಮಾಡುವುದು ನಿಶ್ಚಿತ’ ಎಂದು ನಿಖಿಲ್ ಘೋಷಣೆ ಮಾಡಿದ್ದಾರೆ. ‘ದೇವೇಗೌಡರ ಕುಟುಂಬ ಈ ಕ್ಷೇತ್ರದ ಅಭಿವೃದ್ಧಿ ಹಾಗೂ ಜನರಿಗಾಗಿ ದುಡಿದಿದೆ. ಆ ಜನ ನಮ್ಮನ್ನು ಕಾಪಾಡುತ್ತಾರೆ ಎಂಬ ವಿಶ್ವಾಸ ಇದೆ’ ಎಂದು ಹೇಳಿದ್ದಾರೆ.’ನನ್ನನ್ನು ನಂಬಿರುವ ಪಕ್ಷದ ಮುಖಂಡರು, ಕಾರ್ಯಕರ್ತರು ಹಾಗೂ ಜನರನ್ನು ಬಿಟ್ಟು ಹೋಗುವ ಪ್ರಶ್ನೆಯೇ ಇಲ್ಲ. ರಾಮನಗರ ಕ್ಷೇತ್ರದಿಂದ ಸ್ಪರ್ಧೆ ಮಾಡಲು ನಿರ್ಧರಿಸಿದ್ದೇನೆ’ ಎಂದು ನಿಖಿಲ್ ಕುಮಾರಸ್ವಾಮಿ ಹೇಳಿದ್ರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now