Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಸಂಬಳವನ್ನು ಬೇಡ ಎಂದ ಈ ಇಬ್ಬರು ಲೋಕಸಭಾ ಸಂಸದರು ಯಾರು ಗೊತ್ತೇ?

---Advertisement---

ಲೋಕಸಭೆಯ  ಇಬ್ಬರು ಸಂಸದರು ಸಂಬಳ ಪಡೆಯದೇ ಇರಲು ನಿರ್ಧರಿಸಿದ್ದಾರೆ. ಒಬ್ಬರು ಬಿಜೆಪಿ ಪಕ್ಷದವರಾದರೆ , ಇನ್ನೊಬ್ಬರು ಕಾಂಗ್ರೆಸ್‌ನವರು‌. ಈ ಮಾಹಿತಿಯನ್ನು ಮಾಹಿತಿ ಹಕ್ಕು ಕಾಯ್ದೆಯಡಿ ಮಾಧ್ಯಮವೊಂದು ಬಹಿರಂಗಪಡಿಸಿದೆ.

ಈ ಇಬ್ಬರು ಸಂಸದರು ಒಂದು ರೂಪಾಯಿ ಕೂಡ ಸಂಬಳ ಬೇಡ ಎಂದಿದ್ದಾರೆ.ಲೋಕಸಭಾ ಸಚಿವಾಲಯದ ಮಾಹಿತಿ ಪ್ರಕಾರ ಕುರುಕ್ಷೇತ್ರದ ಸಂಸದ ನವೀನ್ ಜಿಂದಾಲ್ ಮತ್ತು ಇನ್ನರ್ ಮಣಿಪುರದ ಸಂಸದ ಡಾ. ಬಿಮೋಲ್ ಅಕೋಯಿಜಮ್ ಅಂಗೋಮ್ಚಾ ಅವರು ಸಂಬಳ ಪಡೆಯದಿರಲು ತೀರ್ಮಾನಿಸಿದ್ದಾರೆ. ಜಿಂದಾಲ್ ಅವರು ಭತ್ಯೆ ಅಥವಾ ಸವಲತ್ತುಗಳನ್ನು ಕೂಡ ನಿರಾಕರಿಸಿದ್ದಾರೆ.  ಜಿಂದಾಲ್ ಅವರು ಕಚೇರಿಯೊಂದಿಗೆ ಬರುವ ಸರ್ಕಾರಿ ಸವಲತ್ತು ಮತ್ತು ಭತ್ಯೆಗಳು ಕೂಡ ಬೇಡ ಎಂದು ತಿಳಿಸಿದ್ದಾರೆ ಎನ್ನಲಾಗಿದೆ.

ಚುನಾವಣಾ ಅಫಿಡವಿಟ್‌ಗಳ ಪ್ರಕಾರ, ಕುರುಕ್ಷೇತ್ರದ ಸಂಸದ ನವೀನ್ ಜಿಂದಾಲ್ 1,241 ಕೋಟಿ ರೂ. ಮೌಲ್ಯದ ಆಸ್ತಿಯನ್ನು ಹೊಂದಿದ್ದು, ಇನ್ನರ್ ಮಣಿಪುರವನ್ನು ಪ್ರತಿನಿಧಿಸುವ ಡಾ. ಬಿಮೋಲ್ ಅಕೋಯಿಜಮ್ ಅಂಗೋಮ್ಚಾ ಸುಮಾರು 97 ಲಕ್ಷ ರೂ. ಆಸ್ತಿಯನ್ನು ಹೊಂದಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...