Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಒಳ ಮೀಸಲಾತಿಗೆ ರೊಚ್ಚಿಗೆದ್ದು ಬಂಜಾರ ಸಮುದಾಯ ಪ್ರತಿಭಟನೆ ನಡೆಸುತ್ತಿರುವುದು ಯಾಕೆ ಗೊತ್ತಾ..?

Facebook
Twitter
Telegram
WhatsApp

ಬೆಂಗಳೂರು: ಸಿಎಂ ಬಸವರಾಜ್ ಬೊಮ್ಮಾಯಿ ಸರ್ಕಾರ ಎಸ್ಸಿ/ಎಸ್ಟಿ ಸಮುದಾಯದ ಒಳ ಮೀಸಲಾತಿಯನ್ನು ಜಾರಿಗೆ ತರುವ ವಿಚಾರವಾಗಿ ಇತ್ತಿಚೆಗಷ್ಟೇ ಮಾತನಾಡಿದ್ದರು. 101 ಜಾತಿಗಳಿಗೆ ಒಳ ಮೀಸಲಾತಿ ನೀಡುವ ಬಗ್ಗೆ ತೀರ್ಮಾನ ಕೈಗೊಂಡಿದ್ದೇವೆ ಎಂದು ತಿಳಿಸಿದ್ದರು. ಈ ವಿಚಾರ ಬಂದ ಬಳಿಕ ಬಂಜಾರ ಸಮುದಾಯ ರೊಚ್ಚಿಗೆದ್ದಿದೆ. ಶಿಕಾರಿಪುರದಲ್ಲಿ ಉದ್ವಿಗ್ನ ವಾತಾವರಣ ಸೃಷ್ಟಿಸುವಷ್ಟು ದಂಗೆ ಎದ್ದಿದ್ದಾರೆ. ಅದಕ್ಕೆಲ್ಲಾ ಕಾರಣ ಏನು ಎಂಬುದು ಇಲ್ಲಿದೆ ನೋಡಿ.

ಸದ್ಯ ರಾಜ್ಯದಲ್ಲಿ ಪರಿಶಿಷ್ಟ ಜಾತಿಗೆ ಶೇ.15ರಷ್ಟು ಮೀಸಲಾತಿ ಇದೆ. ಇದನ್ನು 15ರಿಂದ 17ಕ್ಕೆ ಏರಿಕೆ ಮಾಡಿ, ನಾಲ್ಕು ಗುಂಪುಗಳಿಗೆ ಜನಸಂಖ್ಯೆಯ ಆಧಾರದ ಮೇಲೆ ಹಂಚಿಕೆ ಮಾಡಲು ಸಂಪುಟ ತೀರ್ಮಾನ ಮಾಡಿದೆ. ಉಪಸಮಿತಿ ಇದನ್ನು ಶಿಫಾರಸ್ಸು ಮಾಡಿತ್ತು. ಪರಿಶಿಷ್ಟ ಜಾತಿಯ ಮೊದಲ ಗುಂಪು ಅಂದ್ರೆ ಎಡಗೈ ಸಮುದಾಯಕ್ಕೆ ಶೇ.6 ರಷ್ಟು ಮೀಸಲಾತಿ, ಬಲಗೈ ಹಾಗೂ ಉಳಿದ ಸಮುದಾಯಗಳು ಎರಡನೇ ಗುಂಪಿಗೆ ಸೇರ್ಪಡೆಯಾಗುತ್ತವೆ. ಅವಕ್ಕೆ ಶೇ. 5.5 ಮೀಸಲಾತಿ. ಮೂರನೇ ಗುಂಪು ಬಂಜಾರ, ಭೋವಿ, ಕೊರಮ, ಕೊರಚ ಸಮುದಾಯಕ್ಕೆ 4.5 ಮೀಸಲಾತಿಯನ್ನು ನೀಡಲು ತೀರ್ಮಾನಿಸಲಾಗಿದೆ.

ಈಗ ಬಂಜಾರ ಸಮುದಾಗ ಇಷ್ಟೊಂದು ದಂಗೆ ಏಳಲು ಕಾರಣವೇ ಇದು. ಯಾಕಂದ್ರೆ ಈ ಮೊದಲು ಪರಿಶಿಷ್ಟ ಜಾತಿಗೆ ಸಿಗುತ್ತಾ ಇದ್ದಂತ ಶೇಕಡ 15 ರಷ್ಟು ಮೀಸಲಾತಿಯಲ್ಲಿ ಬಂಜಾರ ಸಮುದಾಯ ಬಹುಪಾಲು ಮೀಸಲಾತಿಯನ್ನು ಪಡೆಯುತ್ತಿದ್ದರು. ಈಗ ಶೇಕಡ 4.5 ರಷ್ಟು ಮೀಸಲಾತಿಯಲ್ಲಿಯೇ ನಾಲ್ಕು ಜಾತಿಗಳು ಹಂಚಿಕೆ ಮಾಡಿಕೊಳ್ಳಬೇಕಾಗಿದೆ. ಇದರಿಂದ ಆಕ್ರೋಶಗೊಂಡು ಬಂಜಾರ ಸಮುದಾಯ ಶಿವಮೊಗ್ಗದಲ್ಲಿ ಪ್ರತಿಭಟನೆ ನಡೆಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಗೋ ಬ್ಯಾಕ್ ಗೋವಿಂದ ಕಾರಜೋಳ | ಬಿಜೆಪಿ ಅಭ್ಯರ್ಥಿಗೆ ಚಿತ್ರದುರ್ಗದಲ್ಲಿ ತಟ್ಟಿದ ಬಂಡಾಯದ ಬಿಸಿ..!

ಸುದ್ದಿಒನ್, ಚಿತ್ರದುರ್ಗ, ಮಾರ್ಚ್. 29  : ಲೋಕಸಭಾ ಕ್ಷೇತ್ರದಲ್ಲಿ ಮೈತ್ರಿ ಅಭ್ಯರ್ಥಿ ಗೋವಿಂದ ಕಾರಜೋಳಗೆ ಬಂಡಾಯದ ಬಿಸಿ ತಟ್ಟಿದೆ. ಟಿಜೆಟ್ ಘೋಷಣೆಯಾದ ಬಳಿಕ ಮೊದಲ ಬಾರಿಗೆ ಚಿತ್ರದುರ್ಗಕ್ಕೆ ಆಗಮಿಸಿದ್ದರು. ಆದರೆ ಇದೆ ವೇಳೆ ಟಿಕೆಟ್

ಚಿತ್ರದುರ್ಗ | ಯಾದವ ಮಠಕ್ಕೆ ಭೇಟಿ ನೀಡಿ ಶ್ರೀಗಳ ಆಶೀರ್ವಾದ ಪಡೆದ ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್. ಚಂದ್ರಪ್ಪ

  ಸುದ್ದಿಒನ್, ಚಿತ್ರದುರ್ಗ, ಮಾರ್ಚ್.29 : ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಧಿಕೃತ ಅಭ್ಯರ್ಥಿ ಬಿ.ಎನ್. ಚಂದ್ರಪ್ಪ ರವರು ಯಾದವ ಸಂಸ್ಥಾನ ಮಹಾ ಮಠಕ್ಕೆ ಭೇಟಿ ನೀಡಿ ಶ್ರೀ ಶ್ರೀ ಶ್ರೀ ಬಸವ

28 ಕ್ಷೇತ್ರಗಳಲ್ಲೂ ಎನ್.ಡಿ.ಎ. ಮೈತ್ರಿ ಕೂಟಕ್ಕೆ ಗೆಲುವು : ಗೋವಿಂದ ಕಾರಜೋಳ

ಸುದ್ದಿಒನ್, ಹಿರಿಯೂರು, ಮಾರ್ಚ್. 29 : ರಾಜ್ಯದ 28 ಲೋಕಸಭಾ ಕ್ಷೇತ್ರಗಳಲ್ಲಿ ಜೆಡಿಎಸ್ ಮತ್ತು ಬಿಜೆಪಿ ಮೈತ್ರಿ ಗೆಲುವು ಸಾಧಿಸಲಿದೆ ಎಂದು ಎನ್ ಡಿ ಎ ಮೈತ್ರಿ ಕೂಟದ ಅಭ್ಯರ್ಥಿ ಗೋವಿಂದ ಕಾರಜೋಳ ಭರವಸೆ

error: Content is protected !!