Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಎಐಸಿಸಿ ನಾಯಕರ ಮೌನದ ಬಗ್ಗೆ ಕಾಂಗ್ರೆಸ್ ನಾಯಕರ ಬೇಸರ ಯಾಕೆ ಗೊತ್ತಾ..?

---Advertisement---

ಬೆಂಗಳೂರು: ಕಾಂಗ್ರೆಸ್ ಸರ್ಕಾರದಲ್ಲಿ ಸಿಎಂ ಖುರ್ಚಿ ಕದನ ಸೈಲೆಂಟ್ ಆಗಿದ್ದರು ಸಹ ಬೂದಿ ಮುಚ್ಚಿದ ಕೆಂಡದಂತೆ ಇದೆ. ಇದಕ್ಕೆಲ್ಲ ಉತ್ತರ ಕೊಡಬೇಕಾದವರು ಹೈಕಮಾಂಡ್. ಆದರೆ ಸೈಲೆಂಟ್ ಆಗಿರೋದು ಕಾಂಗ್ರೆಸ್ ನಲ್ಲಿರುವ ಶಾಸಕರಿಗೇನೆ ಬೇಸರ ತರಿಸಿದೆ. ನಾಯಕತ್ವದ ಬದಲಾವಣೆಯ ಗೊಂದಲ ನಮ್ಮನ್ನ ಅಡ್ಡ ಕತ್ತರಿಯಲ್ಲಿ ಸಿಲುಕಿಸಿದೆ ಎಂದು ಬೇಸರ ಹೊರ ಹಾಕಿದ್ದಾರೆ.

ಯಾಕಂದ್ರೆ ಸಿಎಂ ಸ್ಥಾನ ಉಳಿಯಬೇಕಾದ್ರೂ, ಸಿಎಂ ಸ್ಥಾನ ಗಳಿಸಬೇಕಾದರೂ ಬಹಳ ಮುಖ್ಯವಾಗಿ ತಮ್ಮ ಪಕ್ಷದ ಸಚುವರು, ಶಾಸಕರ ಬೆಂಬಲ ಎಷ್ಟಿದೆ ಅನ್ನೋದು ಮುಖ್ಯವಾಗುತ್ತೆ. ಹೀಗಾವಿ ಪಕ್ಷದಲ್ಲಿರುವ ಶಾಸಕರು, ಸಚಿವರುಗಳು ಒಬ್ಬರ ಬಳಿ ಹೋದ್ರೆ ಮತ್ತೊಬ್ಬರಿಗೆ ಸಿಟ್ಟು ಬರ್ತಿದೆ ಎಂಬ ಮಾತು ಕೇಳಿ ಬರ್ತಿದೆ ಎನ್ನಲಾಗ್ತಿದೆ.

ಸಿಎಂ ಸಿದ್ದರಾಮಯ್ಯ ಅವರ ಬಳಿ ಅನುದಾನ ಕೇಳಲೆಂದು ಹೋದರೆ ಡಿಸಿಎಂ ಡಿಕೆ ಶಿವಕುಮಾರ್ ಅವರಿಗೆ ಬೇಸರವಾಗ್ತಿದೆ ಎನ್ನಲಾಗ್ತಿದೆ. ಹೀಗಿರುವಾಗ ನಾವೂ ಏನು ಮಾಡೋದು ಅಂತ ಅಧಿವೇಶನದ ಸಂದರ್ಭದಲ್ಲಿ ಶಾಸಕರು ಪರಸ್ಪರ ಮಾತನಾಡಿಕೊಂಡಿದ್ದಾರೆ ಎನ್ನಲಾಗಿದೆ. ನಾಯಕತ್ವ ಬದಲಾವಣೆ ವಿಚಾರದಲ್ಲಿ ಏನೇ ತೀರ್ಮಾನವಿದ್ದರೂ ಕರೆದು ಮಾತುಕತೆ ನಡೆಸುವುದು ಸೂಕ್ತ. ಗೊಂದಲ ಹೀಗೆ ಮುಂದುವರೆದರೆ ಅ್ಉ ಸ್ಥಳೀಯ ಸಂಸ್ಥೆಯ ಚುನಾವಣೆಯಲ್ಲಿ ಕಾಂಗ್ರೆಸ್ ಹಿನ್ನಡೆಗೆ ಕಾರಣ ಆಗಬಹುದು. ಹೀಗಾಗಿ ಎಲ್ಲಾ ಹಿರಿಯ ಸಚಿವರೂ ಗಾಢ ಮೌನ ಮುರಿಯುವಂತೆ ಕಾಂಗ್ರೆಸ್ ಶಾಸಕರು ಆಗ್ರಹಿಸಿದ್ದಾರೆ ಎನ್ನಲಾಗಿದೆ.

ಸಿಎಂ ಆಗಬೇಕೆಂಬ ಆಸೆಯಿದ್ದರು ಡಿಸಿಎಂ ಡಿಕೆ ಶಿವಕುಮಾರ್ ಅವರು ಸಾರ್ವಜನಿಕವಾಗಿ ಆ ಬೇಸರವನ್ನ ತೋರಿಸಿಲ್ಲ. ಹೈಕಮಾಂಡ್ ನಾಯಕರ ಭೇಟಿಗೆ ಪ್ರಯತ್ನ ಪಟ್ಟು ಸುಮ್ಮನಾಗಿದ್ದಾರೆ. ಆದರೂ ಪ್ರಯತ್ನವಂನತು ಬಿಟ್ಟಿಲ್ಲ. ಇಬ್ಬರ ನಡುವೆ ಮಾತುಕತೆ ಆಗಿತ್ತು ಎಂಬೆಲ್ಲಾ ಮಾತುಗಳು ಹರಿದಾಡಿವೆ. ಆದರೆ ಅದಕ್ಕೆ ಸ್ಪಷ್ಟನೆ ಸಿಕ್ಕಿಲ್ಲ. ಸದ್ಯಕ್ಕೆ ಶಾಸಕರೆಲ್ಲಾ ಈ ಸಂಬಂಧ ಬೇಸರ ಹೊರ ಹಾಕಿದ್ದಾರೆ ಎನ್ನಲಾಗಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...