Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಕಾಂತರಾಜು ವರದಿಗೆ ಸಿಎಂ ಓಕೆ ಅಂದ್ರೆ ಡಿಸಿಎಂ ನೋ ಅಂತಿರೋದ್ಯಾಕೆ : ಉಳಿದಂತೆ ಯಾರಿಗೆಲ್ಲಾ ವಿರೋಧವಿದೆ ಗೊತ್ತಾ..?

---Advertisement---

ಕಾಂತರಾಜು ಅವರ ಜಾತಿಗಣತಿ ವರದಿಯನ್ನು ಸ್ವೀಕರಿಸುವುದಾಗಿ ಸಿಎಂ ಸಿದ್ದರಾಮಯ್ಯ ಈಗಾಗಲೇ ತಿಳಿಸಿದ್ದಾರೆ. ಈ ವಿಚಾರ ಕಾಂಗ್ರೆಸ್ ಸರ್ಕಾರದಲ್ಲಿಯೇ ಕೆಲವರಿಗೆ ಒಪ್ಪಿಗೆ ಇಲ್ಲ. ಕಾಂತರಾಜು ವರದಿ ಸ್ವೀಕಾರಕ್ಕೆ ಡಿಸಿಎಂ ಡಿಕೆ ಶಿವಕುಮಾರ್ ಸಹ ಒಪ್ಪಿಗೆ ಸೂಚಿಸಿಲ್ಲ. ಚಿತ್ರದುಗದಲ್ಲಿ ನಡೆದ ಸಮಾವೇಶದಲ್ಲೂ ಕಾಂತರಾಜು ವರದಿ ಸ್ವೀಕಾರದ ಬಗ್ಗೆ ಸಿದ್ದರಾಮಯ್ಯ ಮಾತನಾಡಿದ್ದಾರೆ. ಈಗ ಲೋಕಸಭಾ ಚುನಾವಣೆಯ ಹೊತ್ತಲ್ಲಿ ಸ್ವೀಕಾರ ಮಾಡಿದರೆ ಏನೆಲ್ಲಾ ಪರಿಣಾಮ ಬೀರಬಹುದು ಎಂಬ ಲೆಕ್ಕಚಾರವೂ ಶುರುವಾಗಿದೆ.

ಪ್ರಸ್ತುತ ಕಾಂತರಾಜು ವರದಿಗೆ ಪರ –ವಿರೋಧಗಳು ಇದ್ದು, ಕಾಂಗ್ರೆಸ್ ಸರ್ಕಾರದಲ್ಲಿ ಯಾರೆಲ್ಲಾ ಪರವಾಗಿದ್ದಾರೆ, ಯಾರೆಲ್ಲಾ ವಿರೋಧವಾಗಿದ್ದಾರೆ ಎಂಬ ಡಿಟೈಲ್ ಇಲ್ಲಿದೆ. ಕಾಂತರಾಜು ವರದಿ ಪರವಾಗಿ, ಕೆ.ಹೆಚ್. ಮುನಿಯಪ್ಪ, ಸಚಿವ ಕೆ.ಜೆ. ಜಾರ್ಜ್, ಸಚಿವ ಸತೀಶ್ ಜಾರಕಿಹೊಳಿ, ಸಚಿವ ಪ್ರಿಯಾಂಕ್ ಖರ್ಗೆ, ಸಚಿವ ಜಮೀರ್ ಅಹ್ಮದ್ ಖಾನ್, ಸಚಿವ ಹೆಚ್.ಸಿ. ಮಹಾದೇವಪ್ಪ, ಸಚಿವ ಕೆ.ಎನ್. ರಾಜಣ್ಣ, ಸಚಿವ ಆರ್.ಬಿ. ತಿಮ್ಮಾಪುರ, ಸಚಿವ. ಶಿವರಾಜ ತಂಗಡಗಿ, ಸಚಿವ ಮಂಕಾಳ ವೈದ್ಯ,, ಸಚಿವ ರಹೀಂ ಖಾನ್, ಸಚಿವ ಸಂತೋಷ ಲಾಡ್, ಸಚಿವ ಬೈರತಿ ಸುರೇಶ್, ಸಚಿವ ಮಧು ಬಂಗಾರಪ್ಪ, ಸಚಿವ ನಾಗೇಂದ್ರ, ಸಚಿವ ದಿನೇಶ್ ಗುಂಡೂರಾವ್ ಪರವಾಗಿದ್ದಾರೆ.

ಡಿ.ಕೆ.ಶಿವಕುಮಾರ್, ಕೃಷ್ಣಭರೇಗೌಡ, ಕೆ.ವೆಂಕಟೇಶ್, ಎಂ.ಸಿ.ಸುಧಾಕರ್, ಚಲುವರಾಯಸ್ವಾಮಿ, ಹೆಚ್.ಕೆ ಪಾಟೀಲ್, ಎಂ.ಬಿ.ಪಾಟೀಲ್, ಈಶ್ವರ್ ಖಂಡ್ರೆ, ಶರಣಬಸಪ್ಪ ದರ್ಶನಾಪುರ, ಶಿವಾನಂದ್ ಪಾಟೀಲ್, ಎಸ್.ಎಸ್.ಮಲ್ಲಿಕಾರ್ಜುನ, ಶರಣ್ ಪ್ರಕಾಶ್ ಪಾಟೀಲ್, ಲಕ್ಷ್ಮಿ ಹೆಬ್ಬಾಳ್ಕರ್ ಈ ವರದಿಗೆ ವಿರೋಧಿಸುತ್ತಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment