Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ನಾನು ಬೇಕೋ.. ಬಿಜೆಪಿ ಅಭ್ಯರ್ಥಿ ಬೇಕೋ : ಕಿಲೋ ಮೀಟರ್ ಲೆಕ್ಕ ಹೇಳಿ ಮತದಾರರಿಗೆ ಪ್ರಶ್ನಿಸಿದ ಬಿ ಎನ್ ಚಂದ್ರಪ್ಪ…!

---Advertisement---

ಸುದ್ದಿಒನ್, ಹಿರಿಯೂರು, ಏಪ್ರಿಲ್. 02 : ಲೋಕಸಭಾ ಚುನಾವಣೆಯ ಪ್ರಚಾರ ಕಾರ್ಯ ಆರಂಭವಾಗಿದೆ. ಚಿತ್ರದುರ್ಗ ಕ್ಷೇತ್ರದಿಂದ ಕಾಂಗ್ರೆಸ್ ಪಕ್ಷದಿಂದ ಬಿ. ಎನ್. ಚಂದ್ರಪ್ಪ ಸ್ಪರ್ಧೆ ಮಾಡುತ್ತಿದ್ದಾರೆ. ಇಂದು ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಸಭೆಯಲ್ಲಿ, ಬಿಜೆಪಿ ಅಭ್ಯರ್ಥಿ ಇರುವ ಕಿಲೋ ಮೀಟರ್ ಹೇಳಿ, ಮತವನ್ನು ಯಾರಿಗೆ ಹಾಕಬೇಕೆಂಬುದನ್ನು ಜನರ ನಿರ್ಧಾರಕ್ಕೆ ಬಿಟ್ಟಿದ್ದಾರೆ.

ನನ್ನನ್ನು ಮೂಡಿಗೆರೆ ಚಂದ್ರಪ್ಪ ಎನ್ನುತ್ತಿದ್ದಾರೆ. ನಾನು ಹೊಸದುರ್ಗಕ್ಕೆ ಹೊಂದಿಕೊಂಡಿರುವ ಅಜ್ಜಂಪುರ ತಾಲ್ಲೂಕಿನವನು. ಭದ್ರಾ ಮೇಲ್ದಂಡೆ ಯೋಜನೆಯ ಕೆಳಭಾಗದ ಊರಿನಲ್ಲಿ ಹುಟ್ಟಿದವನು. ಚಿತ್ರದುರ್ಗ ಕ್ಷೇತ್ರಕ್ಕೆ ಬಿಜೆಪಿ ಪಕ್ಷ ಆಕಸ್ಮಿಕ ಅಭ್ಯರ್ಥಿಯನ್ನ ಕಣಕ್ಕಿಳಿಸಿದೆ. ಬಿಜೆಪಿ ಅಭ್ಯರ್ಥಿ ರಾಜಕೀಯ ಬದುಕು ಆರಂಭಿಸಿದ್ದ ಪ್ರದೇಶದ ಭಾಷೆ ಬೇರೆ ಇಲ್ಲಿನ ಭಾಷೆ ಬೇರೆ. ಇಲ್ಲಿನ ಭಾಷೆ ಅವರಿಗೆ ಅರ್ಥವಾಗುವುದಿಲ್ಲ. ಅವರಿಗೆ ಸಂಸದರಾಗುವ ಅರ್ಹತೆ ಇರಬಹುದು. ಆದರೆ ಕ್ಷೇತ್ರ ವ್ಯಾಪ್ತಿಯ ಹಳ್ಳಿಗಳ ಪರಿಚಯ ಬೇಕಲ್ಲವೇ ಎಂದು ಚಂದ್ರಪ್ಪ ಪ್ರಶ್ನಿಸಿದರು.

100 ಕಿ.ಮೀ. ದೂರ ಇರುವ ಅಜ್ಜಂಪುರ ತಾಲ್ಲೂಕಿನ ನಾನು ಬೇಕೋ ಅಥವಾ 500 ಕಿಲೋ ಮೀಟರ್ ದೂರದಿಂದ ಬಂದು ಸ್ಪರ್ಧಿಸಿರುವ ಬಿಜೆಪಿ ಅಭ್ಯರ್ಥಿ ಬೇಕೋ? ಎಂಬುದನ್ನು ಮತದಾರರು ನಿರ್ಧರಿಸಲಿ ಎಂದು ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್. ಚಂದ್ರಪ್ಪ ಹೇಳಿದರು.

ನಾನು ಹಿಂದಿನ ಹತ್ತು ವರ್ಷಗಳಿಂದ ನಿಮ್ಮ ಮನೆಯ ಮಗನಂತೆ ಕೆಲಸ ಮಾಡಿಕೊಂಡು ಬಂದಿದ್ದೇನೆ. ನನ್ನ ರಾಜಕೀಯ ಬದುಕಿನಲ್ಲಿ ಯಾವುದೇ ಕಪ್ಪು ಚುಕ್ಕೆಯಿಲ್ಲ. ಭ್ರಷ್ಟಾಚಾರ, ಜಾತಿತಾರತಮ್ಯ ಆರೋಪಗಳಿಲ್ಲದೆ ಆಡಳಿತ ನಡೆಸಿಕೊಂಡು ಬಂದಿದ್ದೇನೆ.

ಏಪ್ರಿಲ್ 4 ರಂದು ನಾಮಪತ್ರ ಸಲ್ಲಿಸುತ್ತಿದ್ದು, ನಮ್ಮ ಪಕ್ಷದ ಕಾರ್ಯಕರ್ತರು, ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ, ವಿರೋಧ ಪಕ್ಷದವರಿಗೆ ನಮ್ಮ ಶಕ್ತಿ ತೋರಿಸಬೇಕು ಎಂದು ಚಂದ್ರಪ್ಪ ಮನವಿ ಮಾಡಿದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment