Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಪೀಠ ಬೇಕಾ..? ರಾಜಕೀಯ ಬೇಕಾ..? : ದಿಂಗಾಲೇಶ್ವರ ಸ್ವಾಮೀಜಿ ಆಯ್ಕೆಗೆ ಬಿಟ್ಟ ಭಕ್ತರು

---Advertisement---

ಧಾರವಾಡ: ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿಯಿಂದ ಪ್ರಹ್ಲಾದ ಜೋಶಿ ಅವರು ಕಣದಲ್ಲಿದ್ದಾರೆ. ಅವರ ಸ್ಪರ್ಧೆಯನ್ನು ಖಂಡಿಸಿ, ದಿಂಗಾಲೇಶ್ವರ ಶ್ರೀಗಳು ಲೋಕಸಭಾ ಚುನಾವಣೆಗೆ ಸ್ಪರ್ಧೆ ನಡೆಸಿದ್ದಾರೆ. ಆದರೆ ಇದು ಭಕ್ತರಲ್ಲಿಯೇ ಗೊಂದಲವನ್ನುಂಟು ಮಾಡಿದೆ‌. ಹಲವರು ಸ್ವಾಮಿಗಳ ಸ್ಪರ್ಧೆಗೆ ಬೆಂಬಲ ನೀಡಿದರೆ, ಇನ್ನು ಹಲವು ಭಕ್ತರು ಬೇಡ ಎಂದೇ ಹೇಳುತ್ತಿದ್ದಾರೆ. ಇದೀಗ ರಾಜಕೀಯ ಅಥವಾ ಪೀಠ ಯಾವುದು ಬೇಕು ಎಂಬ ಆಯ್ಕೆಯನ್ನು ಸ್ವಾಮೀಜಿಗಳೇ ಮಾಡಬೇಕೆಂದು ಭಕ್ತರು ಮನವಿ ಮಾಡಿದ್ದಾರೆ.

ಭಕ್ತರು ಈ ಬಗ್ಗೆ ಸ್ವಾಮೀಜಿಯ ಆಯ್ಕೆಗೆ ಬಿಟ್ಟಿದ್ದು, ಏಪ್ರಿಲ್ 18ರವರೆಗೂ ಕಾಯುತ್ತೇವೆ. ದಿಂಗಾಲೇಶ್ವರ ಸ್ವಾಮೀಜಿಗಳು ಚುನಾವಣೆಗೆ ಸ್ಪರ್ಧಿಸುವ ವಿಚಾರವನ್ನು ಮತ್ತೊಮ್ಮೆ ಪರಿಶೀಲನೆ ಮಾಡಬೇಕು. ಇಲ್ಲದಿದ್ದರೆ ಶಿರಹಟ್ಟಿ ಫಕೀರೇಶ್ವರ ಪೀಠವನ್ನು ತೊರೆಯಬೇಕು. ಶಿರಹಟ್ಟಿ ಫಕಿರೃಶ್ವರ ಮಠದ ಪೀಠವೂ ಕೋಮು ಸೌಹಾರ್ದಕ್ಕೆ ಹೆಸರುವಾಸಿಯಾಗಿದ್ದು, ಸ್ವಾಮೀಜಿಗಳು ರಾಜಕೀಯಕ್ಕೆ ಬರದೆ, ಭಕ್ತರಿಗೆ ದಾರಿ ತೋರಿಸಬೇಕು.

 

ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ಲಿಂಗಾಯತರಿಗೆ ಅನ್ಯಾಯ ಮಾಡಿದ್ದರೆ, ಅದನ್ನು ಪ್ರಜ್ಞಾವಂತರು ಬಹಿರಂಗ ಪಡಿಸಬೇಕು. ಚುನಾವಣೆಯಲ್ಲಿ ಸ್ಪರ್ಧೆ ಮಾಡುವುದು ಮಠದ ಭಕ್ತರಿಗೂ ಒಳ್ಳೆಯದಲ್ಲ ಎಂದು ಗದಗ, ಲಕ್ಷ್ಮೇಶ್ವರ ಸೇರಿದಂತೆ ವಿವಿಧ ಭಾಗಗಳ ಮಠದ ಭಕ್ತರು ದಿಂಗಾಲೇಶ್ವರ ಶ್ರೀಗಳಿಗೆ ಎಚ್ಚರಿಕೆ ನೀಡಿದ್ದಾರೆ.

ಪ್ರಹ್ಲಾದ್ ಜೋಶಿ ಅವರ ವಿರುದ್ಧ ಸ್ಪರ್ಧೆ ಮಾಡಲು ತಯಾರಿ ನಡೆಸಿದ್ದ ದಿಂಗಾಲೇಶ್ವರ ಶ್ರೀಗಳಿಗೆ ಇದೊಂದು ರೀತಿಯ ಆಘಾತ ತಂದಿದೆ. ಲಿಂಗಾಯತ ಸಮುದಾಯದ ಭಕ್ತರೆಲ್ಲ ಬೆಂಬಲಕ್ಕೆ ನಿಲ್ಲುತ್ತಾರೆ ಎಂದುಕೊಂಡಿದ್ದ ಊಹೆ ತಪ್ಪಾಗಿದೆ. ಈಗ ಸ್ವಾಮೀಜಿಗಳು ಯಾವ ನಿರ್ಧಾರಕ್ಕೆ ಬರುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...