Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಗರುಡ ಪಕ್ಷಿಗೆ ಚಿಕಿತ್ಸೆ ನೀಡಿ ಮಾನವೀಯತೆ ಮೆರೆದ ವೈದ್ಯರು

Facebook
Twitter
Telegram
WhatsApp

ಹಿರಿಯೂರು : ಮನುಷ್ಯತ್ವವನ್ನೇ ಮರೆತ ಜಗದಲ್ಲಿ ಅಲ್ಲೊಂದು ಇಲ್ಲೊಂದು ಮಾನವೀಯ ಗುಣಗಳು ಆಗಾಗ ಕಾಣಿಸುತ್ತವೆ. ಅದರಲ್ಲಿ ಇದೀಗ ಹಿರಿಯೂರಿನಲ್ಲಿ ಪಶು ವೈದ್ಯರೊಬ್ಬರು ಗರುಡ ವಿಚಾರದಲ್ಲಿ ಮಾನವೀಯತೆ ಮೆರೆದಿದ್ದಾರೆ.

 

ಸೋಮವಾರ ಗರುಡ, ಅನಾರೋಗ್ಯದ ಸಮಸ್ಯೆಯಿಂದ ಬಳಲುತ್ತಿತ್ತು. ಆ ಪಕ್ಷಿಗೆ ಪಶು ವೈದ್ಯಾಕಾರಿಗಳು ಚಿಕಿತ್ಸೆ ನೀಡಿ ಮಾನವೀಯತೆ ಮೆರೆದಿದ್ದಾರೆ. ನಗರದ ಉದಯ್ ಹೋಟೆಲ್ ಪಕ್ಕದಲ್ಲಿ ಬೆಳಿಗ್ಗೆ 8 ರಿಂದ 12 ಗಂಟೆಯವರೆಗೆ ಗರುಡ ಪಕ್ಷಿಯು ಹಾರಾಟ ನಡಸದೇ ಕುಂತಲ್ಲೇ ಕುಳಿತು ಸಮಸ್ಯೆಯಿಂದ ಬಳಲುತ್ತಿತ್ತು. ಇದನ್ನು ಗಮನಿಸಿದ ನಾಗರೀಕರು ಸಂಬಂಧಪಟ್ಟ ಪಶುವೈದ್ಯಾಕಾರಿ ಡಾ.ಹುಸೇನ್ ಅವರ ಗಮನಕ್ಕೆ ತಂದರು. ಇದಕ್ಕೆ ಸ್ಪಂದಿಸಿದ ವೈದ್ಯರು ಸಿಬ್ಬಂದಿಗಳನ್ನು ಕಳಿಸಿ ಚಿಕಿತ್ಸೆ ಕೊಡಿಸಿದ್ದಾರೆ.

ನಂತರ ಸ್ಥಳೀಯರು ಅರಣ್ಯಾಕಾರಿಗಳ ಗಮನಕ್ಕೆ ತಂದಾಗ, ಸ್ಥಳಕ್ಕಾಗಮಿಸಿ  ಗರುಡ ಪಕ್ಷಿಯನ್ನು ತೆರೆದ ಬಾಕ್ಸ್ ನಲಆರೈಕೆಗೆ ಕೊಂಡೊಯ್ದ ಘಟನೆ ನಡೆದಿದೆ. ಅಧಿಕಾರಿಗಳ ಮಾನವಿಯತೆ ಕಾರ್ಯಕ್ಕೆ  ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

 

ಗರುಡ ವಿಷ್ಣುವಿನ ವಾಹನ, ಜೊತೆಗೆ ದೇವರ ಸಮಾನ,  ನಾವು ಅದನ್ನು ನೋಡಿದರೆ ಕೈ ಮುಗಿಯುತ್ತವೆ. ಹೆಚ್.ಡಿ. ಪುರದ ಶ್ರೀ ರಂಗನಾಥಸ್ವಾಮಿ ರಥೋತ್ಸವ‌ ಸಂಧರ್ಭದಲ್ಲಿ ಗರುಡ ಪ್ರದಕ್ಷಿಣೆ ಹಾಕಿ ಬಳಿಕ ರಥೋತ್ಸವ ಜರುಗುವ ಉದಾಹರಣೆ ಗಮನಿಸಬಹುದು. ಸಮಸ್ಯೆಯಿಂದ ಬಳಲುತ್ತಿದ್ದ ಗರುಡ ಪಕ್ಷಿಗೆ ವೈಧ್ಯರು ಚಿಕಿತ್ಸೆ ನೀಡಿದರೇ, ಅರಣ್ಯಾಧಿಕಾರಿಗಳು ಆರೈಕೆ ಮಾಡುವ ಮೂಲಕ ಮಾನವೀಯತೆ ತೋರಿದ ಅಧಿಕಾರಿಗಳ ಕಾರ್ಯ ಶ್ಲಾಘನೀಯವಾದುದು. ಇಂತಹ ಕಾರ್ಯದಿಂದ ಮನುಷ್ಯ ಮತ್ತು ಪಕ್ಷಿಗಳ ನಡುವೆ ಸಂಬಂಧ ವೃದ್ಧಿಸುತ್ತದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ನೇಹಾ ಕೊಲೆ ಆರೋಪಿ ಡಿಎನ್ಎ ಟೆಸ್ಟ್ ಗೆ ಮುಂದಾದ ಅಧಿಕಾರಿಗಳು : ಯಾಕೆ ಗೊತ್ತಾ..?

ಹುಬ್ಬಳ್ಳಿ: ನೇಹಾ ಹೀರೇಮಠ ಕೊಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಬಹಳ ಗಂಭೀರವಾಗಿ ತನಿಖೆ ನಡೆಸುತ್ತಿದ್ದು, ತನಿಖೆಯನ್ನು ಚುರುಕುಗೊಳಿಸಿದೆ. ರಾಜ್ಯ ಸರ್ಕಾರ ಕೂಡ ನೇಹಾ ಕೇಸನ್ನು ಸಿಐಡಿಗೆ ಒಪ್ಪಿಸಿದೆ. ಎಲ್ಲಾ ರೀತಿಯಿಂದಾನೂ ತಪಾಸಣೆ ನಡೆಯುತ್ತಿದೆ. ಇಂದು

ರಾವಣ ಪಾತ್ರಕ್ಕಾಗಿ ಯಶ್ ಹೆಚ್ಚಿಸಿಕೊಂಡಿದ್ದು ಬರೋಬ್ಬರಿ 15 ಕೆಜಿ..!

ಬಾಲಿವುಡ್ ನಲ್ಲಿ ತಯಾರಾಗುತ್ತಿರುವ ರಾಮಾಯಣ ಸಿನಿಮಾ ಸಿಕ್ಜಾಪಟ್ಟೆ ಸದ್ದು ಮಾಡುತ್ತಿದೆ. ಅದರಲ್ಲೂ ಯಶ್ ಕೂಡ ಅದರಲ್ಲಿ ನಟಿಸುತ್ತಿದ್ದಾರೆ ಎಂಬ ಕಾರಣಕ್ಕೆ ಇನ್ನಷ್ಟು ಸದ್ದು ಮಾಡಿದೆ. ರಾವಣನ ಪಾತ್ರದಲ್ಲಿ ಯಶ್ ರಾಮಾಯಣದಲ್ಲಿ ನಟಿಸಲು ಒಪ್ಪಿದ್ದಾರೆ. ಆದರೆ

ಮಾದವಾರದಲ್ಲಿ ಸಿಕ್ಕ ಕೋಟಿ ಕೋಟಿ ಹಣ : ಮೆಸೇಜ್ ಮಾಡಿ, ಕಾಲ್ ಮಾಡಿ ಸಂಕಷ್ಟಕ್ಕೆ ಸಿಲುಕಿದರಾ ಕೆ‌.ಸುಧಾಕರ್..?

ಬೆಂಗಳೂರು: ಲೋಕಸಭಾ ಚುನಾವಣಾ ಹಿನ್ನೆಲೆ ಕಂತೆವಕಂತೆ ಹಣ ಸಾಗಾಣೆಯಾಗುವುದು ಸರ್ವೇ ಸಾಮಾನ್ಯ. ಚುನಾವಣೆಯಲ್ಲಿ ಹಣ ಸಾಗಾಟ ನಡೆಯುತ್ತದೆ ಎಂದೇ ಪೊಲೀಸರು ಹದ್ದಿನ ಕಣ್ಣು ಇಡುತ್ತಾರೆ. ಏಪ್ರಿಲ್ 25ರಂದು ಬಿಜೆಪಿ ಮುಖಂಡನ ಮನೆಯಲ್ಲಿ ಕೋಟಿ ಕೋಟಿ

error: Content is protected !!