ವೈದ್ಯರು ನಿಷ್ಠೆ, ಪ್ರಾಮಾಣಿಕತೆ ಹಾಗೂ ದಕ್ಷತೆಯಿಂದ ಕಾರ್ಯನಿರ್ವಹಿಸಿ : ಡಾ. ಬಸವಕುಮಾರ ಸ್ವಾಮೀಜಿ

0 Min Read

ಸುದ್ದಿಒನ್, ಚಿತ್ರದುರ್ಗ, ಜು.01 : ವೈದ್ಯಕೀಯ ಪದವಿಯನ್ನು ಪೂರೈಸಲು ಜೀವನದ ಅರ್ಧ ಹಾದಿಯನ್ನು ಸವೆಸಬೇಕಾಗುತ್ತದೆ. ಹಾಗಾಗಿ ವೈದ್ಯರು ನಿಷ್ಠೆ, ಪ್ರಾಮಾಣಿಕತೆ ಹಾಗೂ ದಕ್ಷತೆಯಿಂದ ಕಾರ್ಯನಿರ್ವಹಿಸಬೇಕಿದೆ ಎಂದು ಡಾ. ಬಸವಕುಮಾರ ಸ್ವಾಮಿಗಳು ಹೇಳಿದರು.

ನಗರದ ಬಸವೇಶ್ವರ ವೈದ್ಯಕೀಯ ಮಹಾವಿದ್ಯಾಲಯದಲ್ಲಿ ನಡೆದ ವೈದ್ಯರ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಶ್ರೀಗಳು ಮಾತನಾಡಿದರು.

ಮುಖ್ಯಅತಿಥಿ ಡಾ. ಪಿ.ಎಸ್. ಶಂಕರ್ ಮಾತನಾಡಿ, ವೈದ್ಯಕೀಯ ಕ್ಷೇತ್ರದ ಮೌಲ್ಯಗಳನ್ನು ಎಲ್ಲಾ ವೈದ್ಯರು ಪರಿಪಾಲಿಸಬೇಕೆಂದರು.
ಕಾರ್ಯಕ್ರಮದಲ್ಲಿ ವೈದ್ಯರು, ಸಿಬ್ಬಂದಿ ವರ್ಗದವರು ಹಾಗೂ ವೈದ್ಯಕೀಯ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಕಾಲೇಜಿನ ಡೀನ್ ಡಾ. ಪ್ರಶಾಂತ್ ಸ್ವಾಗತಿಸಿದರು.

Share This Article
Leave a Comment

Leave a Reply

Your email address will not be published. Required fields are marked *

Enable Notifications OK No thanks