Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ವೈದ್ಯರ ಮತ್ತು ಲೆಕ್ಕ ಪರಿಶೋಧಕರ ದಿನಾಚರಣೆ : ವಾಸವಿ ಮಹಲ್‍ನಲ್ಲಿ ನಡೆದ ರಕ್ತದಾನ ಶಿಬಿರ

---Advertisement---

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817

ಸುದ್ದಿಒನ್, ಚಿತ್ರದುರ್ಗ ಜು. 01 : ರೋಟರಿ ಕ್ಲಬ್ ಚಿತ್ರದುರ್ಗ, ರೋಟರಿ ಕ್ಲಬ್ ಆಫ್ ಚಿತ್ರದುರ್ಗ ಫೋರ್ಟ್, ರೋಟರಿ ಕ್ಲಬ್ ಚಿನ್ಮೂಲಾದ್ರಿ, ಆರ್ಯ ವೈಶ್ಯಸಂಘ ಇನ್ನರ್ ವೀಲ್‍ಕ್ಲಬ್ ಆಫ್ ಚಿತ್ರದುರ್ಗ ಪೋರ್ಟ್ ಸಂಹಯೋಗದೊಂದಿಗೆ ಬಸವೇಶ್ವರ ಬ್ಲಡ್ ಬ್ಯಾಂಕ್ ಮತ್ತು ರೆಡ್‍ಕ್ರಾಸ್ ಸೊಸೈಟಿ ಸಹಕಾರದೊಂದಿಗೆ ಚಿತ್ರದುರ್ಗ ನಗರದಲ್ಲಿ ಮಂಗಳವಾರ ವಾಸವಿ ಮಹಲ್‍ನಲ್ಲಿ ವೈದ್ಯರ ಮತ್ತು ಲೆಕ್ಕ ಪರಿಶೋಧಕರ ದಿನಾಚರಣೆಯ ಪ್ರಯುಕ್ತ ರಕ್ತದಾನ ಶಿಬಿರವನ್ನು ಏರ್ಪಡಿಸಲಾಗಿತ್ತು.

ಈ ರಕ್ತದಾನ ಶಿಬಿರದಲ್ಲಿ ಪುರುಷ ಮಹಿಳೆ ಎನ್ನದೆ ಎಲ್ಲರು ಸಹಾ ರಕ್ತವನ್ನು ದಾನ ಮಾಡಿದರು. ರಕ್ತದಾನ ಶಿಬಿರವನ್ನು ಉದ್ಘಾಟಿಸಿದ ರೋಟರಿಯನ್ ಸಂಸ್ಥೆಯ ಜಿಲ್ಲಾ ಗೌರನ್ನರ್ ಎಂ.ಕೆ.ರವೀಂದ್ರ ಮಾತನಾಡಿ, ರಕ್ತದಾನ ಎನ್ನುವುದು ಸ್ವಯಂ ಪ್ರೇರಿತವಾಗಿ ಬರಬೇಕಿದೆ, ರಕ್ತದ ಕೊರತೆಯಿಂದ ಬಹಳಷ್ಟು ಜನ ನರಳುತ್ತಿ ದ್ದಾರೆ ಈ ರೀತಿಯಾದ ರಕ್ತದಾನ ಶಿಬಿರಗಳನ್ನು ಆಯೋಜನೆ ಮಾಡುವುದರ ಮೂಲಕ ಅಂತಹರಿಗೆ ನೆರವಾಗಬೇಕಿದೆ. ನಮ್ಮ ದೇಹದಲ್ಲಿ ರಕ್ತವನ್ನು ದಾನ ಮಾಡುವುದರಿಂದ ಯಾವುದೇ ರೀತಿಯ ಹಾನಿಯಾ ಗುವುದಿಲ್ಲ ಬದಲಿಗೆ ಹೊಸದಾದ ರಕ್ತ ಬರುತ್ತದೆ. ರಕ್ತವನ್ನು ನಿಯಮಿತವಾದ ಸಮಯದಲ್ಲಿ ದಾನ ಮಾಡುವುದರಿಂದ ನಮ್ಮ ದೇಹದಲ್ಲಿ ರಕ್ತ ಉತ್ಪಾದನೆಯಾಗುತ್ತದೆ ಎಂದರು.
ಈ ರಕ್ತದಾನ ಶಿಬಿರದಲ್ಲಿ ಸುಮಾರು 20 ಯೂನಿಟ್‍ಗಳಷ್ಟು ರಕ್ತವನ್ನು ಸಂಗ್ರಹ ಮಾಡಲಾಯಿತು.

ಈ ಕಾರ್ಯಕ್ರಮದಲ್ಲಿ ರೋಟರಿ ಕ್ಲಬ್‍ನ ಅಧ್ಯಕ್ಷರಾದ ಭಾಗ್ಯಲಕ್ಷ್ಮೀ, ರೋಟರಿ ಕ್ಲಬ್ ಚಿತ್ರದುರ್ಗ ಫೋರ್ಟ್‍ನ ಅಧ್ಯಕ್ಷರಾದ ಶಶಿಧರ್ ಗುಪ್ತ, ರೋಟರಿ ಕ್ಲಬ್ ಚಿನ್ಮೂಲಾದ್ರಿ ಅಧ್ಯಕ್ಷರಾದ ದಿಲ್‍ಷಾದ್ ವುನೀಸ್, ಆರ್ಯ ವೈಶ್ಯ ಸಂಘದ ಅಧ್ಯಕ್ಷರಾದ ಶ್ರೀನಿವಾಸ್ ಬಾಬು, ಇನ್ನರ್ ವೀಲ್‍ಕ್ಲಬ್‍ನ ಅಧ್ಯಕ್ಷರಾದ ವೀಣಾ, ಇನ್ನರ್ ವೀಲ್‍ಕ್ಲಬ್ ಆಫ್ ಚಿತ್ರದುರ್ಗ ಪೋರ್ಟ್‍ನ ಅಧ್ಯಕ್ಷರಾದ ಗಾಯತ್ರಿ ಶಿವರಾಂ, ರೋಟೇರಿಯನ್‍ಗಳಾದ ಮಧುಪ್ರಸಾಸದ, ಎಸ್.ವಿರೇಶ್, ಸೂರ್ಯ ಪ್ರಕಾಶ್, ವೀರಭದ್ರಸ್ವಾಮಿ, ಜಯಶ್ರೀ ಷಾ, ಮಾಧುರಿ, ಯೋಗೀಶ್, ಮಂಜುನಾಥ್ ಬಾಗತ್ವ್, ಗುರುಮೂರ್ತಿ ಸುರೇಶ್, ಶಿವರಾಂ, ಮೈಲೇಶ್ ಕುಮಾರ್, ಮಹಡಿ ಶಿವಮೂರ್ತಿ, ಚಂದ್ರಮೋಹನ್, ವೆಂಕಟೇಶ್, ಮಧು ಕುಮಾರ್ ಸೇರಿದಂತೆ ಇತರರು ಭಾಗವಹಿಸಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...