Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಸರ್ಕಾರಿ ಉದ್ಯೋಕಾಂಕ್ಷಿಗಳಿಗೆ ದೊಡ್ಮನೆ ಸಾಥ್ : ರಾಘವೇಂದ್ರ ರಾಜ್‍ಕುಮಾರ್ ಹೇಳಿದ್ದೇನು..?

---Advertisement---

ಬೆಂಗಳೂರು: ಸರ್ಕಾರಿ ಉದ್ಯೋಗಕ್ಕಾಗಿ ಸಾಕಷ್ಟು ಜನ ಕಾಯ್ತಾ ಇದ್ದಾರೆ. ವರ್ಷಾನುಗಟ್ಟಲೇಯಿಂದ ಓದುತ್ತಾ ಪರೀಕ್ಷೆಗಾಗಿ ಕಾಯ್ತಾ ಇದ್ದಾರೆ. ಆದರೆ ಕಳೆದ ಕೆಲವು ವರ್ಷಗಳಿಂದ ಸರ್ಕಾರಿ ಉದ್ಯೋಗಗಳಿಗೆ ಸರಿಯಾದ ನೇಮಕಾತಿ ಆಗ್ತಿಲ್ಲ. ಕೆಲಸಕ್ಕಾಗಿ ಎಲ್ಲವನ್ನು ತ್ಯಾಗ ಮಾಡ್ತಾ ಇರುವವರ ಗೋಳು ಕೇಳುವವರು ಯಾರು. ಇದೀಗ ಅವರ ಸಮಸ್ಯೆಗಳಿಗೆ ಧ್ವನಿಯಾಗಿದೆ ದೊಡ್ಮನೆ.

ಕೆಲ ವರ್ಷಗಳಿಂದ ಸರ್ಕಾರ ಯಾವುದೇ ನೇಮಕಾತಿ ಮಾಡಿಲ್ಲ. ಶೀಘ್ರವೇ ನೇಮಕಾತಿ ಆರಂಭಿಸಬೇಕು ಎಂದು ರಾಘವೇಂದ್ರ ರಾಜ್ ಕುಮಾರ್ ಅವರು ಮನವಿ ಮಾಡಿದ್ದಾರೆ. ಸರ್ಕಾರಿ ಉದ್ಯೋಗದ ಆಕಾಂಕ್ಷಿಗಳಿಗೆ ತೊಂದರೆ ಆಗುತ್ತದೆ. ಯುವಕರು ಕಾಲೇಜು, ಯೂನಿವರ್ಸಿಟಿಗಳಲ್ಲಿ ಸಾಕಷ್ಟು ಓದಿದ್ದಾರೆ. ಆದರೆ ಅಷ್ಟೆಲ್ಲ ಓದಿ ಮನೆಯಲ್ಲಿಯೇ ಇರುವಂತೆ ಆಗಿದೆ. ಹೀಗಾಗಿ ಸರ್ಕಾರ ಕೂಡಲೇ ನೇಮಕಾತಿ ಮಾಡಬೇಕು. ಸುಮಾರು ವರ್ಷಗಳಿಂದ ಯಾವುದೇ ನೇಮಕಾತಿ ಮಾಡುತ್ತಿಲ್ಲ. ಹೀಗಾಗಿ ಆದಷ್ಟು ಬೇಗ ನೇಮಕಾತಿ ಮಾಡಬೇಕಾಗಿ ವಿನಂತಿಸಿಕೊಳ್ಳುತ್ತೇನೆ ಎಂದಿದ್ದಾರೆ.

ಹೊಸ ನೇಮಕಾತಿಗೆ ಸಂಬಂಧಿಸಿದಂತೆ ಉದ್ಯೋಗಕಾಂಕ್ಷಿಗಳು ಆಗಸ್ಟ್ 11 ರಂದು ಫ್ರೀಡಂ ಪಾರ್ಕ್​ನಲ್ಲಿ ಪ್ರತಿಭಟನೆ ನಡೆಸಲಿದ್ದಾರೆ. ಈ ಪ್ರತಿಭಟನೆಗೆ ಹಿರಿಯ ನಟ ರಾಘಣ್ಣ ಅವರು ಬೆಂಬಲ ಸೂಚಿಸಲಿದ್ದಾರೆ. ಉದ್ಯೋಗಕಾಂಕ್ಷಿಗಳಿಗೆ ಸಪೋರ್ಟ್ ಮಾಡಲಿದ್ದಾರೆ. ಅಭ್ಯರ್ಥಿಗಳಲ್ಲಿ ಗೊಂದಲ ಏರ್ಪಟ್ಟಿದ್ದು ಮುಂದೆ ಏನು ಮಾಡೋದು ಅಂತ ಯೋಜನೆಯಲ್ಲಿದ್ದಾರೆ. ಅಕಾಡೆಮಿಗಳು ಮುಚ್ಚಲಾಗುತ್ತಿದೆ. ಜನಗಳು ವಾಪಸ್ ಊರುಗಳಿಗೆ ಹೋಗಲು ಆಗದೇ ಬೆಂಗಳೂರಲ್ಲೇ ಇದ್ದಾರೆ. ಸರ್ಕಾರ ಆದಷ್ಟೂ ಬೇಗ ಹೊಸ ನೇಮಕಾತಿಗಳನ್ನ ಆರಂಭಿಸಬೇಕು ಅಂತ ಒತ್ತಾಯಿಸಿದ್ದಾರೆ. ಇಟ್ಟಾರೆ ಕೆಲಸವಿಲ್ಲದೆ, ಸರ್ಕಾರಿ ಕೆಲಸವೇ ಬೇಕೆಂದು ಇಷ್ಟು ವರ್ಚ ಕಾಯುತ್ತಿರುವವರಿಗೆ ದೊಡ್ಮನೆ ಬೆಂಬಲ ಸಿಕ್ಕದೆ. ಇನ್ಮೇಲಾದ್ರೂ ಸರ್ಕಾರ ನೇಮಕಾತಿ ಮಾಡುತ್ತಾ ನೋಡಬೇಕಿದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment