Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಟೀಕೆಗೆ ಗುರಿಯಾಯ್ತು ಬುದ್ಧ, ಬಸವ ಎಂದಿದ್ದ ಡಾಲಿ ಮದುವೆ ; ಧನಂಜಯ ಕೊಟ್ಟ ಉತ್ತರವೇನು..?

---Advertisement---

 

 

ಡಾಲಿ ಧನಂಜಯ ನಿನ್ನೆಯಷ್ಟೇ ತಾನಿಷ್ಟ ಪಟ್ಟ ಡಾಕ್ಟರ್ ಧನ್ಯತಾ ಅವರೊಟ್ಟಿಗೆ ಹೊಸ ಬದುಕಿಗೆ ಹೆಜ್ಜೆ ಹಾಕಿದ್ದಾರೆ. ಆದರೆ ಡಾಲಿ ಧನಂಜಯನನ್ನ ಹೊರಗೆ ನೋಡಿದ ರೀತಿಯೇ ಬೇರೆ ಆಗಿದೆ. ಅವರು ಫಾಲೋ ಮಾಡುವ ತತ್ವಗಳು ಬೇರೆಯದ್ದೇ ಆಗಿವೆ. ಸದಾ ಅವರ ಬಾಯಲ್ಲಿ ಬುದ್ದ, ಬಸವ ತತ್ವಗಳೇ ಬರುತ್ತಿದ್ದವು. ಈಗ ನೋಡಿದ್ರೆ ಅದ್ದೂರಿಯಾಗಿ ಮದುವೆಯಾಗಿದ್ದಾರೆ. ಈ ಸಂಬಂಧ ಸೋಷಿಯಲ್ ಮೀಡಿಯಾದಲ್ಲೆಲ್ಲ ಟೀಕೆಗೆ ಗುರಿಯಾಗಿದ್ದಾರೆ. ಈ ಸಂಬಂಧ ನಟ ಡಾಲಿ ಧನಂಜಯ ಅವರೇ ಪ್ರತಿಕ್ರಿಯೆ ನೀಡಿದ್ದಾರೆ.

ಈ ಸಂಬಂಧ ಮಾತನಾಡಿರುವ ಡಾಲಿ ಧನಂಜಯ, ಹಿರಿಯರಿಗೆ ಕೆಲವು ನಂಬಿಕೆಗಳಿಂದ ಖುಷಿ ಸಿಗುತ್ತದೆ ಎಂದಾದರೆ ಅದನ್ನು ಪಾಲಿಸುವುದು ತಪ್ಪು ಎಂದು ನನಗೆ ಅನ್ನಿಸೋದಿಲ್ಲ. ಎಲ್ಲದಕ್ಕೂ ಉತ್ತರ ಕೋಡೋದಕ್ಕೆ ಆಗಲ್ಲ. ಆದರೆ ಬಹಳ ಮುಖ್ಯವಾಗಿ ಆಸ್ತಿಕತೆ ಮತ್ತು ನಾಸ್ತಿಕತೆ ಬಗ್ಗೆ ಮಾತನಾಡುತ್ತೇನೆ. ಕಾಯುವಂತಹ ನಂಬಿಕೆಗಳು ಬೇರೆ, ಮೂಢನಂಬಿಕೆಗಳು ಬೇರೆ. ಆಚರಣೆಗಳು ಅಂತ ಬಂದಾಗ ನಮ್ಮ ಸಮಾಜದಲ್ಲಿ ತುಂಬಾ ತರಹದ ಆಚರಣೆಗಳು ಇದಾವೆ.

ಅದಕ್ಕೊಂದು ಉದಾಹರಣೆ ನಮ್ಮ ಚಿಕ್ಕಪ್ಪನ ಮದುವೆ ಸಂದರ್ಭದಲ್ಲಿ ಕೊಂಡ ಹಾಯುವ ಪೂಜೆ ಮಾಡಿದರು.ಕೊಂಡ ಹಾಯುವುದನ್ನು ನಾನು ತುಂಬಾ ಚಿಕ್ಕ ವಯಸ್ಸಿನಿಂದಾನೂ ನೋಡಿಕೊಂಡು ಬಂದಿದ್ದೇನೆ. ಜಾತ್ರೆಯ ಜನಸಾಗರದಲ್ಲಿ ನಿಂತು ಎಂಜಾಯ್ ಮಾಡಿಕೊಂಡು ಬಂದಿದ್ದೇನೆ. ನನಗೆ ಅದು ಜಾನಪದ. ಅಲ್ಲಿ ತಪ್ಪು ಕಂಡಿಲ್ಲ. ನಾನು ವಿಜ್ಞಾನ ನಂಬುತ್ತೇನೆ. ಇಲ್ಲಿ ಎಲ್ಲವನ್ನು ಒಂದೇ ರೀತಿ ನೋಡೋದಕ್ಕೆ ಆಗಲ್ಲ. ನನ್ನ ಬಗ್ಗೆ ಎದ್ದಿರುವ ಪ್ರಶ್ನೆಗಳನ್ನು ಗೌರವಿಸುತ್ತೇನೆ. ನನ್ನನ್ನು ಪ್ರಶ್ನೆ ಮಾಡುತ್ತಿರುವವರನ್ನು ಗೌರವಿಸುತ್ತೇನೆ ಎಂದಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...