ಗಾರೆಹಟ್ಟಿಯ ಶ್ರೀ ಉಮಾ ಮಹೇಶ್ವರಸ್ವಾಮಿ ದೇವಸ್ಥಾನದ ಜೀರ್ಣೋದ್ದಾರಕ್ಕೆ ಡಾ.ವೀರೇಂದ್ರ ಹೆಗಡೆರವರಿಂದ ದೇಣಿಗೆ

0 Min Read

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ನವೆಂಬರ್.22 : ಜಯಲಕ್ಷ್ಮೀ ಬಡಾವಣೆ ಕ್ಷೇಮಾಭಿವೃದ್ದಿ ಸಮಿತಿಯಿಂದ ಗಾರೆಹಟ್ಟಿಯಲ್ಲಿ ನಿರ್ಮಾಣವಾಗುತ್ತಿರುವ ಶ್ರೀ ಉಮಾ ಮಹೇಶ್ವರಸ್ವಾಮಿ ದೇವಸ್ಥಾನದ ಜೀರ್ಣೋದ್ದಾರಕ್ಕೆ ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗಡೆರವರು ಮಂಜೂರು ಮಾಡಿರುವ ಒಂದು ಲಕ್ಷದ ಐವತ್ತು ಸಾವಿರ ರೂ.ಡಿ.ಡಿ.ಯನ್ನು ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿ.ಸಿ. ಟ್ರಸ್ಟ್ ತಾಲ್ಲೂಕು ಯೋಜನಾಧಿಕಾರಿ ಅಶೋಕ್‍ರವರು ಸಮಿತಿಯ ಅಧ್ಯಕ್ಷ ನಾಗೇಂದ್ರಯ್ಯನವರಿಗೆ ಹಸ್ತಾಂತರಿಸಿದರು.

ಸಮಿತಿ ಕಾರ್ಯದರ್ಶಿ ಕರಿಬಸಯ್ಯ, ಸದಸ್ಯರುಗಳು, ವಲಯ ಮೇಲ್ವಿಚಾರಕರು ಮತ್ತು ಸೇವಾಪ್ರತಿನಿಧಿಗಳು ಹಾಗೂ ಗಾರೆಹಟ್ಟಿಯ ಗಣ್ಯರು ಈ ಸಂದರ್ಭದಲ್ಲಿದ್ದರು.

Share This Article
Leave a Comment

Leave a Reply

Your email address will not be published. Required fields are marked *

Enable Notifications OK No thanks