Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಪ್ರೇಮಿಗಳ ದಿನಾಚರಣೆಯಂದು ಕತ್ತೆ ಮದುವೆ ಮಾಡಿಸಿದ ವಾಟಾಳ್ ನಾಗರಾಜ್

---Advertisement---

ಪ್ರೇಮಿಗಳ ದಿನದ ವಿಶೇಷತೆ ಎಷ್ಟೋ ಪ್ರೇಮಿಗಳು ಅಂದು ಪ್ರೀತಿಯನ್ನು ವ್ಯಕ್ತಪಡಿಸುತ್ತಾರೆ. ಪ್ರೇಮಿಗಳ ದಿನದಂತೆ ಮದುವೆ ಆಗುತ್ತಾತೆ. ಎಂಗೆಜ್ಮೆಂಟ್ ಮಾಡಿಕೊಳ್ಳುತ್ತಾರೆ ಇದು ವಿಶೇಷ. ಆದರೆ ಪ್ರೇಮಿಗಳ ದಿನದಂದು ಕತ್ತೆಯ ವಿವಾಹ ಮಾಡಿದ್ದಾರೆ ವಾಟಾಳ್ ನಾಗರಾಜ್!

ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಅವರು ಪ್ರತಿ ವರ್ಷದಂತೆ ಈ ಬಾರಿಯೂ ಪ್ರೇಮಿಗಳ ದಿನಾಚರಣೆಯನ್ನು ಕತ್ತೆಗಳಿಗೆ ಮದುವೆ ಮಾಡಿಸುವ ಮೂಲಕ ವಿಶಿಷ್ಟವಾಗಿ ಆಚರಿಸಿದ್ದಾರೆ. ಬೆಂಗಳೂರು ನಗರದ ಸೆಂಟ್ರಲ್ ರೈಲ್ವೆ ನಿಲ್ದಾಣದ ಬಳಿ ಕತ್ತೆಗಳ ಮೆರವಣಿಗೆ ನಡೆಸಿ, ಎರಡು ಕತ್ತೆಗಳಿಗೆ ಪೂಜೆ ಸಲ್ಲಿಸಿ, ಸಾಂಪ್ರದಾಯಿಕವಾಗಿ ಹೂವಿನ ಹಾರ ಹಾಕಿ ತಾಳಿ ಕಟ್ಟಿದ್ದಾರೆ.

ಮದುವೆಯ ಶಾಸ್ತ್ರಗಳು ನಡೆಯುತ್ತಿದ್ದಾಗಲೇ ಗಂಡು ಕತ್ತೆ ಅಲ್ಲಿಂದ ಓಡಿಹೋಗಿದೆ. ಇದನ್ನು ಕಂಡು ನೆರೆದಿದ್ದ ಸಾರ್ವಜನಿಕರು ನಕ್ಮಿದ್ದಾರೆ. ನಂತರ ಕತ್ತೆಯನ್ನು ಹಿಡಿದು ತಂದು ಮದುವೆ ಪ್ರಕ್ರಿಯೆ ಪೂರ್ಣಗೊಳಿಸಲಾಗಿದೆ. “ಪ್ರೇಮ ಎನ್ನುವುದು ಕೇವಲ ಮನುಷ್ಯರಿಗಷ್ಟೇ ಸೀಮಿತವಲ್ಲ, ಅದು ಪ್ರಾಣಿ-ಪಕ್ಷಿಗಳಿಗೂ ಇದೆ. ಕತ್ತೆ ಬಹಳ ಪವಿತ್ರವಾದ ಪ್ರಾಣಿ, ಪುರಾಣಗಳಲ್ಲೂ ಕತ್ತೆ ಮದುವೆಯ ಉಲ್ಲೇಖಗಳಿವೆ ಎಂದು ವಾಟ್ ನಾಗರಾಜ್ ಹೇಳಿದ್ದಾರೆ.

ಪ್ರೇಮ ವಿವಾಹವಾಗುವವರಿಗೆ ಸರ್ಕಾರ 3 ಲಕ್ಷ ರೂಪಾಯಿ ಪ್ರೋತ್ಸಾಹಧನ ನೀಡಬೇಕು ಮತ್ತು ಅವರಿಗೆ ಸೂಕ್ತ ಭದ್ರತೆ ಒದಗಿಸಬೇಕು,” ಎಂದು ವಾಟ್ ನಾಗರಾಜ್ ಒತ್ತಾಯಿಸಿದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...