Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಲಂಚಕ್ಕೆ ಪಟ್ಟು ಜೀವನವನ್ನು ಹಾಳು ಮಾಡಿಕೊಳ್ಳಬೇಡಿ : ಡಿವೈಎಸ್ ಪಿ ಮಂಜುನಾಥ

Facebook
Twitter
Telegram
WhatsApp

ಸುದ್ದಿಒನ್, ಚಳ್ಳಕೆರೆ : ಚಳ್ಳಕೆರೆ ಸರ್ಕಾರಿ ನೌಕರರ ಮೇಲೆ ಹೆಚ್ಚಿನದಾಗಿ ಲೋಕಾಯುಕ್ತ ದೂರುಗಳಿವೆ ಎಂದು  ಚಿತ್ರದುರ್ಗ ಲೋಕಾಯುಕ್ತ  ವಿಭಾಗದ ಡಿವೈಎಸ್ ಪಿ ಮಂಜುನಾಥ ಹೇಳಿದರು.

ನಗರದ ತಾಲ್ಲೂಕು ಕಚೇರಿಯಲ್ಲಿ ಹಮ್ಮಿಕೊಂಡಿದ್ದ ಜಾಗೃತಿ ಸಪ್ತಾಹ ಕಾರ್ಯಾಗಾರ – 2021 ರಲ್ಲಿ ಮಾತನಾಡಿದರು.

ಸರ್ಕಾರಿ ನೌಕರರಿಗೆ ವೇತನ ಬರುತ್ತದೆ. ಲಂಚಕ್ಕೆ ಆಸೆ ಪಡಬೇಡಿ ನಿಷ್ಠೆಯಿಂದ ಕಾರ್ಯನಿರ್ವಹಿಸಿ, ಹಣಕ್ಕೆ ಆಸೆ ಪಟ್ಟು ನಿಮ್ಮ ಜೀವನವನ್ನು ಯಾಕೆ ಹಾಳು ಮಾಡಿಕೊಳ್ಳಿತ್ತೀರಾ, ಹಣದ ಆಸೆ ಬಿಟ್ಟು ಸಾರ್ವಜನಿರಿಗೆ ಸ್ಪಂದಿಸುವ ರೀತಿಯಲ್ಲಿ ಕೆಲಸ ಮಾಡಿ  ಎಂದು ಅಧಿಕಾರಿಗಳಿಗೆ ಹೇಳಿದರು.

ಪೊಲೀಸ್ ಇನ್ಸ್ ಪೆಕ್ಟರ್ ಜೆ.ಎಸ್. ತಿಪ್ಪೇಸ್ವಾಮಿ ಮಾತನಾಡಿ ಲಂಚ ತೆಗೆದುಕೊಂಡು ಸಿಕ್ಕಿಬಿದ್ದರೆ ನಿಮ್ಮ ಘನತೆ ಹಾಳಾಗುತ್ತದೆ.‌ ಲಂಚ ಬಿಟ್ಟು ನಿಷ್ಠೆ ಯಿಂದ ಕಾರ್ಯನಿರ್ವಹಿಸಿ, ಸಾರ್ವಜನಿಕರ ಸಮಸ್ಯೆಯನ್ನು ಬಗೆಹರಿಸಿದರೆ ನಿಮ್ಮ ಅವರು ದೇವರಂತೆ ಕಾಣುತ್ತಾರೆ ಎಂದರು.

ಹಣದ ಆಸೆಗೆ  ತಮ್ಮ ಜೀವನವನ್ನೇ ಹಾಳು ಮಾಡಿಕೊಂಡಿರುವ ನಿರ್ದೇಶನಗಳು ಇವೆ. ಲಂಚಬಿಟ್ಟು ಸಾರ್ವಜನಿಕರಿಗೆ ಸ್ಪಂದಿಸುವ ರೀತಿ ಕೆಲಸ ಮಾಡಬೇಕು..ಶೇ 10 ರಷ್ಟು ಭ್ರಷ್ಟಾಚಾರ ಕಡಿಮೆಯಾದರೆ ಸಾರ್ವಜನಿಕರಿಗೆ  ಒಳ್ಳೆಯದಾಗುತ್ತದೆ ಎಂದರು.

ಈ ವೇಳೆ ಲೋಕಾಯುಕ್ತ ಅಧಿಕಾರಿ  ಮಂಜುನಾಥ ಅಧಿಕಾರಿಗಳಿಗೆ ಲಂಚ ಪಡೆಯಬಾರದು ಎಂದು  ಪ್ರತಿಜ್ಞೆ ವಿಧಿ ಭೋಧಿಸಿದರು.

ಇಒ ಮಡುಗಿನ ಬಸಪ್ಪ, ತೋಟಗಾರಿ ಇಲಾಖೆ ಹಿರಿಯ ಸಹಾಯಕ‌ ನಿರ್ದೇಶಕ ವಿರೂಪಾಕ್ಷಪ್ಪ, ತಾಲ್ಲೂಕು ಆರೋಗ್ಯಾಧಿಕಾರಿ ಪ್ರೇಮಸುಧಾ, ಲೋಕಾಯುಕ್ತ ಅಧಿಕಾರಿ ಲತಾ ಸೇರಿದಂತೆ ತಾಲ್ಲೂಕು ಮಟ್ಟದ ಅಧಿಕಾರಿಗಳು ಇದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯವರು ಕೆಲಸದಲ್ಲಿ ಎಷ್ಟೇ ಶ್ರದ್ಧೆಯಿಂದ ದುಡಿದರೂ ಅಪವಾದ, ನಿಂದನೆ, ಆರ್ಥಿಕ ನಷ್ಟ ತಪ್ಪಿದ್ದಲ್ಲ

ಈ ರಾಶಿಯವರು ಕೆಲಸದಲ್ಲಿ ಎಷ್ಟೇ ಶ್ರದ್ಧೆಯಿಂದ ದುಡಿದರೂ ಅಪವಾದ, ನಿಂದನೆ, ಆರ್ಥಿಕ ನಷ್ಟ ತಪ್ಪಿದ್ದಲ್ಲ. ಶುಕ್ರವಾರ- ರಾಶಿ ಭವಿಷ್ಯ ಮೇ-17,2024 ಸೂರ್ಯೋದಯ: 05:47, ಸೂರ್ಯಾಸ್ತ : 06:37 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ

ಚಿತ್ರದುರ್ಗದಲ್ಲಿ ಐವರ ಅಸ್ಥಿಪಂಜರ ಪ್ರಕರಣ | ಕೊನೆಗೂ ಸಿಕ್ತು ಸಾವಿನ ಸುಳಿವು: ಎಸ್.ಪಿ. ಮಾಹಿತಿ…!

ಸುದ್ದಿಒನ್, ಚಿತ್ರದುರ್ಗ, ಮೇ. 16 : 2023ರ ಡಿಸೆಂಬರ್ ನಲ್ಲಿ ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ಪ್ರಕರಣ ಅದು. ನಗರದ ಬೆಂಗಳೂರು ರಸ್ತೆಯಲ್ಲಿರುವ ಪಾಳು ಬಿದ್ದ ಮನೆಯಲ್ಲಿ ಐವರ ಮೃತದೇಹ ಪತ್ತೆಯಾಗಿತ್ತು. ಅದು ಅವರೆಲ್ಲಾ ಸಾವನ್ನಪ್ಪಿ

ನೈರುತ್ಯ ಪದವೀಧರ ಚುನಾವಣೆ : ಬಿಜೆಪಿ ವಿರುದ್ಧ ರಘುಪತಿ ಭಟ್ ಬಂಡಾಯ, ಪಕ್ಷೇತರ ಸ್ಪರ್ಧೆ

ಮೈಸೂರು: ವಿಧಾನಸಭಾ ಚುನಾವಣೆ, ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಹಳಬರಿಗೆ, ಒಂದಷ್ಡು ವಿವಾದಗಳಿದ್ದವರಿಗೆ ಟಿಕೆಟ್ ನಿರಾಕರಣೆ ಮಾಡಿತ್ತು. ಹೊಸ ಮುಖಗಳಿಗೆ ಮಣೆ ಹಾಕಲು ಹೋಗಿ, ಹಿರಿಯ ತಲೆಗಳು ಬಂಡಾಯವೆದ್ದಿದ್ದರು. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಟಿಕೆಟ್

error: Content is protected !!