ಸುದ್ದಿಒನ್, ಚಿತ್ರದುರ್ಗ, ಏ. 06 : ಏಪ್ರಿಲ್ 8 ರಂದು ಸಂಭವಿಸಲಿರುವ ಸಂಪೂರ್ಣ ಸೂರ್ಯಗ್ರಹಣ ಜನರಲ್ಲಿ ಭಯ, ಆತಂಕ ಮೂಡಿಸಿದೆ. ವೈಜ್ಞಾನಿಕವಾಗಿ ಗ್ರಹಣವು ಬಾಹ್ಯಾಕಾಶದಲ್ಲಿ ನಡೆಯುವ ನೆರಳು ಬೆಳಕಿನ ಆಟ. ಸೂರ್ಯನ ಸುತ್ತ ಭೂಮಿ, ಭೂಮಿಯ ಸುತ್ತ ಚಂದ್ರ ಸುತ್ತುವಾಗ ಈ ಮೂರು ಆಕಾಶಕಾಯಗಳು ಒಂದೇ ನೇರದಲ್ಲಿ ಬಂದಾಗ ಗ್ರಹಣಗಳು ಸಂಭವಿಸುತ್ತವೆ.
ಸೂರ್ಯ ಮತ್ತು ಭೂಮಿಯ ನಡುವೆ ಚಂದ್ರ ಬಂದಾಗ ಸೂರ್ಯಗ್ರಹಣ, ಸೂರ್ಯ ಮತ್ತು ಚಂದ್ರನ ನಡುವೆ ಭೂಮಿ ಬಂದಾಗ ಚಂದ್ರಗ್ರಹಣಗಳು ಸಂಭವಿಸುತ್ತವೆ. ಏಪ್ರಿಲ್ 8 ರಂದು ಅಮಾವಾಸ್ಯೆ ಯಂದು ನಡೆಯಲಿರುವ ಈ ಗ್ರಹಣವು ನಮ್ಮ ಭಾರತದಲ್ಲಿ ಗೋಚರಿಸುವುದಿಲ್ಲ.
ಕೇವಲ 8 ನಿಮಿಷಗಳ ಕಾಲ ಮಧ್ಯಾಹ್ನದ ಸಮಯದಲ್ಲಿ ಅಂದರೆ ಭಾರತೀಯ ಕಾಲಮಾನ ರಾತ್ರಿ 9.20 ರಿಂದ 1.25 ರವರೆಗೆ. ಅಲ್ಲಿ ಮದ್ಯಾಹ್ನ ಕತ್ತಲು ಆವರಿಸುವ
ಈ-ಸಂಪೂರ್ಣ ಸೂರ್ಯಗ್ರಹಣವನ್ನು ನೋಡಲು ಜನ ಕಾತರರಾಗಿದ್ದಾರೆ. ಇದು ಉತ್ತರ ಅಮೆರಿಕಾ, ಕೆನಡಾ, ಮೆಕ್ಸಿಕೊ ಮುಂತಾದ ಪ್ರದೇಶಗಳಲ್ಲಿ ಗೋಚರಿಸುತ್ತದೆ. ಇದರಿಂದ ಯಾವುದೇ ರೀತಿಯ ಆತಂಕ, ಭಯ ಬೇಡ. ಗ್ರಹಣದ ಬಗ್ಗೆ ವೈಜ್ಞಾನಿಕ ಮನೋಭಾವದ ಅಗತ್ಯತೆ ಇದೆ ಎಂದು ಹವ್ಯಾಸಿ ಖಗೋಳ ವೀಕ್ಷಕ ಎಚ್.ಎಸ್.ಟಿ.ಸ್ವಾಮಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಎಚ್.ಎಸ್.ಟಿ.ಸ್ವಾಮಿ
ಹವ್ಯಾಸಿ ಖಗೋಳ ವೀಕ್ಷಕ,
ಚಿತ್ರದುರ್ಗ
ಮೊ : 94485 65534
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.















