Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ವೈಷಮ್ಯ ಬೆಳೆಸಿಕೊಳ್ಳದೆ ಸಾಮರಸ್ಯದ ಕಡೆ ಗಮನವಿರಲಿ : ಸಿಪಿಐ ಷಣ್ಮುಖಪ್ಪ

---Advertisement---

ಸುದ್ದಿಒನ್, ಹಿರಿಯೂರು, ಫೆಬ್ರವರಿ.11 : ಕಾನೂನು ಸುವ್ಯವಸ್ಥೆ ಕಾಪಾಡುವುದರ ಮೂಲಕ ಶಾಂತಿ, ನೆಮ್ಮದಿ ವಾತಾವರಣ ನಿರ್ಮಾಣ ಮಾಡುವುದು ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿಯಾಗಿದೆ ಎಂದು ಸಿಪಿಐ ಷಣ್ಮುಖಪ್ಪ ಅಭಿಪ್ರಾಯಪಟ್ಟರು.

ತಾಲೂಕಿನ ಅಬ್ಬಿನಹೊಳೆ ಪೊಲೀಸ್ ಠಾಣಾ ಆವರಣದಲ್ಲಿ ಅಬ್ಬಿನಹೊಳೆ ಪೊಲೀಸ್ ಇಲಾಖೆ ವತಿಯಿಂದ ಹಮ್ಮಿಕೊಂಡಿದ್ದ ದಲಿತ ದಿನಾಚರಣೆ ಹಾಗೂ ಕುಂದುಕೊರತೆಗಳ ಸಭೆಯ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಗ್ರಾಮೀಣ ಭಾಗದಲ್ಲಿ ವೈಷಮ್ಯ ಬೆಳೆಸಿಕೊಳ್ಳದೆ ಒಬ್ಬರಿಗೊಬ್ಬರು ಸಾಮರಸ್ಯರಿಂದ ನೆಮ್ಮದಿಯ ಸಂಸಾರದ ಕಡೆ ಗಮನ ಹರಿಸಬೇಕು ಎಂದು ತಿಳಿಸಿದರು.

ಪಿಎಸ್ಐ ಬಾಹುಬಲಿ ಪಡನಾಡ ಮಾತನಾಡಿ ದಲಿತರ ಮೇಲೆ ಯಾವುದೇ ರೀತಿಯ ದೌರ್ಜನ್ಯ, ದಬ್ಬಾಳಿಕೆ ನಡೆದರೆ ಎಂದಿಗೂ ಸಹಿಸುವುದಿಲ್ಲ ಯಾರ ಒತ್ತಡಕ್ಕೆ ಮಣಿಯದೆ ಪಾರದರ್ಶಕ ರೀತಿಯಲ್ಲಿ ನಾವು ಕ್ರಮ ಕೈಗೊಳ್ಳುತ್ತೇವೆ ಎಂದು ಭರವಸೆ ನೀಡಿದರು. ದಲಿತರು ಮೊದಲು ತಮ್ಮ ಮಕ್ಕಳಿಗೆ ಶಿಕ್ಷಣ ಕೊಡಿಸಲು ಆದ್ಯತೆ ನೀಡಬೇಕು. ಗ್ರಾಮಗಳಲ್ಲಿ ಸೌಹಾರ್ದಯುತವಾಗಿ ಜೀವನ ನಡೆಸಿ ಎಂದು ಸಲಹೆ ನೀಡಿದರು.

ಅಪಘಾತ, ಜಮೀನು, ಜಾಗೈ ವಿವಾದದಗಳ ಬಗ್ಗೆ ದಾಖಲಾಗಿರುವ ಇನ್ನಿತರ ಪ್ರಕರಣಗಳನ್ನು ತಮ್ಮದೇ ರೀತಿಯಲ್ಲಿ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಂಡು, ನೊಂದವರಿಗೆ ನ್ಯಾಯ ಒದಗಿಸಲಾಗುವುದು ಎಂದರು.

ಈ ಸಂದರ್ಭದಲ್ಲಿ ಪಿಎಸ್ಐ ಮಂಜುನಾಥ್, ದಲಿತ ಮುಖಂಡರಾದ ಕಂಬತ್ತಹಳ್ಳಿ ರಂಗಸ್ವಾಮಿ, ಕೆಪಿ ಶ್ರೀನಿವಾಸ್, ಈಶ್ವರಪ್ಪ, ಚಿದಾನಂದ್, ಕೃಷ್ಣಪ್ಪ , ಖಂಡೇನಹಳ್ಳಿ ಈಶ್ವರಪ್ಪ, ಹೇಮಂತ್ ಗೌಡ, ಪೊಲೀಸ್ ಸಿಬ್ಬಂದಿಗಳಾದ ಎಸ್. ನಾಗರಾಜ್, ರುದ್ರೇಶ್ , ಗಗನ್, ಕೆ. ನಾಗರಾಜ್, ಸೇರಿದಂತೆ ಅಬ್ಬಿನಹೊಳೆ ಪೊಲೀಸ್ ಠಾಣಾ ವ್ಯಾಪ್ತಿಯ ದಲಿತ ಮುಖಂಡರು ಭಾಗವಹಿಸಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...