Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ನಿಮ್ಮ ಕಣ್ಣಿನಲ್ಲಿ ಚಿಕ್ಕ ವ್ಯತ್ಯಾಸ ಕಂಡುಬಂದರೂ ನಿರ್ಲಕ್ಷಿಸಬೇಡಿ : ಕ್ಯಾನ್ಸರ್ ರೋಗಲಕ್ಷಣಗಳಿರಬಹುದು…!

---Advertisement---

ಸುದ್ದಿಒನ್ : ಭಾರತ ಈಗ ಎದುರಿಸುತ್ತಿರುವ ದೊಡ್ಡ ಆರೋಗ್ಯ ಸಮಸ್ಯೆಯೆಂದರೆ ಅದು ಕ್ಯಾನ್ಸರ್. ಈ ಸಾಂಕ್ರಾಮಿಕ ರೋಗವು ವಯಸ್ಸಿನ ಭೇದವಿಲ್ಲದೆ ಜನರ ಮೇಲೆ ದಾಳಿ ಮಾಡುತ್ತಿದೆ. ಈಗ ಆಧುನಿಕ ಕಾಲದಲ್ಲಿಯೂ ಔಷಧ ಲಭ್ಯವಿದ್ದರೂ ಸಕಾಲದಲ್ಲಿ ಗುರುತಿಸದಿದ್ದರೆ ಈ ರೋಗ ಮಾರಕವಾಗಬಹುದು. ಕ್ಯಾನ್ಸರ್ ಕೋಶಗಳು ದೇಹದಲ್ಲಿ ಎಲ್ಲಿ ಬೇಕಾದರೂ ಬೆಳೆಯಬಹುದು. ಕಣ್ಣಿನ ಕ್ಯಾನ್ಸರ್ ಅಪರೂಪದ ಕ್ಯಾನ್ಸರ್ಗಳಲ್ಲಿ ಒಂದಾಗಿದೆ. ಅದರ ಆರಂಭಿಕ ರೋಗಲಕ್ಷಣಗಳನ್ನು ಗುರುತಿಸಿ ಜಾಗೃತರಾದರೆ ರೋಗವನ್ನು ವಾಸಿ ಮಾಡಬಹುದು.

ಕಣ್ಣಿನ ಕ್ಯಾನ್ಸರ್‌ನ ಲಕ್ಷಣಗಳು:

• ಕಣ್ಣಿನಲ್ಲಿ ಬಿಳಿಯ ಪ್ರತಿಬಿಂಬ ಕಾಣಿಸಿಕೊಳ್ಳುತ್ತದೆ

• ವೀಕ್ಷಿಸುವಾಗ, ಸಂಪೂರ್ಣ ದೃಶ್ಯವು ಸ್ಪಷ್ಟವಾಗಿ ಕಾಣದೆ ಸ್ವಲ್ಪ ಕತ್ತಲೆಯಾದಂತೆನಿಸುತ್ತದೆ.

• ದೃಷ್ಟಿ ಮಸುಕಾಗುತ್ತದೆ.

•  ಎಲ್ಲವೂ ಎರಡೆರಡಾಗಿ ಕಾಣುತ್ತವೆ.

• ಕಣ್ಣುರೆಪ್ಪೆಯ ಕೆಳಗೆ ಒಂದು ಸಣ್ಣ ವ್ಯತ್ಯಾಸ ಕಂಡುಬಂದರೆ ತಕ್ಷಣವೇ ವೈದ್ಯರೊಂದಿಗೆ ಸಮಾಲೋಚಿಸಬೇಕು.

• ಕಣ್ಣುರೆಪ್ಪೆಗಳ ಮೇಲೆ ಸಣ್ಣ ಕೆಂಪು ಉಬ್ಬುಗಳನ್ನು ನಿರ್ಲಕ್ಷಿಸಬೇಡಿ.

• ನಿಮ್ಮ ರೆಪ್ಪೆಗೂದಲುಗಳು ಉದುರುತ್ತಿದ್ದರೆ ಕೂಡಲೇ ವೈದ್ಯರನ್ನು ಸಂಪರ್ಕಿಸಿ.

• ಕಣ್ಣುರೆಪ್ಪೆಯ ಸೋಂಕು

•  ಕಣ್ಣಿನ ಮೂಲೆಯಲ್ಲಿ ಆಗಾಗ್ಗೆ ಸಣ್ಣ ಹೊಳಪಿನ ಬೆಳಕು ಕಂಡು ಬಂದರೆ ವೈದ್ಯರ ಬಳಿ ಪರೀಕ್ಷಿಸಿ.

• ಕಣ್ಣಿನಲ್ಲಿ ನೋವು ದೀರ್ಘಕಾಲದವರೆಗೆ ಇದ್ದರೆ, ಊತವನ್ನು ಅನುಭವಿಸಿದರೆ, ಕಣ್ಣೀರಿನಲ್ಲಿ ರಕ್ತದ ಹನಿಗಳು ಅಥವಾ ಕಪ್ಪು ಚುಕ್ಕೆ ಮತ್ತಿತರೆ ಬದಲಾವಣೆಗಳು ಕಂಡುಬಂದರೆ ತಕ್ಷಣ ವೈದ್ಯರ ಬಳಿಗೆ ಹೋಗಿ.

ವಯಸ್ಸಾದವರಲ್ಲಿ ಕಣ್ಣಿನ ಕ್ಯಾನ್ಸರ್ ಹೆಚ್ಚು ಸಾಮಾನ್ಯವಾಗಿದೆ. ಹಾಗೆಂದ ಮಾತ್ರಕ್ಕೆ ಯುವಜನರಿಗೆ ಬರುವುದಿಲ್ಲ ಎಂದಲ್ಲ. ಅಲ್ಲದೆ ಅನುವಂಶಿಕವಾಗಿ ಬರುವ ಸಾಧ್ಯತೆಯೂ ಇದೆ.

(ಪ್ರಮುಖ ಸೂಚನೆ: ಆರೋಗ್ಯ ತಜ್ಞರು ಮತ್ತು ಇತರ ಅಧ್ಯಯನಗಳಿಂದ ಪಡೆದ ಮಾಹಿತಿಯ ಆಧಾರದ ಮೇಲೆ ನಾವು ಈ ವಿವರಗಳನ್ನು ಒದಗಿಸುತ್ತಿದ್ದೇವೆ. ವಿಷಯಗಳು ಕೇವಲ ತಿಳುವಳಿಕೆಗಾಗಿ ಮಾತ್ರ. ನಿಮಗೆ ಯಾವುದೇ ಅನುಮಾನಗಳು ಅಥವಾ ಸಮಸ್ಯೆಗಳಿದ್ದರೆ ವೈದ್ಯರನ್ನು ಸಂಪರ್ಕಿಸುವುದು ಸೂಕ್ತ.)

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment