ಶ್ವಾಸ ಇರುವವರೆಗೂ ವಿಶ್ವಾಸ ಕಳೆದುಕೊಳ್ಳಬೇಡಿ : ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ

 

 

ಸುದ್ದಿಒನ್ : ಶ್ವಾಸ ಇರುವವರಿಗೂ ವಿಶ್ವಾಸ ಕಳೆದುಕೊಳ್ಳಬೇಡಿ ಎಂದು ಭೋವಿ ಗುರುಪೀಠದ ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ ಹೇಳಿದರು.

ಮಾಲ್ಡೀವ್ಸ್ ದೇಶದ ವಿಲ್ಲಾ ನೌಟೀಕ ಪ್ಯಾರಡೇಸ್ ದ್ವೀಪದಲ್ಲಿ ಶುಕ್ರವಾರ ನಡೆದ ವಿಶ್ವ ಸಾಧಕರ ಶೃಂಗಸಭೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ವಿಶ್ವಾಸವೇ ವಿಶ್ವ. ಮನುಜ ಮತ ವಿಶ್ವಪಥ, ದಯೆ ಎಲ್ಲಾ ಧರ್ಮಗಳ ಮೂಲ. ಸಾಮಾಜಿಕ, ಶೈಕ್ಷಣಿಕ, ಧಾರ್ಮಿಕ ವಿಶ್ವಸಾಧಕರು ಶ್ವಾಸ ಇರುವವರಿಗೂ ವಿಶ್ವಾಸ ಉಳಿಸಿಕೊಂಡಾಗ ಅಜರಾಮರ ದೃವತಾರೆಯಾಗುತ್ತಾರೆ ಎಂದು ತಿಳಿಸಿದರು.

ಸ್ವಧರ್ಮ ನಿಷ್ಠೆ, ಪರಧರ್ಮ ಸಹಿಷ್ಣೋತೆ ಇರಲಿ. ಎಲೆಮರಿಕಾಯಿಗಳಂತಹ ಸಾಧಕರನ್ನು ವಿಶ್ವಕ್ಕೆ ಪರಿಚಯಿಸುವ ಕಾರ್ಯ ಜಗತ್ತಿಗೆ ಮಾದರಿ. ಸಂಸ್ಕೃತಿ, ಸಂಸ್ಕರ ಭಾರತದ ಹೆಮ್ಮೆ ಹಾಗೂ ಗಟ್ಟಿತನದಿಂದ ಕೂಡಿದೆ. ಹಾಗಾಗಿ ಭಾರತ ಜಗತ್ತಿಗೆ ಸಂಸ್ಕಾರದ ರಾಯಭಾರಿಯಾಗಿದೆ ಎಂದು ಹೇಳಿದರು.

ನಾಡಿನ ಆದಿಬೀದಿಗಳಲ್ಲಿ ಆಗುವ ಸಂಘರ್ಷ, ರಾಷ್ಟ್ರದ ಗಡಿ ರೇಖೆಗಳ ತನಕ ನಡೆಯುತ್ತದೆ. ಕೆಲವು ಸಂಘರ್ಷಗಳು ನಕಾರಾತ್ಮಕದಿಂದ ಕೂಡಿರುತ್ತವೆ. ಇನ್ನೂ ಕೆಲವು ಸಂಘರ್ಷಗಳು ಸಕಾರಾತ್ಮಕದಿಂದ ಕೂಡಿರುತ್ತವೆ. ಸಂಸ್ಕಾರವಂತ ಸಾಧಕರ ಸಂಘರ್ಷ ಇತಿಹಾಸದ ಪುಟಗಳಲ್ಲಿ ಸುವರ್ಣಾಕ್ಷರದಲ್ಲಿ ದಾಖಲಾಗಿದೆ. ಅಂತಹ ಸಾಧಕರು, ಸಂತರು, ಮಹಾಂತರು ದಾರ್ಶನಿಕರಾಗುತ್ತಾರೆ.

ಕನ್ನಡ ನಾಡಿನ ಬಸವ. ಸಿದ್ದರಾಮ. ಹಾಗೂ ಶರಣರು ಮತ್ತು ಕನಕದಾಸ, ಪುರಂದರದಾಸರು ನಾಡಿನ ಅಪ ಮೌಲ್ಯಗಳ ವಿರುದ್ಧ ಸಂಘರ್ಷ ಮಾಡುತ್ತಾ ಸಂಸ್ಕಾರದ ಸಧ್ಬಾವನೆ ನೀಡಿದ್ದಕ್ಕಾಗಿ ಅವರು ಎಂದಿಗೂ ಧ್ರುವತಾರೆಗಳಾಗಿದ್ದಾರೆ. ಭಾರತದ ಮಟ್ಟಿಗೆ ನಾರಾಯಣ ಗುರು, ಗೌತಮ ಬುದ್ಧ, ಅಂಬೇಡ್ಕರ್ ಹಾಗೂ ಜೈನ ತೀರ್ಥಂಕರು, ಸಿಖ್ಖ ಗುರುಗಳು ಸಮಾಜೋದ್ಧಾರ್ಮಿಕ ದಾರ್ಶನಿಕರಾಗಿದ್ದಾರೆ. ಜಗತ್ತಿನ ನೂತನ ಧರ್ಮಗಳಿಂದ ಹಿಡಿದು ಪ್ರಾಚೀನ ಧರ್ಮಗಳ ತನಕ ಮೂಲ ಸಂದೇಶ ದಯೆ ಮತ್ತು ಶಾಂತಿ. ಯಾವ ಧರ್ಮಗಳು ಅಶಾಂತಿಯನ್ನು ಬಯಸುವುದಿಲ್ಲ. ನಕಾರಾತ್ಮಕ ಸಂಘರ್ಷದ ಪ್ರಚೋದನೆ ನೀಡುವುದಿಲ್ಲ. ಹೀಗಾಗಿ ಎಲ್ಲಾ ಧರ್ಮಗಳು ಸರ್ವ ಶ್ರೇಷ್ಠ. ಜಗತ್ತಿನ ಏಳು ಪ್ರಾಚೀನ ನಾಗರಿಕತೆಯ ಸಂಸ್ಕೃತಿಗಳಲ್ಲಿ ಭಾರತೀಯ ನಾಗರಿಕತೆ ಮಾತ್ರ ಉಳಿದಿದೆ. ಕಾರಣ ಭಾರತ ದೇಶದಲ್ಲಿ ಜನ್ಮಿಸಿದಂತಹ ಧರ್ಮ ಅನೇಕ ಕಾಲಘಟ್ಟಗಳಲ್ಲಿ ಉದಯಿಸಿದ ಧಾರ್ಮಿಕರು ಸಂಸ್ಕಾರ ಮತ್ತು ಸಂಸ್ಕೃತಿಯನ್ನು ಗಟ್ಟಿಗೊಳಿಸುತ್ತಾ ಬಂದರು. ಆಧುನಿಕ ಕಾಲದಲ್ಲಿ ಪ್ರತಿ ಮನೆಯ ಸ್ತ್ರೀ ಅದನ್ನು ಕಾಪಾಡುತ್ತಿದ್ದಾಳೆ. ಹಾಗಾಗಿ ಆಧುನಿಕ ನಾಗರಿಕತೆಯ ಸಂಸ್ಕಾರದ ರಾಯಭಾರಿ ಮಹಿಳೆ. ಸಂಸ್ಕೃತಿಯ ರಾಯಭಾರಿ ಈಗಿನ ಯುವ ಪೀಳಿಗೆ ಎಂದು ತಿಳಿಸಿದರು.

ವೇದಿಕೆಯಲ್ಲಿ ವಿಶ್ವವಾಣಿ ಪತ್ರಿಕೆಯ ಮುಖ್ಯ ಸಂಪಾದಕ ವಿಶ್ವೇಶ್ವರ ಭಟ್ ಅಧ್ಯಕ್ಷತೆವಹಿಸಿದ್ದರು. ಮಾಜಿ ಸಚಿವೆ, ನಟಿ ಡಾ.ಜಯಮಾಲ ಹಾಗೂ ನಟಿ ಸೌಂದರ್ಯ, ಮಾಲ್ಡೀವ್ಸ್ ಅಮಿಯದ್ ಅಬ್ದುಲ್ ಉಪಸ್ಥಿತರಿದ್ದರು. 13 ಜನ ಸಾಧಕರನ್ನು ಗೌರವಿಸಲಾಯಿತು.

suddionenews

Recent Posts

ಉದ್ಯೋಗ ವಾರ್ತೆ : ಚಿತ್ರದುರ್ಗದಲ್ಲಿ ಮಾರ್ಚ್ 01 ರಂದು ಬೃಹತ್ ಉದ್ಯೋಗ ಮೇಳ

ಚಿತ್ರದುರ್ಗ. ಫೆ.24:  ಬರುವ ಮಾರ್ಚ್ 01 ರಂದು ಚಿತ್ರದುರ್ಗದ ಮುರುಘರಾಜೇಂದ್ರ ಕ್ರೀಡಾಂಗಣ (ಸರ್ಕಾರಿ ವಿಜ್ಞಾನ ಕಾಲೇಜು ಮೈದಾನ) ದಲ್ಲಿ ಬೃಹತ್…

2 hours ago

ಮಧ್ಯ ಕರ್ನಾಟಕದಲ್ಲಿಯೇ ಪ್ರಪ್ರಥಮ ENT ಲೇಸರ್ ಶಸ್ತ್ರಚಿಕಿತ್ಸಾ ಯಂತ್ರ ಲೋಕಾರ್ಪಣೆ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ.…

3 hours ago

ಭದ್ರಾ ಮೇಲ್ದಂಡೆಗೆ ರಾಜ್ಯ ಬಜೆಟ್ ನಲ್ಲಿ ಐದು ಸಾವಿರ ಕೋಟಿ ಅನುದಾನಕ್ಕೆ ಹಕ್ಕೊತ್ತಾಯ

ಚಿತ್ರದುರ್ಗ, ಫೆಬ್ರವರಿ. 24 : ಭದ್ರ ಮೇಲ್ದಂಡೆ ಯೋಜನೆಗೆ ಮುಂಬರುವ ರಾಜ್ಯ ಬಜೆಟ್ ನಲ್ಲಿ ಕನಿಷ್ಟ ಐದು ಸಾವಿರ ಕೋಟಿ…

3 hours ago

ಶಾಲಾ ಪಠ್ಯದಲ್ಲಿ ಸಂಭಾಜಿ ಜೀವನ ಸೇರಿಸಲು ಒತ್ತಾಯ ; ಕಾರಣ ಏನು ಗೊತ್ತಾ..?

ವಿಕ್ಕಿ ಕೌಶಲ್ ಹಾಗೂ ರಶ್ಮಿಕಾ ಮಂದಣ್ಣ ನಟನೆಯ ಛಾವಾ ಸಿನಿಮಾ ಎಲ್ಲೆಡೆ ಭರ್ಜರಿ ರೆಸ್ಪಾನ್ಸ್ ಪಡೆದುಕೊಳ್ಳುತ್ತಿದೆ. ಇದರಲ್ಲಿ ಸಂಭಾಜಿ ಜೀವನ…

3 hours ago