Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ಕಣ್ಣಿನ ಬಗ್ಗೆ ನಿರ್ಲಕ್ಷ್ಯ ಬೇಡ, ಕಾಳಜಿ ವಹಿಸಿ : ಡಾ.ಪ್ರದೀಪ್

---Advertisement---

 

 

ವರದಿ ಮತ್ತು ಫೋಟೋ ಕೃಪೆ
                       ಸುರೇಶ್ ಪಟ್ಟಣ್,                         
ಮೊ : 98862 95817

ಸುದ್ದಿಒನ್, ಚಿತ್ರದುರ್ಗ. ಡಿ. 15 : ಜೀವನದಲ್ಲಿ ಕಣ್ಣಿಗೆ ಮಹತ್ವವಾದ ಸ್ಥಾನ ಇದೆ. ಅದರ ಬಗ್ಗೆ ಕಾಳಜಿಯನ್ನು ವಹಿಸಬೇಕು ಯಾವುದೇ ಕಾರಣಕ್ಕೂ ಕಣ್ಣನ್ನು ನಿರ್ಲಕ್ಷ್ಯ ಮಾಡಬೇಡಿ ಎಂದು ಹಿರಿಯ ನೇತ್ರ ತಜ್ಞರಾದ ಡಾ.ಪ್ರದೀಪ್ ತಿಳಿಸಿದರು.

ಶಂಕರ್ ಕಣ್ಣಿನ ಆಸ್ಪತ್ರೆ ಶಿವಮೊಗ್ಗ, ವಿಶ್ವ ಮಾನವ ಸಾಂಸ್ಕೃತಿಕ ಮತ್ತು ವಿದ್ಯಾ ಸಂಸ್ಥೆ ಸಿಬಾರ ಗುತ್ತಿನಾಡು, ರೋಟರಿ ಕ್ಲಬ್ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿ ಜಿಲ್ಲಾ ಆಂಧತ್ವ ನಿಯಂತ್ರಣಾ ಕಾರ್ಯಕ್ರಮ ಮತ್ತು ತಾಲ್ಲೂಕು ವೈದ್ಯಾಧಿಕಾರಿಗಳ ಕಚೇರಿ ಸಂಯುಕ್ತಾಶ್ರಯದಲ್ಲಿ ಸಿಬಾರದ ಗುತ್ತಿನಾಡು ವಿಶ್ವ ಮಾನವ ಸಾಂಸ್ಕೃತಿಕ ಮತ್ತು ವಿದ್ಯಾ ಸಂಸ್ಥೆಯ ಆವರಣದಲ್ಲಿ ಹಮ್ಮಿಕೊಂಡಿದ್ದ ಉಚಿತ ನೇತ್ರ ತಪಾಸಣಾ ಮತ್ತು ಶಸ್ತ್ರ ಚಿಕಿತ್ಸಾ ಶಿಬಿರದಲ್ಲಿ ಭಾಗವಹಿಸಿ ಮಾತನಾಡಿದರು.

ಮಾನವ ದೇಹದಲ್ಲಿ ಕಣ್ಣು ಬಹಳ ಮುಖ್ಯವಾದ ಅಂಗವಾಗಿದೆ ನಮ್ಮ ದೇಹದಲ್ಲಿ ಬೇರೆ ಅಂಗಗಳಲ್ಲಿ ನೂನ್ಯತೆ ಬಂದರೆ ಬದುಕಬಹುದಾಗಿದೆ ಆದರೆ ಕಣ್ಣು ಇಲ್ಲವಾದರೆ ನಮ್ಮ ಪ್ರತಿಯೊಂದು ಕೆಲಸಕ್ಕೊ ಬೇರೆಯವರನ್ನು ಆಶ್ರಯಿಸಬೇಕಿದೆ.

ಇದರಿಂದ ನಮ್ಮ ಮುಖಕ್ಕೆ ಎಷ್ಟು ಪ್ರಾಮುಖ್ಯತೆಯನ್ನು ನೀಡುತ್ತೇವೆ ಅಷ್ಟೇ ಪ್ರಾಮುಖ್ಯತೆಯನ್ನು ಕಣ್ಣುಗಳಿಗೂ ಸಹಾ ನೀಡಬೇಕಿದೆ. ನಿಮ್ಮ ಮರಣದ ನಂತರ ನಿಮ್ಮ ಕಣ್ಣುಗಳನ್ನು ಮಣ್ಣಿನಲ್ಲಿ ಉಳದೆ ಬೆಂಕಿಯಲ್ಲಿ ಸುಡದೇ ದಾನವನ್ನು ಮಾಡುವುದರ ಮೂಲಕ ಇತರರಿಗೆ ಬೇಳಕಾಗಬೇಕಿದೆ ಎಂದರು.

ರೋಟರಿ ಕ್ಲಬ್‌ನಂತಹ ಹಲವಾರು ಸಂಸ್ಥೆಗಳು ಈ ರೀತಿಯಾದ ಉಚಿತವಾದ ಆರೋಗ್ಯ ಶಿಬಿರಗಳನ್ನು ನಡೆಸುವುದರ ಮೂಲಕ ನಿಮ್ಮಗಳ ಆರೋಗ್ಯದ ಬಗ್ಗೆ ಕಾಳಜಿಯನ್ನು ವಹಿಸುತ್ತಿದ್ದಾರೆ. ಇದರಲ್ಲಿ ಸಕ್ರಿಯವಾಗಿ ಭಾಗವಹಿಸಿ ನಿಮ್ಮ ಆರೋಗ್ಯವನ್ನು ತಪಾಸಣೆ ಮಾಡಿಸಿಕೊಂಡು ಏನಾದರೂ ತೊಂದರೆ ಇದ್ದರೆ ಈಗಲೇ ಸರಿಪಡಿಸಿಕೊಳ್ಳಿ ಎಂದು ಕಿವಿ ಮಾತು ಹೇಳಿದರು.

ರೋಟರಿ ಕ್ಲಬ್ ಅಧ್ಯಕ್ಷ ಕನಕರಾಜು ಮಾತನಾಡಿ, ರೋಟರಿಯಂತಹ ಸಂಸ್ಥೆಗಳು ಈ ರೀತಿಯಾದ ಉಚಿತವಾದ ಆರೋಗ್ಯ ಶಿಬಿರಗಳನ್ನು ವರ್ಷದಲ್ಲಿ ಹಲವಾರು ಬಾರಿ ಏರ್ಪಡಿಸುವುದರ ಮೂಲಕ ಜನರ ಆರೋಗ್ಯದ ಬಗ್ಗೆ ಕಾಳಜಿಯನ್ನು ತೋರಿಸುತ್ತಿದೆ. ಇದರ ಪ್ರಯೋಜನವನ್ನು ನೀವುಗಳು ಪಡೆಯಬೇಕಿದೆ. ಸಣ್ಣ-ಪುಟ್ಟ ತೊಂದರೆ ಇದ್ದರೆ ಅವುಗಳನ್ನು ಇಲ್ಲಿಯೇ ಬಗೆಹರಿಸಿಕೊಳ್ಳಬಹುದಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಡಾ. ಸೌಂದರ್ಯ, ನಿಕೇಲೇಶ್, ಶಿವಕುಮಾರ್, ರೋಟರಿ ಕ್ಲಬ್‌ನ ಮಾಜಿ ಅಧ್ಯಕ್ಷ ಎಸ್.ವಿರೇಶ್, ವೀರಭದ್ರಸ್ವಾಮಿ, ಡಾ,ರಾಮು ಹಾಜರಿದ್ದರು. 158 ರೋಗಿಗಳನ್ನು ತಪಾಸಣೆಯನ್ನು ನಡೆಸಿದ್ದು, 88 ಜನರಿಗೆ ಶಸ್ತ್ರ ಚಿಕಿತ್ಸೆಗೆ ಒಳಪಡಿಸಲಾಗುವುದು.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...