ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552
ಚಿತ್ರದುರ್ಗ, (ಮೇ.16) : ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಚಿತ್ರದುರ್ಗ ವಿಧಾನಸಭೆ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿ ಪ್ರಚಂಡ ಬಹುಮತಗಳಿಂದ ಜಯಶಾಲಿಯಾದ ನೂತನ ಶಾಸಕ ಕೆ.ಸಿ.ವೀರೇಂದ್ರಪಪ್ಪಿ ಫಲಿತಾಂಶ ಪ್ರಕಟಗೊಂಡ ನಾಲ್ಕನೆ ದಿನವೆ ಪ್ರಥಮ ಬಾರಿ ಜಿಲ್ಲಾಸ್ಪತ್ರೆಗೆ ದಿಢೀರ್ ಭೇಟಿ ನೀಡಿ ಅಲ್ಲಿನ ವ್ಯವಸ್ಥೆ ಸುಧಾರಣೆಯಾಗಬೇಕೆಂದು ಜಿಲ್ಲಾ ಶಸ್ತ್ರ ಚಿಕಿತ್ಸಕರಿಗೆ ಖಡಕ್ ಸೂಚನೆ ನೀಡಿದರು.
ಮಂಗಳವಾರ ಜಿಲ್ಲಾಸ್ಪತ್ರೆಗೆ ನೂತನ ಶಾಸಕ ಕೆ.ಸಿ.ವೀರೇಂದ್ರಪಪ್ಪಿ ಭೇಟಿ ನೀಡುವ ಮುನ್ಸೂಚನೆ ಅರಿತ ನೂರಾರು ಅಭಿಮಾನಿಗಳು ಹಾಗೂ ಪಕ್ಷದ ಕಾರ್ಯಕರ್ತರು ಜಿಲ್ಲಾಸ್ಪತ್ರೆ ಆವರಣದಲ್ಲಿ ಜಮಾಯಿಸಿ ಹೂಗುಚ್ಚ ನೀಡಿ ಸ್ವಾಗತಿಸಿದರು.
ಜಿಲ್ಲಾಸ್ಪತ್ರೆಯೊಳಗೆ ಪ್ರವೇಶಿಸಿದ ಶಾಸಕರು ನೇರವಾಗಿ ಮೊದಲು ಶೌಚಾಲಯಗಳನ್ನು ವೀಕ್ಷಿಸಿ ಸ್ವಚ್ಚವಾಗಿಟ್ಟುಕೊಳ್ಳಬೇಕು. ಯಾವುದೇ ಕಾರಣಕ್ಕೂ ರೋಗಿಗಳಿಗೆ ನೀರಿಗೆ ಕೊರತೆಯಾಗಬಾರದು. ಮೊದಲೇ ಬಡ ಜಿಲ್ಲೆ ಚಿತ್ರದುರ್ಗದಲ್ಲಿ ಸಿರಿವಂತರು ಯಾರೂ ಸರ್ಕಾರಿ ಆಸ್ಪತ್ರೆಗೆ ಬರುವುದಿಲ್ಲ. ಇಲ್ಲಿ ದಾಖಲಾಗುವ ರೋಗಿಗಳಿಗೆ ಹೊರಗಿನಿಂದ ಔಷಧಿ ತರುವಂತೆ ಚೀಟಿ ಬರೆದುಕೊಡುವ ಪದ್ದತಿ ನಿಲ್ಲಬೇಕು. ಲಂಚದ ಹಾವಳಿ ಮಿತಿ ಮೀರಿದೆ ಎನ್ನುವ ದೂರುಗಳು ಸಾಕಷ್ಟು ಕೇಳಿ ಬರುತ್ತಿದೆ. ಇಲ್ಲಿಯವರೆಗೂ ಹೇಗಿತ್ತು ಎನ್ನುವುದು ಬೇಡ. ಇನ್ನು ಮುಂದೆ ಸುಧಾರಣೆಯಾಗಬೇಕು. ಯಾವುದೇ ಕಾರಣಕ್ಕೂ ರೋಗಿಗಳನ್ನು ಅಲೆದಾಡಿಸಬೇಡಿ. ದೂರದ ಬೆಂಗಳೂರು, ದಾವಣಗೆರೆ, ಮಣಿಪಾಲ್ಗೆ ಸಾಗಿಸುವಂತೆ ವೈದ್ಯರು ಶಿಫಾರಸ್ಸು ಮಾಡುವುದು ನಿಲ್ಲಬೇಕು. ಸಾಧ್ಯವಾದಷ್ಟು ಇಲ್ಲಿಯೇ ಚಿಕಿತ್ಸೆ ದೊರಕಬೇಕು. ಎಕ್ಸರೆ, ಸ್ಕ್ಯಾನಿಂಗ್ ಯಂತ್ರಗಳು ಏನಾದರೂ ಕೆಟ್ಟಿದ್ದರೆ ನನ್ನ ಗಮನಕ್ಕೆ ತನ್ನಿ ಸರ್ಕಾರದಿಂದ ಅನುದಾನ ಕೊಡಿಸುವುದಾಗಿ ಭರವಸೆ ಕೊಟ್ಟರು. ಕಣ್ಣಿನ ಶಸ್ತ್ರ ಚಿಕಿತ್ಸಾ ಕೊಠಡಿ ಹಾಗೂ ಮೇಜರ್ ಓಟಿಗೂ ಭೇಟಿ ನೀಡಿ ವೀಕ್ಷಿಸಿದರು.
ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ.ಬಸವರಾಜ್, ನಿವಾಸಿ ವೈದ್ಯಾಧಿಕಾರಿ ಡಾ.ಜ್ಞಾನಪ್ರಕಾಶ್ ಹಾಗೂ ಸಿಬ್ಬಂದಿಯವರು ಈ ಸಂದರ್ಭದಲ್ಲಿದ್ದರು.
ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಕಾರೆಹಳ್ಳಿ ಉಲ್ಲಾಸ್, ಇಂಟೆಕ್ ಅಧ್ಯಕ್ಷ ಅಶೋಕ್ ನಾಯ್ಡು, ಸೈಯದ್ ಖುದ್ದೂಸ್ ಇನ್ನು ಅನೇಕರು ಉಪಸ್ಥಿತರಿದ್ದರು.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್ಡೇಟ್. ನೀವು ಯಾವಾಗಲೂ ಅಪ್ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್