ಮುಂದೊಂದು ದಿನ ಹಿಂದೂ ಜಿಹಾದ್ ಪ್ರಾರಂಭಿಸಬೇಕಾಗುತ್ತೆ : RSS ಮುಖಂಡ ಖಡಕ್ ಎಚ್ಚರಿಕೆ..!

suddionenews
1 Min Read

ಚಿಕ್ಕೋಡಿ: ಶಿವಮೊಗ್ಗದಲ್ಲಿ ಭಜರಂಗದಳ ಕಾರ್ಯಕರ್ತ ಹರ್ಷನನ್ನು ಬರ್ಬರವಾಗಿ ಕೊಲೆ ಮಾಡಿರುವುದನ್ನು ಖಂಡಿಸಿ, ಅಥಣಿ ಪಟ್ಟಣದಲ್ಲಿ ಹಿಂದೂಪರ ಸಂಘಟನೆಗಳು ಹಾಗೂ ಬಜರಂಗದಳ ಸಂಘಟನೆಗಳು ಜೊತೆಯಾಗಿ ಶಿವಾಜಿ ಸರ್ಕಲ್ ನಿಂದ ಅಂಬೇಡ್ಕರ್ ವೃತ್ತದ ವರೆಗೆ ಬೃಹತ್ ಪಾದಯಾತ್ರೆ ಮಾಡುವ ಮೂಲಕ ಹರ್ಷನ ಹತ್ಯೆಯನ್ನು ಖಂಡಿಸಿದ್ದಾರೆ.

ಇದೇ ವೇಳೆ RSS ಮುಖಂಡ ಅರವಿಂದ್ ರಾವ್ ದೇಶಪಾಂಡೆ ಅವರು ಕೊಲೆಯನ್ನು ತೀವ್ರವಾಗಿ ಖಂಡಿಸಿ ತಪ್ಪಿತಸ್ಥರ ವಿರುದ್ಧ ಸರ್ಕಾರ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು. ಇನ್ನು ಮುಂದೆ ಯಾವುದೇ ಹಿಂದೂ ಯುವಕನ ಮೇಲೆ ಈ ರೀತಿ ಆಗದಂತೆ ನೋಡಿಕೊಳ್ಳಬೇಕೆಂದು ಸರ್ಕಾರಕ್ಕೆ ಒತ್ತಾಯಿಸಿದರು.

ಇದೆ ವೇಳೆ ಲವ್ ಜಿಹಾದ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕಠಿಣ ಕ್ರಮ ತೆಗೆದುಕೊಳ್ಳದ ಸರ್ಕಾರದ ನೀತಿಗೆ RSS ಮುಖಂಡ ಅರವಿಂದ್ ರಾವ್ ದೇಶಪಾಂಡೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಲವ್ ಜಿಹಾದ್ ಮೇಲೆ ಕಠಿಣ ಕ್ರಮ ಜರುಗಿಸದೇ ಹೋದಲ್ಲಿ, ನಾವೂ ಹಿಂದೂ ಜಿಹಾದ್ ಪ್ರಾರಂಭಿಸಬೇಕಾಗುತ್ತೆ ಎಂದಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *