Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

43 ವಯಸ್ಸು ಅಂತ ಚಿಂತೆ ಬೇಡ.. PDO ಹುದ್ದೆಗೆ ನೀವೂ ಅರ್ಜಿ ಹಾಕಬಹುದು..!

Facebook
Twitter
Telegram
WhatsApp

ಬೆಂಗಳೂರು: ಎಷ್ಟೋ ಯುವಕ-ಯುವತಿಯರು ಸರ್ಕಾರಿ ಕೆಲಸಕ್ಕಾಗಿ ತಮ್ಮಿಡಿ ಜೀವನವನ್ನ ಮುಡಿಪಾಗಿಟ್ಟು ಓದುತ್ತಾ ಇರುತ್ತಾರೆ. ಆದರೆ ಎಲ್ಲರಿಗೂ ಸರ್ಕಾರಿ ಕೆಲಸಕ್ಕೆ ಹೋಗುವ ಅದೃಷ್ಟವೂ ಇರುವುದಿಲ್ಲ, ಕೆಲಸವೂ ಸಿಗುವುದಿಲ್ಲ. ವಯಸ್ಸು ಮೀರುತ್ತೆ. ಆದ್ರೀಗ ಅರ್ಜಿ ಆಹ್ವಾನಿಸಿರುವ ಪಿಡಿಓ ಹುದ್ದೆಗೆ ವಯಸ್ಸಿನ ಮಿತಿಯನ್ನು ಹೆಚ್ಚಾಗಿಯೇ ನೀಡಿದ್ದಾರೆ. 43 ವರ್ಷವಾಗಿದ್ದರು ಅರ್ಜಿ ಹಾಕಬಹುದು, ಕೆಲಸ ಪಡೆಯಬಹುದು. ಹೇಗೆ ಎಂಬ ಮಾಹಿತಿ ಮುಂದಿದೆ ನೋಡಿ.

ಗ್ರಾಮೀಣಾಭಿವೃದ್ಧಿ ಪಂಚಾಯತ್ ರಾಜ್ ಇಲಾಖೆ ವತಿಯಿಂದ ಪಿಡಿಓ ಹುದ್ದೆಗಳಿಗೆ ಅರ್ಜಿ ಆಹ್ವಾನ ಮಾಡಿದೆ. ಕರ್ನಾಟಕ ಲೋಕಸೇವಾ ಆಯೋಗ ಆದೇಶವನ್ನು ಹೊರಡಿಸಿದೆ. ರಾಜ್ಯ ಸಿವಿಲ್ ಸೇವೆಗಳಲ್ಲಿನ ವಿವಿಧ ಇಲಾಖೆಗಳ ಗ್ರೂಪ್ ಸಿ ಹಾಗೂ ಗ್ರೂಪ್ ಬಿ ಹುದ್ದೆಗಳಿಗೆ ನೇರ ನೇಮಕಾತಿಯನ್ನು ಮಾಡಲಾಗುತ್ತದೆ. ಈಗಾಗಲೇ ಹೊರಡಿಸಿರುವ ಅಧಿಸೂಚನೆ ಮತ್ತು ಮುಂದಿನ ಒಂದು ವರ್ಷದಲ್ಲಿ ಹೊರಡಿಸಲಿರುವ ಅಧಿಸೂಚನೆಗಳಿಗೆ ಸಂಬಂಧಿಸಿದಂತೆ ಎಲ್ಲಾ ಪ್ರವರ್ಗದ ಅಭ್ಯರ್ಥಿಗಳಿಗೆ ಒಂದು ಬಾರಿಗೆ ಅನ್ವಯವಾಗುವಂತೆ ಗರಿಷ್ಠ ವಯೋಮಿತಿಯಲ್ಲಿ ಮೂರು ವರ್ಷಗಳ ಸಡಿಲಿಕೆ ನೀಡಿ, ಆದೇಶಿಸಲಾಗಿದೆ.

ಪಿಡಿಒ ಉಳಿಕೆ ಹುದ್ದೆಗಳು 150 ಪೋಸ್ಟ್ ಗಳಿವೆ. ಅದಕ್ಕೆ ಅಪ್ಲೈ ಮಾಡುವವರು ಯಾವುದಾದರೂ ಸರಿ ಡಿಗ್ರಿ ಪಾಸಾಗಿರಬೇಕು. ಹೈದರಬಾದ್ ವೃಂದದಲ್ಲಿ 97 ಹುದ್ದೆಗಳಿದ್ದು, ಒಟ್ಟು 247 ಹುದ್ದೆಗಳು ಖಾಲಿ ಇದಾವೆ.

ಅರ್ಜಿ ಸಲ್ಲಿಸಲು ಕನಿಷ್ಠ-18 ವರ್ಷಗಳು ಪೂರ್ಣವಾಗಿರಬೇಕು

ಸಾಮಾನ್ಯ ವರ್ಗದವರಿಗೆ- 35 ವರ್ಷಗಳು ಇದ್ದಿದ್ದನ್ನ 38 ವರ್ಷಗಳು ಮಾಡಲಾಗಿದೆ.

2ಎ, 2ಬಿ, 3ಎ, 3ಬಿ, 38- 38 ವರ್ಷಗಳು ಇರುವುದನ್ನ 41 ವರ್ಷಕ್ಕೆ ಏರಿಕೆ ಮಾಡಿದೆ.

ಎಸ್​​ಸಿ, ಎಸ್​ಟಿ, ಪ್ರವರ್ಗ1- 40 ವರ್ಷ ಇದ್ದಿದ್ದನ್ನ 43 ವರ್ಷಕ್ಕೆ ಏರಿಸಲಾಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

43 ವಯಸ್ಸು ಅಂತ ಚಿಂತೆ ಬೇಡ.. PDO ಹುದ್ದೆಗೆ ನೀವೂ ಅರ್ಜಿ ಹಾಕಬಹುದು..!

ಬೆಂಗಳೂರು: ಎಷ್ಟೋ ಯುವಕ-ಯುವತಿಯರು ಸರ್ಕಾರಿ ಕೆಲಸಕ್ಕಾಗಿ ತಮ್ಮಿಡಿ ಜೀವನವನ್ನ ಮುಡಿಪಾಗಿಟ್ಟು ಓದುತ್ತಾ ಇರುತ್ತಾರೆ. ಆದರೆ ಎಲ್ಲರಿಗೂ ಸರ್ಕಾರಿ ಕೆಲಸಕ್ಕೆ ಹೋಗುವ ಅದೃಷ್ಟವೂ ಇರುವುದಿಲ್ಲ, ಕೆಲಸವೂ ಸಿಗುವುದಿಲ್ಲ. ವಯಸ್ಸು ಮೀರುತ್ತೆ. ಆದ್ರೀಗ ಅರ್ಜಿ ಆಹ್ವಾನಿಸಿರುವ ಪಿಡಿಓ

Tirumala Laddu : ತಿರುಪತಿ ಲಡ್ಡುವಿನಲ್ಲಿ ಪ್ರಾಣಿಗಳ ಕೊಬ್ಬು : ಬಿಡುಗಡೆಯಾದ ಲ್ಯಾಬ್ ವರದಿಯಲ್ಲೇನಿದೆ ?

ಸುದ್ದಿಒನ್, ತಿರುಮಲ, ಸೆಪ್ಟೆಂಬರ್. 19 : ಆಂಧ್ರಪ್ರದೇಶದಲ್ಲಿ ತಿರುಮಲ ತಿರುಪತಿ ಲಡ್ಡು ವಿಚಾರ ಬಾರೀ ಸದ್ದು ಮಾಡುತ್ತಿದೆ. ವೈಸಿಪಿ ಆಡಳಿತದಲ್ಲಿ ಲಡ್ಡೂಗಳಿಗೆ ಪ್ರಾಣಿಗಳ ಕೊಬ್ಬನ್ನು ಬಳಸಲಾಗುತ್ತಿತ್ತು ಎಂಬ ಸಿಎಂ ಚಂದ್ರಬಾಬು ಹೇಳಿಕೆ ಸಂಚಲನ ಮೂಡಿಸಿತ್ತು.

ಸೆಪ್ಟೆಂಬರ್ 21 ರಂದು ದಾವಣಗೆರೆಯಲ್ಲಿ ಉದ್ಯೋಗ ಮೇಳ

ದಾವಣಗೆರೆ,ಸೆಪ್ಟೆಂಬರ್.19 : ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಇವರ ವತಿಯಿಂದ ಸೆ.21 ರಂದು ಬೆಳಗ್ಗೆ 10 ಗಂಟೆಗೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಕೊಠಡಿ ಸಂಖ್ಯೆ-51,  ಜಿಲ್ಲಾಧಿಕಾರಿಗಳ ಕಚೇರಿ, ದಾವಣಗೆರೆ ಇಲ್ಲಿ ಉದ್ಯೋಗಮೇಳ ಆಯೋಜಿಸಲಾಗಿದೆ.

error: Content is protected !!