Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

43 ವಯಸ್ಸು ಅಂತ ಚಿಂತೆ ಬೇಡ.. PDO ಹುದ್ದೆಗೆ ನೀವೂ ಅರ್ಜಿ ಹಾಕಬಹುದು..!

---Advertisement---

ಬೆಂಗಳೂರು: ಎಷ್ಟೋ ಯುವಕ-ಯುವತಿಯರು ಸರ್ಕಾರಿ ಕೆಲಸಕ್ಕಾಗಿ ತಮ್ಮಿಡಿ ಜೀವನವನ್ನ ಮುಡಿಪಾಗಿಟ್ಟು ಓದುತ್ತಾ ಇರುತ್ತಾರೆ. ಆದರೆ ಎಲ್ಲರಿಗೂ ಸರ್ಕಾರಿ ಕೆಲಸಕ್ಕೆ ಹೋಗುವ ಅದೃಷ್ಟವೂ ಇರುವುದಿಲ್ಲ, ಕೆಲಸವೂ ಸಿಗುವುದಿಲ್ಲ. ವಯಸ್ಸು ಮೀರುತ್ತೆ. ಆದ್ರೀಗ ಅರ್ಜಿ ಆಹ್ವಾನಿಸಿರುವ ಪಿಡಿಓ ಹುದ್ದೆಗೆ ವಯಸ್ಸಿನ ಮಿತಿಯನ್ನು ಹೆಚ್ಚಾಗಿಯೇ ನೀಡಿದ್ದಾರೆ. 43 ವರ್ಷವಾಗಿದ್ದರು ಅರ್ಜಿ ಹಾಕಬಹುದು, ಕೆಲಸ ಪಡೆಯಬಹುದು. ಹೇಗೆ ಎಂಬ ಮಾಹಿತಿ ಮುಂದಿದೆ ನೋಡಿ.

ಗ್ರಾಮೀಣಾಭಿವೃದ್ಧಿ ಪಂಚಾಯತ್ ರಾಜ್ ಇಲಾಖೆ ವತಿಯಿಂದ ಪಿಡಿಓ ಹುದ್ದೆಗಳಿಗೆ ಅರ್ಜಿ ಆಹ್ವಾನ ಮಾಡಿದೆ. ಕರ್ನಾಟಕ ಲೋಕಸೇವಾ ಆಯೋಗ ಆದೇಶವನ್ನು ಹೊರಡಿಸಿದೆ. ರಾಜ್ಯ ಸಿವಿಲ್ ಸೇವೆಗಳಲ್ಲಿನ ವಿವಿಧ ಇಲಾಖೆಗಳ ಗ್ರೂಪ್ ಸಿ ಹಾಗೂ ಗ್ರೂಪ್ ಬಿ ಹುದ್ದೆಗಳಿಗೆ ನೇರ ನೇಮಕಾತಿಯನ್ನು ಮಾಡಲಾಗುತ್ತದೆ. ಈಗಾಗಲೇ ಹೊರಡಿಸಿರುವ ಅಧಿಸೂಚನೆ ಮತ್ತು ಮುಂದಿನ ಒಂದು ವರ್ಷದಲ್ಲಿ ಹೊರಡಿಸಲಿರುವ ಅಧಿಸೂಚನೆಗಳಿಗೆ ಸಂಬಂಧಿಸಿದಂತೆ ಎಲ್ಲಾ ಪ್ರವರ್ಗದ ಅಭ್ಯರ್ಥಿಗಳಿಗೆ ಒಂದು ಬಾರಿಗೆ ಅನ್ವಯವಾಗುವಂತೆ ಗರಿಷ್ಠ ವಯೋಮಿತಿಯಲ್ಲಿ ಮೂರು ವರ್ಷಗಳ ಸಡಿಲಿಕೆ ನೀಡಿ, ಆದೇಶಿಸಲಾಗಿದೆ.

ಪಿಡಿಒ ಉಳಿಕೆ ಹುದ್ದೆಗಳು 150 ಪೋಸ್ಟ್ ಗಳಿವೆ. ಅದಕ್ಕೆ ಅಪ್ಲೈ ಮಾಡುವವರು ಯಾವುದಾದರೂ ಸರಿ ಡಿಗ್ರಿ ಪಾಸಾಗಿರಬೇಕು. ಹೈದರಬಾದ್ ವೃಂದದಲ್ಲಿ 97 ಹುದ್ದೆಗಳಿದ್ದು, ಒಟ್ಟು 247 ಹುದ್ದೆಗಳು ಖಾಲಿ ಇದಾವೆ.

ಅರ್ಜಿ ಸಲ್ಲಿಸಲು ಕನಿಷ್ಠ-18 ವರ್ಷಗಳು ಪೂರ್ಣವಾಗಿರಬೇಕು

ಸಾಮಾನ್ಯ ವರ್ಗದವರಿಗೆ- 35 ವರ್ಷಗಳು ಇದ್ದಿದ್ದನ್ನ 38 ವರ್ಷಗಳು ಮಾಡಲಾಗಿದೆ.

2ಎ, 2ಬಿ, 3ಎ, 3ಬಿ, 38- 38 ವರ್ಷಗಳು ಇರುವುದನ್ನ 41 ವರ್ಷಕ್ಕೆ ಏರಿಕೆ ಮಾಡಿದೆ.

ಎಸ್​​ಸಿ, ಎಸ್​ಟಿ, ಪ್ರವರ್ಗ1- 40 ವರ್ಷ ಇದ್ದಿದ್ದನ್ನ 43 ವರ್ಷಕ್ಕೆ ಏರಿಸಲಾಗಿದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment