Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ದಾವಣಗೆರೆಯಲ್ಲಿ ಡಿಸೆಂಬರ್ 23, 24 ಮತ್ತು 25 ರಂದು ದೋಸೋತ್ಸವ : ಗ್ರಾಹಕರಿಗೆ ಗುಣಮಟ್ಟದ ಬೆಣ್ಣೆದೋಸೆಗಳನ್ನು ನೀಡಲು ಜಿಲ್ಲಾಧಿಕಾರಿ ಸೂಚನೆ

---Advertisement---

ದಾವಣಗೆರೆ, ಡಿ.16: ಅಂತರಾಷ್ಟ್ರೀಯ ಮಟ್ಟದಲ್ಲಿ ದಾವಣಗೆರೆ ಬೆಣ್ಣೆ ದೋಸೆಯನ್ನು ಜನಪ್ರಿಯಗೊಳಿಸುವ ಉದ್ದೇಶದಿಂದ ಡಿ.23, 24 ಮತ್ತು 25 ರಂದು ದೋಸೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು ಗ್ರಾಹಕರಿಗೆ ಉತ್ತಮ ಗುಣಮಟ್ಟದ ಬೆಣ್ಣೆದೋಸೆಯನ್ನು ನೀಡಲು ಜಿಲ್ಲಾಧಿಕಾರಿ ಡಾ.ವೆಂಕಟೇಶ್ ಎಂ.ವಿ ಬೆಣ್ಣೆ ದೋಸೆ ಹೋಟೇಲ್ ಮಾಲೀಕರಿಗೆ ಸೂಚಿಸಿದರು.

ಶನಿವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ದೋಸೋತ್ಸವದ ಕುರಿತಂತೆ ಬೆಣ್ಣೆ ದೋಸೆ ಹೋಟೆಲ್ ಮಾಲೀಕರೊಂದಿಗೆ ನಡೆಸಿದ ಪೂರ್ವಭಾವಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತಾನಾಡಿದರು.

ದಾವಣಗೆರೆ ಬೆಣ್ಣೆದೋಸೆಗೆ ಬ್ರಾಂಡಿಂಗ್ ನೀಡುವ ಉದ್ದೇಶದಿಂದ ಡಿ.23, 24 ಮತ್ತು 25 ರಂದು ನಗರದ ಬಾಪೂಜಿ ಎಂಬಿಎ ಮೈದಾನ ಮತ್ತು ಗ್ಲಾಸ್‍ಹೌಸ್ ಮುಂಭಾಗದಲ್ಲಿ ದೋಸೋತ್ಸವವನ್ನು ಹಮ್ಮಿಕೊಳ್ಳಲಾಗಿದೆ ಬೆಳಿಗ್ಗೆ 8 ರಿಂದ ದೋಸೋತ್ಸವ ಪ್ರಾರಂಭವಾಗಲಿದ್ದು, ಒಂದು ಬೆಣ್ಣೆ ದೋಸೆಗೆ ರೂ.60/- ಹಾಗೂ 1 ಪ್ಲೇಟ್ ಖಾಲಿ ದೋಸೆಗೆ ರೂ.60/- ಗಳನ್ನು ನಿಗಧಿಪಡಿಸಲಾಗಿದೆ. ದೋಸೆ ಅಂಗಡಿ ಮಾಲೀಕರು ಕಾರ್ಯಕ್ರಮದಲ್ಲಿ ಯಾವುದೇ ಒತ್ತಡಕ್ಕೆ ಒಳಗಾಗದೇ ಸುಲಭ ವಿಧಾನ ಅನುಸರಿಸಬೇಕು. ಹಾಗೂ ಟೋಕನ್ ವ್ಯವಸ್ಥೆ ಮಾಡಿಕೊಳ್ಳಬೇಕು.

ಡಿ.23, 24 ರಂದು ವೀರಶೈವ ಅಧೀವೇಶನವಿರುವುದರಿಂದ ಜನಸಂದಣೆ ಹೆಚ್ಚಾಗಿರುವುದರಿಂದ ಗ್ರಾಹಕರಿಗೆ ಅರೆಬರೆ ಬೇಯಿಸಿದ ದೋಸೆಗಳನ್ನು ನೀಡದೇ ಉತ್ತಮ ಗುಣಮಟ್ಟದ ಬೆಣ್ಣೆದೋಸೆಗಳನ್ನು ನೀಡಬೇಕು. ದೋಸೆ ಸ್ಟಾಲ್‍ಗಳಲ್ಲಿ ಶುದ್ದ ಕುಡಿಯುವ ನೀರಿನ ವ್ಯವಸ್ಥೆ, ಕಸದ ಡಬ್ಬಿಗಳ ವ್ಯವಸ್ಥೆ ಹಾಗೂ ಶುಚಿತ್ವವನ್ನು ಕಾಪಾಡಿಕೊಳ್ಳಬೇಕೆಂದರು.

ಹೋಟೆಲ್ ಮಾಲೀಕರು ತ್ಯಾಜ್ಯ ಪದಾರ್ಥಗಳನ್ನು ಆಗಿಂದಾಗ್ಗೆ ವಿಲೇವಾರಿ ಮಾಡಬೇಕು. ದೋಸೆ ತಯಾರಿಕೆಯಲ್ಲಿ ರಾಸಾಯನಿಕಗಳನ್ನು ಬಳಸಬಾರದು. ಸಂಬಂಧಿಸಿದ ಅಧಿಕಾರಿಗಳು ದೋಸೆಯ ಗುಣಮಟ್ಟ, ದೋಸೆಯ ರುಚಿ ತಪಸಾಣೆ ಸ್ಟಾಲ್ ಗಳ ವ್ಯವಸ್ಥೆಗಳನ್ನು ಸೂಕ್ಷ್ಮವಾಗಿ ಪರಿಶೀಲಿಸಬೇಕು.

ಅಪರ ಜಿಲ್ಲಾಧಿಕಾರಿ ಪಿ.ಎನ್ ಲೋಕೇಶ್, ಉಪವಿಭಾಗಾಧಿಕಾರಿ ದುರ್ಗಾಶ್ರೀ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಉಪನಿರ್ದೇಶಕ ಸಿದ್ದರಾಮ ಮರಿಹಾಳ್, ದಾವಣಗೆರೆ ತಾಲ್ಲೂಕು ತಹಶೀಲ್ದಾರ್ ಡಾ.ಎಂ.ಬಿ ಅಶ್ವಥ್, ಜಿಲ್ಲಾ ಆರೋಗ್ಯಾಧಿಕಾರಿ ಡಾ.ಎಸ್ ಷಣ್ಮುಖಪ್ಪ, ಪಾಲಿಕೆ ಆಯುಕ್ತೆ ರೇಣುಕಾ ಹಾಗೂ ಹೋಟೆಲ್ ಮಾಲೀಕರು ಉಪಸ್ಥಿತರಿದ್ದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment