ದಾವಣಗೆರೆಯಲ್ಲಿ ಡಿಸೆಂಬರ್ 23, 24 ಮತ್ತು 25 ರಂದು ದೋಸೋತ್ಸವ : ಗ್ರಾಹಕರಿಗೆ ಗುಣಮಟ್ಟದ ಬೆಣ್ಣೆದೋಸೆಗಳನ್ನು ನೀಡಲು ಜಿಲ್ಲಾಧಿಕಾರಿ ಸೂಚನೆ

ದಾವಣಗೆರೆ, ಡಿ.16: ಅಂತರಾಷ್ಟ್ರೀಯ ಮಟ್ಟದಲ್ಲಿ ದಾವಣಗೆರೆ ಬೆಣ್ಣೆ ದೋಸೆಯನ್ನು ಜನಪ್ರಿಯಗೊಳಿಸುವ ಉದ್ದೇಶದಿಂದ ಡಿ.23, 24 ಮತ್ತು 25 ರಂದು ದೋಸೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು ಗ್ರಾಹಕರಿಗೆ ಉತ್ತಮ ಗುಣಮಟ್ಟದ ಬೆಣ್ಣೆದೋಸೆಯನ್ನು ನೀಡಲು ಜಿಲ್ಲಾಧಿಕಾರಿ ಡಾ.ವೆಂಕಟೇಶ್ ಎಂ.ವಿ ಬೆಣ್ಣೆ ದೋಸೆ ಹೋಟೇಲ್ ಮಾಲೀಕರಿಗೆ ಸೂಚಿಸಿದರು.

ಶನಿವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ದೋಸೋತ್ಸವದ ಕುರಿತಂತೆ ಬೆಣ್ಣೆ ದೋಸೆ ಹೋಟೆಲ್ ಮಾಲೀಕರೊಂದಿಗೆ ನಡೆಸಿದ ಪೂರ್ವಭಾವಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತಾನಾಡಿದರು.

ದಾವಣಗೆರೆ ಬೆಣ್ಣೆದೋಸೆಗೆ ಬ್ರಾಂಡಿಂಗ್ ನೀಡುವ ಉದ್ದೇಶದಿಂದ ಡಿ.23, 24 ಮತ್ತು 25 ರಂದು ನಗರದ ಬಾಪೂಜಿ ಎಂಬಿಎ ಮೈದಾನ ಮತ್ತು ಗ್ಲಾಸ್‍ಹೌಸ್ ಮುಂಭಾಗದಲ್ಲಿ ದೋಸೋತ್ಸವವನ್ನು ಹಮ್ಮಿಕೊಳ್ಳಲಾಗಿದೆ ಬೆಳಿಗ್ಗೆ 8 ರಿಂದ ದೋಸೋತ್ಸವ ಪ್ರಾರಂಭವಾಗಲಿದ್ದು, ಒಂದು ಬೆಣ್ಣೆ ದೋಸೆಗೆ ರೂ.60/- ಹಾಗೂ 1 ಪ್ಲೇಟ್ ಖಾಲಿ ದೋಸೆಗೆ ರೂ.60/- ಗಳನ್ನು ನಿಗಧಿಪಡಿಸಲಾಗಿದೆ. ದೋಸೆ ಅಂಗಡಿ ಮಾಲೀಕರು ಕಾರ್ಯಕ್ರಮದಲ್ಲಿ ಯಾವುದೇ ಒತ್ತಡಕ್ಕೆ ಒಳಗಾಗದೇ ಸುಲಭ ವಿಧಾನ ಅನುಸರಿಸಬೇಕು. ಹಾಗೂ ಟೋಕನ್ ವ್ಯವಸ್ಥೆ ಮಾಡಿಕೊಳ್ಳಬೇಕು.

ಡಿ.23, 24 ರಂದು ವೀರಶೈವ ಅಧೀವೇಶನವಿರುವುದರಿಂದ ಜನಸಂದಣೆ ಹೆಚ್ಚಾಗಿರುವುದರಿಂದ ಗ್ರಾಹಕರಿಗೆ ಅರೆಬರೆ ಬೇಯಿಸಿದ ದೋಸೆಗಳನ್ನು ನೀಡದೇ ಉತ್ತಮ ಗುಣಮಟ್ಟದ ಬೆಣ್ಣೆದೋಸೆಗಳನ್ನು ನೀಡಬೇಕು. ದೋಸೆ ಸ್ಟಾಲ್‍ಗಳಲ್ಲಿ ಶುದ್ದ ಕುಡಿಯುವ ನೀರಿನ ವ್ಯವಸ್ಥೆ, ಕಸದ ಡಬ್ಬಿಗಳ ವ್ಯವಸ್ಥೆ ಹಾಗೂ ಶುಚಿತ್ವವನ್ನು ಕಾಪಾಡಿಕೊಳ್ಳಬೇಕೆಂದರು.

ಹೋಟೆಲ್ ಮಾಲೀಕರು ತ್ಯಾಜ್ಯ ಪದಾರ್ಥಗಳನ್ನು ಆಗಿಂದಾಗ್ಗೆ ವಿಲೇವಾರಿ ಮಾಡಬೇಕು. ದೋಸೆ ತಯಾರಿಕೆಯಲ್ಲಿ ರಾಸಾಯನಿಕಗಳನ್ನು ಬಳಸಬಾರದು. ಸಂಬಂಧಿಸಿದ ಅಧಿಕಾರಿಗಳು ದೋಸೆಯ ಗುಣಮಟ್ಟ, ದೋಸೆಯ ರುಚಿ ತಪಸಾಣೆ ಸ್ಟಾಲ್ ಗಳ ವ್ಯವಸ್ಥೆಗಳನ್ನು ಸೂಕ್ಷ್ಮವಾಗಿ ಪರಿಶೀಲಿಸಬೇಕು.

ಅಪರ ಜಿಲ್ಲಾಧಿಕಾರಿ ಪಿ.ಎನ್ ಲೋಕೇಶ್, ಉಪವಿಭಾಗಾಧಿಕಾರಿ ದುರ್ಗಾಶ್ರೀ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಉಪನಿರ್ದೇಶಕ ಸಿದ್ದರಾಮ ಮರಿಹಾಳ್, ದಾವಣಗೆರೆ ತಾಲ್ಲೂಕು ತಹಶೀಲ್ದಾರ್ ಡಾ.ಎಂ.ಬಿ ಅಶ್ವಥ್, ಜಿಲ್ಲಾ ಆರೋಗ್ಯಾಧಿಕಾರಿ ಡಾ.ಎಸ್ ಷಣ್ಮುಖಪ್ಪ, ಪಾಲಿಕೆ ಆಯುಕ್ತೆ ರೇಣುಕಾ ಹಾಗೂ ಹೋಟೆಲ್ ಮಾಲೀಕರು ಉಪಸ್ಥಿತರಿದ್ದರು.

suddionenews

Recent Posts

ಕಬೀರಾನಂದಾಶ್ರಮಕ್ಕೆ ಯಾವುದೆ ಜಾತಿ, ಧರ್ಮ ಇಲ್ಲ, ಎಲ್ಲರೂ ಸಮಾನರು : ಡಾ.ಬಸವಕುಮಾರ ಸ್ವಾಮೀಜಿ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ. ಫೆ. 23…

11 minutes ago

ಸಚಿನ್ ದಾಖಲೆ ಮುರಿದ ಕಿಂಗ್ ಕೊಹ್ಲಿ : ವಿಶೇಷತೆ ಏನು ಗೊತ್ತಾ?

  ಸುದ್ದಿಒನ್ ವಿರಾಟ್ ಕೊಹ್ಲಿ 14,000 ಏಕದಿನ ರನ್ ಗಳಿಸಿದ ವೇಗದ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗುವ ಮೂಲಕ ಸಚಿನ್…

48 minutes ago

ವಿಜಯೇಂದ್ರ ನೇತೃತ್ವದಲ್ಲಿಯೇ ತಾಲೂಕು, ಜಿಲ್ಲಾ ಪಂಚಾಯತಿಗೆ ಸ್ಪರ್ಧೆ : ರೇಣುಕಾಚಾರ್ಯ

    ದಾವಣಗೆರೆ; ರಾಜ್ಯದಲ್ಲಿ ಇನ್ನೇನು ತಾಲೂಕು, ಜಿಲ್ಲಾ ಪಂಚಾಯತಿಗಳ ಚುನಾವಣೆಗೆ ದಿನಾಂಕ ಘೋಷಣೆಯಾಗಲಿದೆ. ಈ ಸಂಬಂಧ ರೇಣುಕಾಚಾರ್ಯ ಅವರು…

1 hour ago

ತುಮಕೂರಿನ ಈ ಪ್ರದೇಶಗಳಲ್ಲಿ ಫೆಬ್ರವರಿ 24 , 27 ಹಾಗೂ 28ರಂದು ವಿದ್ಯುತ್ ವ್ಯತ್ಯಯ…!

  ತುಮಕೂರು: ಬೆಸ್ಕಾಂ ತುಮಕೂರು ನಗರ ಉಪ ವಿಭಾಗ 1ರ ವ್ಯಾಪ್ತಿಯಲ್ಲಿ ಅಟಲ್ ಭೂ ಜಲ ಯೋಜನೆಯಡಿಯಲ್ಲಿ ಪ್ರತ್ಯೇಕ ಕೃಷಿ…

1 hour ago

ಭಾರತ vs ಪಾಕಿಸ್ತಾನ : 25 ವರ್ಷಗಳ ಹಳೆಯ ದಾಖಲೆ ಮುರಿದ ಕಿಂಗ್ ಕೊಹ್ಲಿ

    ಸುದ್ದಿಒನ್ ಪ್ರತಿಯೊಬ್ಬ ಭಾರತೀಯ ಅಭಿಮಾನಿಯೂ ಟೀಮ್ ಇಂಡಿಯಾದ ಸ್ಟಾರ್ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ ಬ್ಯಾಟ್‌ನಿಂದ ರನ್‌ಗಳನ್ನು ನಿರೀಕ್ಷಿಸುತ್ತಾರೆ.…

2 hours ago

ಮಕ್ಕಳ ಮನಸ್ಸು ಜಂಕ್ ಪುಡ್ ಕಡೆಗೆ ಜಾರದಂತೆ ಜಾಗೃತಿ ವಹಿಸಿ : ಡಾ. ಪೃಥ್ವೀಶ್

  ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 23 : ಮಕ್ಕಳ ಅರೋಗ್ಯದ ಬಗ್ಗೆ ಹೆಚ್ಚಿನ ಲಕ್ಷ್ಯವಹಿಸಿ ಜಂಕ್ ಪುಡ್ ಕಡೆಗೆ ಅವರ…

4 hours ago