Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಡಾ. ಆನಂದ ಸಂಕೇಶ್ವರರಿಗೆ ಪ್ರತಿಷ್ಠಿತ ಸಿಬಾ ಪ್ರಶಸ್ತಿ ಪ್ರದಾನ

---Advertisement---

ಸುದ್ದಿಒನ್

ಸಾರಿಗೆ ಕ್ಷೇತ್ರದ ದಿಗ್ಗಜ ವಿಆರ್​ಎಲ್​ ಸಮೂಹ ಸಂಸ್ಥೆಗಳ ವ್ಯವಸ್ಥಾಪಕ ನಿರ್ದೇಶಕ ಡಾ. ಆನಂದ ಸಂಕೇಶ್ವರ ಅವರಿಗೆ ಸೌತ್​ ಇಂಡಿಯಾ ಬಿಸಿನೆಸ್​ ಅವಾರ್ಡ್ಸ್​ ಪುರಸ್ಕಾರ ಸಂದಿದ್ದು, ದುಬೈನಲ್ಲಿ ನಡೆದ ಸಮಾರಂಭದಲ್ಲಿ ಅವರನ್ನು ಗೌರವಿಸಲಾಯಿತು.

ದುಬೈನ ಅಲ್​ ಹಬ್ತೂರ್​ ಪ್ಯಾಲೇಸ್​ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾರತದ ಮಾಜಿ ಯುಎಇ ರಾಯಭಾರಿ ಹಾಗೂ ಎಎಜಿ ಚೇರ್ಮನ್​ ಡಾ. ಅಹ್ಮದ್​ ಅಬ್ದುಲ್​ ರೆಹಮಾನ್​ ಅಲ್ಬನ್ನಾ ಅವರು ಪ್ರಶಸ್ತಿ ಪ್ರದಾನ ಮಾಡಿದರು.

ಉದ್ಯಮ, ಸಂಸ್ಕೃತಿ ಮತ್ತು ವಾಣಿಜ್ಯ ವಲಯದಲ್ಲಿ ಜಾಗತಿಕವಾಗಿ ಪ್ರಭಾವ ಬೀರಿರುವವರನ್ನು ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಇದೇ ಸಂದರ್ಭದಲ್ಲಿ, ಸೌತ್​ ಇಂಡಿಯಾ ಬಿಸಿನೆಸ್​ ಅವಾರ್ಡ್ಸ್​ ಪರಿಚಯಿಸಿರುವ ಸೌತ್​ ಪವರ್​ಲಿಸ್ಟ್​-100 ಅನ್ನು ಅನಾವರಣಗೊಳಿಸಲಾಯಿತು.

ವಿಆರ್​ಎಲ್​ ಸಮೂಹದ ಎಂಡಿ ಡಾ. ಆನಂದ ಸಂಕೇಶ್ವರ ಅವರು 2025ರ ಪ್ರಶಸ್ತಿ ಪುರಸ್ಕೃತರಲ್ಲಿ ಒಬ್ಬರಾಗಿದ್ದಾರೆ. ವಿಆರ್​ಎಲ್​ ಸಂಸ್ಥೆಯನ್ನು ದೇಶದ ಅತಿ ದೊಡ್ಡ ಸಾರಿಗೆ ಕಂಪನಿಯಾಗಿ, ಪ್ರಮಾಣ ಹಾಗೂ ಕಾರ್ಯಾಚರಣೆ ದಕ್ಷತೆಯಲ್ಲಿ ಅತ್ಯಂತ ವಿಶ್ವಾಸಾರ್ಹತೆಯನ್ನು ಉಳಿಸಿಕೊಂಡು ಬೆಳೆಸುವಲ್ಲಿ ಕೊಡುಗೆ ನೀಡುವುದನ್ನು ಮುಂದುವರಿಸಿದ್ದಾರೆ. ಈ ಗೌರವ ಕೇವಲ ವ್ಯಾಪಾರದ ಯಶಸ್ಸನ್ನು ಮಾತ್ರವಲ್ಲ ಲಾಜಿಸ್ಟಿಕ್ಸ್​ ಮೂಲಕ ಬೆಳವಣಿಗೆ ಮತ್ತು ದೇಶದ ಏಕೀಕರಣದಲ್ಲಿ ಅವರ ಪ್ರಮುಖ ಪಾತ್ರವನ್ನು ಎತ್ತಿ ತೋರಿಸುತ್ತದೆ ಎಂದು ಸಂಘಟಕರು ಹೇಳಿದ್ದಾರೆ.

ಸೌತ್​ ಪವರ್​ಲಿಸ್ಟ್​ 100 ರಲ್ಲಿ ಇರುವ ಹಲವು ರಂಗಗಳ ಸಾಧಕರನ್ನೂ ಗೌರವಿಸಲಾಯಿತು. ಈ ಪಟ್ಟಿಯು ಉದ್ಯಮಗಳು ಮತ್ತು ಪರಂಪರೆಯಲ್ಲಿ ನಾಯಕತ್ವದ ವೈವಿಧ್ಯತೆಯನ್ನು ಪ್ರತಿಬಿಂಬಿಸುತ್ತದೆ. ಒಟ್ಟಾರೆಯಾಗಿ ಈ ಗೌರವಾನ್ವಿತರು ಜಾಗತಿಕ ವೇದಿಕೆಯಲ್ಲಿ ದಣ ಭಾರತದ ದೂರದೃಷ್ಟಿ ಮತ್ತು ಚೈತನ್ಯವನ್ನು ಪ್ರತಿನಿಧಿಸಿದ್ದಾರೆ ಎಂದು ಎಸ್​ಐಬಿಎ ಹೇಳಿದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now