ಚಿತ್ರದುರ್ಗ. ಮೇ.20: “ಹೆಸರಾಯಿತು ಕರ್ನಾಟಕ, ಉಸಿರಾಗಲಿ ಕನ್ನಡ” ಪ್ರಸಾರ ಭಾರತಿ ಆಕಾಶವಾಣಿಯ ಕನ್ನಡ ಅಭಿಯಾನದ ಅಂಗವಾಗಿ ನಾಡು-ನುಡಿ ಸಂಸ್ಕøತಿಯ ಕುರಿತಾದ ವಿಶೇಷ ಸಂದರ್ಶನ ಸರಣಿಯಲ್ಲಿ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷರು ಹಾಗೂ ಪ್ರಸ್ತುತ ಹಂಪಿ ಕನ್ನಡ ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯರಾದ ಡಾ.ಬಂಜಗೆರೆ ಜಯಪ್ರಕಾಶ್ ಅವರೊಂದಿಗೆ ಆಕಾಶವಾಣಿಯ ಡಾ.ನವೀನ್ ಮಸ್ಕಲ್ ನಡೆಸಿದ ವಿಶೇಷ ಸಂದರ್ಶನ ಭಾಗ-1 ಇದೇ ಮೇ.21ರಂದು ಬೆಳಿಗ್ಗೆ 8.30ಕ್ಕೆ ಪ್ರಸಾರವಾಗಲಿದೆ ಎಂದು ಪ್ರಸಾರ ಭಾರತಿ ಚಿತ್ರದುರ್ಗ ಆಕಾಶವಾಣಿ ಪ್ರಕಟಣೆ ತಿಳಿಸಿದೆ.




